ದೆಹಲಿ ಸಿಎಂ ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸಲು ಮೂರನೇ ಅರ್ಜಿ: ಹೈಕೋರ್ಟ್‌ ಗರಂ

Date:

Advertisements

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮೂರನೇ ಸಾರ್ವಜನಿಕ ಅರ್ಜಿಯನ್ನು ಗಮನಿಸಿದ ದೆಹಲಿ ಹೈಕೋರ್ಟ್, ಇನ್ನೊಮ್ಮೆ ಈ ರೀತಿಯ ಅರ್ಜಿ ಸಲ್ಲಿಸಿದರೆ ಭಾರೀ ಮೊತ್ತದ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.

ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಶಾಸಕ ಸಂದೀಪ್ ಕುಮಾರ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಇದನ್ನು ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರು, “ಇನ್ನೊಮ್ಮೆ ಈ ರೀತಿಯ ಅರ್ಜಿ ಹಿಡಿದುಕೊಂಡು ಬಂದರೆ ನಿಮ್ಮ ಮೇಲೆ ಭಾರೀ ಮೊತ್ತದ ದಂಡವನ್ನು ವಿಧಿಸಬೇಕಾಗುತ್ತದೆ” ಎಂದು ಗರಂ ಆಗಿಯೇ ತಿಳಿಸಿದರು.

“ಇದೇ ರೀತಿಯ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರಿದ್ದ ವಿಭಾಗೀಯ ಪೀಠವು ಆಲಿಸಿದ ಬಳಿಕ ಈಗಾಗಲೇ ವಜಾಗೊಳಿಸಿದೆ. ಪ್ರಸ್ತುತ ಮನವಿಯು ಪ್ರಚಾರದ ಹಿತಾಸಕ್ತಿಯಿಂದ ಕೂಡಿದೆಯಲ್ಲದೆ ಬೇರೇನೂ ಇಲ್ಲ. ಪುನರಾವರ್ತಿಸಿದರೆ ಭಾರೀ ಮೊತ್ತದ ದಂಡ ವಿಧಿಸುತ್ತೇವೆ” ಎಂದು ಆಮ್ ಆದ್ಮಿಯ ಮಾಜಿ ಶಾಸಕ ಸಂದೀಪ್ ಕುಮಾರ್ ಅವರ ವಿರುದ್ಧ ನ್ಯಾಯಾಧೀಶರು ಆಕ್ರೋಶ ಹೊರಹಾಕಿದರು.

Advertisements

ಆ ಬಳಿಕ, “ಈಗಾಗಲೇ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರ ಪೀಠವು ಈ ಹಿಂದೆ ಇದೇ ರೀತಿಯ ಎರಡು ಅರ್ಜಿಗಳನ್ನು ಆಲಿಸಿದೆ. ಆದ್ದರಿಂದ ಅದನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸುತ್ತೇವೆ” ಎಂದು ಹೇಳಿದರು. ಬುಧವಾರ(ಏಪ್ರಿಲ್ 10)ಕ್ಕೆ ವಿಚಾರಣೆ ನಡೆಯಲಿದೆ.

ಇದು ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ ಮೂರನೇ ಮನವಿಯಾಗಿದೆ. ಇದಕ್ಕೂ ಮುನ್ನ, ಮಾರ್ಚ್ 28 ರಂದು, ಸುರ್ಜಿತ್ ಸಿಂಗ್ ಯಾದವ್ ಹಾಗೂ ಏಪ್ರಿಲ್ 4 ರಂದು ಹಿಂದೂ ಸೇನೆಯ ಅಧ್ಯಕ್ಷರ ವಿಷ್ಣು ಗುಪ್ತಾ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಹಗರಣ | ಬಿಆರ್‌ಎಸ್‌ ನಾಯಕಿ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಣೆ

ಅರ್ಜಿಯ ತಿರಸ್ಕಾರದ ವೇಳೆ, “ಸಿಎಂ ಆಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ನಿರ್ಧಾರ. ಭಾರತದ ರಾಷ್ಟ್ರಪತಿ ಅಥವಾ ಲೆಫ್ಟಿನೆಂಟ್ ಗವರ್ನರ್‌ ಅವರೇ ಈ ಕುರಿತು ನಿರ್ಧರಿಸಬೇಕು” ಎಂದು ಹೈಕೋರ್ಟ್‌ ಸ್ಪಷ್ಟವಾಗಿ ತಿಳಿಸಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X