ಸುಪ್ರೀಂ ಕೋರ್ಟ್‌ನಿಂದಲೂ ಕೇಜ್ರಿವಾಲ್‌ಗೆ ಸಿಗದ ಜಾಮೀನು!

Date:

Advertisements

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸುಪ್ರೀಂ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಇಂದು ಜಾಮೀನು ನೀಡಲಿಲ್ಲ. ವಿಚಾರಣೆಯನ್ನು ಕೋರ್ಟ್ ನಾಳೆ ಅಥವಾ ಮುಂದಿನ ವಾರ ಕೈಗೊಳ್ಳಲಿದೆ.

ಗೋವಾ ಚುನಾವಣಾ ಪ್ರಚಾರದ ವೇಳೆ ಕೇಜ್ರಿವಾಲ್ ಅವರು 7 ಸ್ಟಾರ್ ಹೋಟೆಲ್‌ನಲ್ಲಿ ತಂಗಿದ್ದು, ಈ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದೆಂದು ಜಾರಿ ನಿರ್ದೇಶನಾಲಯ ಪರ ಹಾಜರಿದ್ದ ಹೆಚ್ಚುವರಿ ಸಾಲಿಟರ್‌ ಜನರಲ್‌ ಎಸ್‌ ವಿ ರಾಜು ಅವರು ಕೋರ್ಟ್‌ಗೆ ಮನವರಿಕೆ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ಪೀಠವು, ಕೇಜ್ರಿವಾಲ್‌ ಅವರು ಚುನಾಯಿತ ನಾಯಕನಾಗಿದ್ದು, ಲೋಕಸಭೆಯಲ್ಲಿ ಪ್ರಚಾರ ಮಾಡಲು ಜಮೀನು ಅಗತ್ಯವಿದೆ ಎಂದು ತಿಳಿಸಿದರು.

Advertisements

ಈ ನಡುವೆ ದೆಹಲಿ ಹೈಕೋರ್ಟ್, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 20ರವರೆಗೂ ವಿಸ್ತರಿಸಿದೆ.

ಇಂದಿಗೆ ಕೇಜ್ರಿವಾಲ್‌ ಅವರ ನ್ಯಾಯಾಂಗದ ಅವಧಿ ಕೊನೆಗೊಂಡ ಕಾರಣ ವಿಶೇಷ ನ್ಯಾಯಾಧೀಶರಾದ ಕಾವೇರಿ ಬೇವಾಜ ಅವರು ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಅವರು ಜಾರಿ ನಿರ್ದೇಶನಾಲಯದಿಂದ  ಮಾರ್ಚ್‌ 21 ರಂದು ಬಂಧನಕ್ಕೊಳಗಾಗಿದ್ದು, ಏ.1 ರಿಂದ ತಿಹಾರ್‌ ಸೆರೆಮನೆಯಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ತಮ್ಮ ಬಂಧನದ ಆದೇಶ ಪ್ರಶ್ನಿಸಿ ಜಾಮೀನಿಗಾಗಿ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಇಂದು ವಿಚಾರಣೆ ನಡೆಯುತ್ತಿದೆ.

ದೆಹಲಿ ಅಬಕಾರಿ ಹಗರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಹಾಗೂ ಸಂಜಯ್‌ ಸಿಂಗ್‌ ಕೂಡ ಆರೋಪಿಗಳಾಗಿದ್ದು, ಸಂಜಯ್‌ ಸಿಂಗ್‌ ಜಾಮೀನು ಪಡೆದುಕೊಂಡಿದ್ದರೆ, ಮನೀಶ್ ಸಿಸೋಡಿಯಾ ಇನ್ನೂ ಸೆರೆಮನೆಯಲ್ಲಿದ್ದಾರೆ.

ಈ ನಡುವೆ ಅಮೆರಿಕ ಮೂಲದ ನಿಷೇಧಿತ ಖಲಿಸ್ತಾನ್‌ ಗುಂಪಿನ ‘ಸಿಖ್ಖರಿಗೆ ನ್ಯಾಯ’ ಚಳುವಳಿಯ ಸಂಘಟನೆಯಿಂದ ಹಣಕಾಸು ನೆರವು ಸ್ವೀಕರಿಸಿದ ಸಿಎಂ ಅರವಿಂದ್‌ ಕೇಜ್ರಿವಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಶಿಫಾರಸ್ಸು ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X