ಲೈಂಗಿಕ ದೌರ್ಜನ್ಯ ಪ್ರಕರಣ | ಜು. 18ರಂದು ಹಾಜರಾಗಲು ಬ್ರಿಜ್‌ ಭೂಷಣ್‌ ಸಿಂಗ್‌ಗೆ ಸಮನ್ಸ್ ಜಾರಿ

Date:

  • ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಎರಡು ಪ್ರಕರಣ ದಾಖಲು
  • ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಕುಸ್ತಿಪಟುಗಳು

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರಿಗೆ ದೆಹಲಿ ರೋಸ್‌ ಅವೆನ್ಯೂ ನ್ಯಾಯಾಲಯ ಶುಕ್ರವಾರ (ಜುಲೈ 7) ಸಮನ್ಸ್‌ ಜಾರಿ ಮಾಡಿದೆ.

- Advertisement -

ಆರೋಪಿ ವಿರುದ್ಧ ವಿಚಾರಣೆ ನಡೆಸಲು ಸೂಕ್ತ ದಾಖಲೆಗಳಿವೆ. ಅದಕ್ಕಾಗಿ ಬ್ರಿಜ್‌ ಭೂಷಣ್‌ ಅವರು ಜುಲೈ 18 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ನ್ಯಾಯಾಲಯ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಬ್ರಿಜ್‌ ಭೂಷಣ್‌ ಅವರ ವಿರುದ್ಧ ಮಹಿಳಾ ಕುಸ್ತಿಪಟುಗಳು ದೂರು ನೀಡಿ ಪ್ರತಿಭಟನೆ ನಡೆಸಿದ ನಂತರ ದೆಹಲಿ ಪೊಲೀಸರು ಜೂನ್ 15 ರಂದು ಲೈಂಗಿಕ ಕಿರುಕುಳ, ಕ್ರಿಮಿನಲ್‌ ಬೆದರಿಕೆ ಹಾಗೂ ಹಿಂಸೆಯ ಆರೋಪದಲ್ಲಿ ಬ್ರಿಜ್‌ ಭೂಷಣ್‌ ಅವರ ವಿರುದ್ಧ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಅಪ್ರಾಪ್ತ ಮಹಿಳಾ ಕುಸ್ತಿಪಟುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬ್ರಿಜ್‌ ಭೂಷಣ್‌ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಬ್ರಿಜ್‌ ಭೂಷಣ್ ವಿರುದ್ಧ ಆರೋಪಿಸಿದ ಏಳು ಮಹಿಳಾ ಕುಸ್ತಿಪಟುಗಳ ಪೈಕಿ ಅಪ್ತಾಪ್ತೆಯೂ ಸೇರಿದ್ದಾರೆ.

ಆದರೆ ಬ್ರಿಜ್‌ ಭೂಷಣ್‌ ತಮ್ಮ ವಿರುದ್ಧದ ಲೈಂಗಿಕ ಕಿರುಕುಳ ಆರೋಪವನ್ನು ಅಲ್ಲಗಳೆದಿದ್ದರು. ತಮ್ಮ ವಿರುದ್ಧದ ಆರೋಪ ಸಾಬೀತಾದಲ್ಲಿ ತಾವು ಜೈಲಿಗೆ ಹೋಗಲು ಸಿದ್ಧ ಎಂದು ಬ್ರಿಜ್‌ ಭೂಷಣ್‌ ಹೇಳಿದ್ದರು.

ಬ್ರಿಜ್‌ ಭೂಷಣ್‌ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒಲಿಂಪಿಕ್‌ ಮತ್ತು ಏಷಿಯನ್‌ ಗೇಮ್ಸ್‌ನಲ್ಲಿ ಪದಕ ವಿಜೇತ ಪುರುಷರು ಸೇರಿ ಮಹಿಳಾ ಕುಸ್ತಿಪಟುಗಳು ಜನವರಿಯಲ್ಲಿ ಪ್ರತಿಭಟಿಸಿದ್ದರು.

ಈ ಸುದ್ದಿ ಓದಿದ್ದೀರಾ? ಜು.14ಕ್ಕೆ ಚಂದ್ರಯಾನ-3 ಉಡಾವಣೆ : ಇಸ್ರೋ

ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿ ಜಂತರ್ ಮಂತರ್‌ನಲ್ಲಿ ಏಪ್ರಿಲ್‌ನಿಂದ ಪ್ರತಿಭಟನೆ ನಡೆಸಿದ್ದರು. ಸ್ಥಳವನ್ನು ತೆರವುಗೊಳಿಸುವಂತೆ ಪೊಲೀಸರು ಕೆಲವು ಕುಸ್ತಿಪಟುಗಳನ್ನು ವಶಕ್ಕೆ ಪಡೆದಿದ್ದರು.

ಪೊಲೀಸರು ಕುಸ್ತಿಪಟುಗಳನ್ನು ಬಸ್ಸಿನಲ್ಲಿ ಕರೆದೊಯ್ಯಲು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಕಳೆದ ತಿಂಗಳು ಕುಸ್ತಿಪಟುಗಳು ಪ್ರತಿಭಟನೆ ನಿಲ್ಲಿಸಿ ಕೆಲಸಕ್ಕೆ ಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸಿ ಆದೇಶವನ್ನು ‘ತೀವ್ರವಾಗಿ ವಿರೋಧಿಸುತ್ತಲೇ’ ಹೊಸ ಹೆಸರು, ಚಿಹ್ನೆಗಳ ಪಟ್ಟಿ ಸಲ್ಲಿಸಿದ ಟಿಎಂಸಿ

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಮುಂಬರುವ ಉಪಚುನಾವಣೆಗಾಗಿ ಟಿಎಂಸಿ ಪಕ್ಷದ ಹೆಸರು ಹಾಗೂ...

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ...

ಪಂಜಾಬ್: ಬಿಜೆಪಿ ನಾಯಕ ರವನೀತ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ಪಂಜಾಬ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಪಠಾಣ್‌ಕೋಟ್‌ನತ್ತ ತೆರಳುತ್ತಿದ್ದ...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...