ಬಾಸ್ಕೆಟ್‌ಬಾಲ್ ಆಟಗಾರ ಕುಶಾಲ್ ಸಿಂಗ್ ವಿರುದ್ಧದ ಪೋಸ್ಟ್‌ಗಳನ್ನು ಅಳಿಸಲು ದೆಹಲಿ ಹೈಕೋರ್ಟ್ ಆದೇಶ

Date:

ಭಾರತೀಯ ಬಾಸ್ಕೆಟ್‌ಬಾಲ್ ಆಟಗಾರ ಕುಶಾಲ್ ಸಿಂಗ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಲೈಂಗಿಕ ಕಿರುಕುಳ ಹಾಗೂ ಅಪ್ರಾಪ್ತೆಯರ ವಿರುದ್ಧ ಅನುಚಿತ ವರ್ತನೆ ನಡೆಸಿದ್ದಾರೆ ಎಂಬ ಆರೋಪಗಳನ್ನು ಒಳಗೊಂಡ ಪೋಸ್ಟ್‌ಗಳನ್ನು ತಕ್ಷಣವೇ ಅಳಿಸುವಂತೆ ದೆಹಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

- Advertisement -

ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಶುಕ್ರವಾರ ಈ ಆದೇಶ ನೀಡಿದ್ದು, ಸಿಂಗಾಪುರ ಮೂಲದ ಕಂಟೆಂಟ್ ಕ್ರಿಯೇಟರ್ ಮುಸ್ಕಾನ್ ತಿವಾರಿ ವಿರುದ್ಧ ಕುಶಾಲ್ ಸಿಂಗ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ವೇಳೆ ಈ ನಿರ್ದೇಶನ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮುಸ್ಕಾನ್ ತಿವಾರಿ ತಮ್ಮ ಇನ್‌ಸ್ಟಾಗ್ರಾಂ ಖಾತೆ ಹಾಗೂ ತಮ್ಮ ನಿಯಂತ್ರಣದಲ್ಲಿರುವ ಇತರೆ ಖಾತೆಗಳಲ್ಲಿ ಪ್ರಕಟಿಸಿರುವ ಪೋಸ್ಟ್‌ಗಳು, ರೀಲ್ಸ್‌, ಸ್ಟೋರಿ ಹೈಲೈಟ್ಸ್‌, ಕ್ಯಾಪ್ಷನ್‌ಗಳು, ಕಾಮೆಂಟ್‌ಗಳು ಸೇರಿದಂತೆ ಕುಶಾಲ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಅಥವಾ ಲೈಂಗಿಕ ದುರ್ವರ್ತನೆ ಆರೋಪಗಳನ್ನು ಮಾಡುವ ಎಲ್ಲ ವಿಷಯಗಳನ್ನು ಕೂಡಲೇ ತೆಗೆದುಹಾಕುವಂತೆ ನ್ಯಾಯಾಲಯ ಆದೇಶಿಸಿದೆ.

ಆದೇಶವನ್ನು ಪಾಲಿಸದಿದ್ದರೆ, ಸಂಬಂಧಿತ ಸಾಮಾಜಿಕ ಜಾಲತಾಣ ಸಂಸ್ಥೆಯನ್ನು ಕುಶಾಲ್ ಸಿಂಗ್ ಸಂಪರ್ಕಿಸಬಹುದಾಗಿದ್ದು, ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸುವ ಜವಾಬ್ದಾರಿ ಆ ಸಂಸ್ಥೆಯದ್ದಾಗಿರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಕುಶಾಲ್ ಸಿಂಗ್ ಪರ ವಕೀಲರು, ಮುಸ್ಕಾನ್ ತಿವಾರಿ ಜುಲೈ 2026ರಿಂದ ನಿರಂತರವಾಗಿ ಹೊಸ ರೀಲ್ಸ್‌, ಪೋಸ್ಟ್‌ಗಳು ಹಾಗೂ ಸ್ಟೋರಿಗಳನ್ನು ಪ್ರಕಟಿಸುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಲ್ಲದೆ, ಆ ಪೋಸ್ಟ್‌ಗಳಲ್ಲಿ ಮಾಡಲಾಗಿರುವ ಲೈಂಗಿಕ ದುರ್ವರ್ತನೆ ಸಂಬಂಧಿತ ಆರೋಪಗಳು ಸುಳ್ಳಾಗಿದ್ದು, ಅವು ಸಾವಿರಾರು ಜನರನ್ನು ತಲುಪಿವೆ. ತಮ್ಮ ಅನುಯಾಯಿಗಳಿಗೆ ವಿವಿಧ ಬಾಸ್ಕೆಟ್‌ಬಾಲ್ ಸಂಸ್ಥೆಗಳನ್ನು ಟ್ಯಾಗ್ ಮಾಡುವಂತೆ ಕರೆ ನೀಡುವ ಮೂಲಕ ಆರೋಪಗಳನ್ನು ವ್ಯಾಪಕವಾಗಿ ಹರಡುವ ಪ್ರಯತ್ನವೂ ನಡೆದಿದೆ ಎಂದು ಕುಶಾಲ್ ಸಿಂಗ್ ಆರೋಪಿಸಿದ್ದಾರೆ.

ಕುಶಾಲ್ ಸಿಂಗ್ ಭಾರತೀಯ ಹಿರಿಯ ರಾಷ್ಟ್ರೀಯ ಬಾಸ್ಕೆಟ್‌ಬಾಲ್ ತಂಡದ ಆಟಗಾರರಾಗಿದ್ದು, 2022ರ ಫಿಬಾ ಅಂಡರ್-16 ಏಷ್ಯನ್ ಚಾಂಪಿಯನ್‌ಶಿಪ್ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಇದನ್ನೂ ಓದಿ: 10 ಕೋಟಿ ಕೊಡುವುದಾಗಿ ನಂಬಿಸಿ 2.5 ಕೋಟಿ ದೋಚಿದ ಸ್ವಯಂಘೋಷಿತ ದೇವಮಾನವ

ಮುಸ್ಕಾನ್ ತಿವಾರಿ ಈ ಆರೋಪಗಳನ್ನು ಒಳಗೊಂಡ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಮೂಲಕ ತಮ್ಮ ಘನತೆಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ಕುಶಾಲ್ ಸಿಂಗ್ ಮಾನನಷ್ಟ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಕಾನ್ ತಿವಾರಿ ಸೇರಿದಂತೆ ಪ್ರತಿವಾದಿಗಳಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ಸಮನ್ಸ್ ಸ್ವೀಕರಿಸಿದ 30 ದಿನಗಳೊಳಗೆ ಲಿಖಿತ ಉತ್ತರ ಸಲ್ಲಿಸುವಂತೆ ಸೂಚಿಸಿದೆ.

ಪ್ರಕರಣದ ಮುಂದಿನ ಪ್ರಕ್ರಿಯೆಗಾಗಿ ಸೆಪ್ಟೆಂಬರ್ 17ರಂದು ಜಂಟಿ ನೋಂದಣಾಧಿಕಾರಿ (Joint Registrar) ಮುಂದೆ ವಿಚಾರಣೆ ನಡೆಯಲಿದ್ದು, ಮುಖ್ಯ ವಿಚಾರಣೆಯನ್ನು 2027ರ ಜನವರಿ 13ಕ್ಕೆ ಮುಂದೂಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...