ದೆಹಲಿ | ಮೆಟ್ರೋದಲ್ಲಿ ಬೀಡಿ ಸೇದಿದ ವೃದ್ಧ ಪ್ರಯಾಣಿಕ; ವಿಡಿಯೊ ವೈರಲ್

Date:

Advertisements

ನವದೆಹಲಿ ಮೆಟ್ರೋದಲ್ಲಿ ವೃದ್ಧ ಪ್ರಯಾಣಿಕನೊಬ್ಬ ಬೀಡಿ ಸೇದುತ್ತಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

ದೆಹಲಿ, ಬೆಂಗಳೂರು ಸೇರಿದಂತೆ ಯಾವುದೇ ಮೆಟ್ರೋದಲ್ಲಿ ಧೂಮಪಾನಕ್ಕೆ ಅವಕಾಶವಿಲ್ಲ. ಜತೆಗೆ, ಮೆಟ್ರೋದಲ್ಲಿ ಕುಳಿತು ತಿಂಡಿ-ತಿನಿಸು ತಿನ್ನುವಂತಿಲ್ಲ. ಪಾನೀಯಗಳನ್ನು ಕುಡಿಯುವಂತಿಲ್ಲ. ಸ್ವಚ್ಛತೆಯ ದೃಷ್ಟಿಯಿಂದ ಈ ನಿಯಮಗಳನ್ನು ಮಾಡಲಾಗಿದೆ. ಇನ್ನೂ ಮೊನಚಾದ ಚಾಕು, ಚೂರಿ, ಕತ್ತರಿ ಸೇರಿದಂತೆ ಇನ್ನಿತರ ಹರಿತವಾದ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಧೂಮಪಾನ, ಮದ್ಯಪಾನ, ತಂಬಾಕು ಬಳಕೆಗೆ ನಿಷೇಧವಿದೆ.

ಮೆಟ್ರೋ ನಿಲ್ದಾಣದಲ್ಲಿ ತಪಾಸಣೆ ಮಾಡುವಾಗ ಸಿಕ್ಕಿಬಿದ್ದರೆ ಬೀಡಿ, ಸಿಗರೇಟ್​ ಜಪ್ತಿ ಮಾಡಿ, ನಿಗಮ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಆದರೆ, ವೃದ್ಧನೊಬ್ಬ ನವದೆಹಲಿ ಮೆಟ್ರೋದಲ್ಲಿ ಪ್ರಯಾಣ ಮಾಡುವಾಗ ಬೀಡಿ ತೆಗೆದು, ಬೆಂಕಿ ಗೀರಿ ಸೇದಲು ಪ್ರಾರಂಭಿಸುತ್ತಾರೆ. ಈ ವೇಳೆ, ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬರು ಎದ್ದು ಹೋಗಿದ್ದಾರೆ. ಅಲ್ಲಿಯೇ ನಿಂತವರು ಒಬ್ಬರು ಬೀಡಿ ಸೇದದಂತೆ ತಡೆದಿದ್ದಾರೆ.

Advertisements

ಮೆಟ್ರೋ ಆವರಣದೊಳಗೆ ಧೂಮಪಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಅದು ಶಿಕ್ಷಾರ್ಹ ಅಪರಾಧವೂ ಆಗಿದೆ. ಇದೀಗ ವೃದ್ಧನೊಬ್ಬ ಬೀಡಿ ಸೇದುತ್ತಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ಬೀಡಿ ಸೇದಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಮೆಟ್ರೋ ರೈಲು ನಿಗಮಕ್ಕೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಬಂದ್ | 13 ದೇಶೀಯ ವಿಮಾನ ಹಾರಾಟ ರದ್ದು

“ಇಂತಹ ಘಟನೆಗಳು ನಡೆದಾಗ ಸಾರ್ವಜನಿಕರು ಕೂಡಲೇ ನಮಗೆ ಮಾಹಿತಿ ನೀಡಿ. ಇದರಿಂದ ತುರ್ತು ಕ್ರಮ ಕೈಗೊಳ್ಳಬಹುದು. ಆಕ್ಷೇಪಾರ್ಹ ನಡವಳಿಕೆಗಳನ್ನು ಪತ್ತೆಹಚ್ಚಲು ಫ್ಲೈಯಿಂಗ್ ಸ್ಕ್ವಾಡ್​ಗಳನ್ನು ನೇಮಿಸಿದ್ದೇವೆ. ದೆಹಲಿ ಮೆಟ್ರೋದಲ್ಲಿ ಧೂಮಪಾನ ಮಾಡುವಂತಿಲ್ಲ. ಆ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ದೆಹಲಿ ಮೆಟ್ರೋ ನಿಗಮ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X