2 ಕ್ಷೇತ್ರಗಳಲ್ಲಿ ಮತದಾರ ಹೆಸರು ನೋಂದಣಿ: ದೆಹಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್‌ಗೆ ಕೋರ್ಟ್ ಸಮನ್ಸ್

Date:

Advertisements

ಪ್ರಜಾಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿ ಎರಡು ವಿಭಿನ್ನ ಕ್ಷೇತ್ರಗಳ ಮತದಾರರ ಪಟ್ಟಿಗೆ ಏಕಕಾಲದಲ್ಲಿ ಹೆಸರು ದಾಖಲಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ನವೆಂಬರ್ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

“ಆರೋಪಿಯಾಗಿರುವ ಅರವಿಂದ್‌ ಕೇಜ್ರಿವಾಲ್‌ ಪತ್ನಿ ಸುನೀತಾ ಕೇಜ್ರಿವಾಲ್ ಅವರ ವಿರುದ್ಧ ಪ್ರಾಥಮಿಕ ಹಂತದ ಪ್ರಕರಣವನ್ನು ದಾಖಲಿಸಲು ಈ ನ್ಯಾಯಾಲಯವು ಪರಿಗಣಿಸಿದೆ“ ಎಂದು ಕಳೆದ ವಾರ ನೀಡಿದ ಆದೇಶದಲ್ಲಿ ತೀಸ್ ಹಜಾರಿ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ತಿಳಿಸಿದ್ದಾರೆ.

ಇಬ್ಬರು ಸಾಕ್ಷಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ಮತದಾರರ ಪಟ್ಟಿಗಳ ಪ್ರಕಾರ, ಸುನೀತಾ ಕೇಜ್ರಿವಾಲ್ ಅವರ ಹೆಸರು ದೆಹಲಿಯ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರ ಮತ್ತು ಉತ್ತರ ಪ್ರದೇಶದ ಸಾಹಿಬಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿದೆ. ಪ್ರಕರಣದ ದೂರುದಾರರಾಗಿರುವ ದೆಹಲಿ ಬಿಜೆಪಿ ಕಾರ್ಯದರ್ಶಿ ಹರೀಶ್ ಖುರಾನಾ ಕೂಡ ನ್ಯಾಯಾಲಯದಲ್ಲಿ ಈ ದಾಖಲೆಗಳನ್ನು ಸಲ್ಲಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‘ಭಾರತ್‌ ಮಾತಾ ಕೀ ಜೈ’ ಎಂದ ಅಮಿತಾಭ್ ಬಚ್ಚನ್; ನೆಟ್ಟಿಗರಿಂದ ತರಾಟೆ

“ನಾನು ಈ ದೂರನ್ನು 2019 ರಲ್ಲಿ ಸಲ್ಲಿಸಿದ್ದೆ. ದೆಹಲಿಯ ಚಾಂದಿನಿ ಚೌಕ್ ಮತ್ತು ಗಾಜಿಯಾಬಾದ್‌ನ ಸಾಹಿಬಾಬಾದ್‌ನಲ್ಲಿ ಮತದಾರರಾಗಿ ನೋಂದಾಯಿಸಿರುವುದು ಕಾನೂನುಬಾಹಿರವಾಗಿದೆ” ಎಂದು ಖುರಾನಾ ತಿಳಿಸಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪತ್ನಿ ಇಬ್ಬರೂ ಐಆರ್‌ಎಸ್‌ ಅಧಿಕಾರಿಗಳಾಗಿದ್ದರು. ದೇಶದಲ್ಲಿ ಒಂದು ರಾಷ್ಟ್ರ ಮತ್ತು ಒಂದು ಮತದಾರರ ಗುರುತಿನ ಚೀಟಿ ಜಾರಿಯಲ್ಲಿದೆ ಎಂದು ತಿಳಿದಿರುವ ಕಾರಣ ಅವರು ಇಂತಹ ಅಪರಾಧವನ್ನು ಮಾಡಿರುವುದು ಅಕ್ಷಮ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

1950ರ ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 17ರ ಪ್ರಕಾರ, ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಗೆ ಯಾವುದೇ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲಾಗುವುದಿಲ್ಲ.

ವಿವಿಧ ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಾಲಯವು ಆರೋಪಿಗಳಿಗೆ ಸಮನ್ಸ್ ನೀಡಲು ಯಾವುದೇ ‘ಸ್ಪಷ್ಟ ಕಾರಣಗಳನ್ನು’ ಹೇಳಬೇಕಾಗಿಲ್ಲ ಮತ್ತು ಸಮನ್ಸ್ ಆದೇಶವನ್ನು ರವಾನಿಸುವಾಗ ಮ್ಯಾಜಿಸ್ಟ್ರೇಟ್ ಪ್ರಾಥಮಿಕ ಆರೋಪಗಳ ಮೇಲೆ ಕೇಂದ್ರೀಕರಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X