ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಭಾರತದ ಸಾರ್ವಕಾಲಿಕ ದಾಖಲೆ

Date:

Advertisements

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆ ತಾಪಮಾನವಾಗಿದೆ. ತಾಪಮಾನ ಏರಿಕೆಯಾದಂತೆ ದೆಹಲಿಯಲ್ಲಿ ವಿದ್ಯುತ್ ಬಳಕೆಯೂ ಕೂಡಾ ಏರಿಕೆಯಾಗಿದೆ. ಅಧಿಕ ತಾಪಮಾನವಿದ್ದ ದೆಹಲಿಯಲ್ಲಿ ದಿಡೀರ್ ಹವಾಮಾನ ಬದಲಾಗಿದ್ದು, ಸದ್ಯ ಮೋಡ ಕವಿದ ವಾತಾವರಣವಿದೆ.

ತಾಪಮಾನ ಹೆಚ್ಚಾಗುತ್ತಿದ್ದಂತೆ ಜನರು ಅಧಿಕವಾಗಿ ಹವಾನಿಯಂತ್ರಣ (ಎಸಿ) ಬಳಕೆ ಮಾಡಲು ಆರಂಭಿಸಿದ್ದರು. ಪರಿಣಾಮ, ದೆಹಲಿಯಲ್ಲಿ ಸಾರ್ವಕಾಲಿಕ ವಿದ್ಯುತ್ ಬೇಡಿಕೆ 8,302 ಮೆಗಾವ್ಯಾಟ್‌ (MW) ದಾಖಲಾಗಿದೆ ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಜಸ್ಥಾನ| ಬಿಸಿಲಿನ ತಾಪಕ್ಕೆ ಮತ್ತೆ ಮೂವರು ಬಲಿ; ರೋಗಿಗಳ ಸಂಖ್ಯೆ 3,965ಕ್ಕೆ ಏರಿಕೆ

Advertisements

ಮರುಭೂಮಿಗಳ ರಾಜ್ಯವೆಂದೇ ಕರೆಯಲಾಗುವ ರಾಜಸ್ಥಾನದ ಫಲೋಡಿಯಲ್ಲಿ 50.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹರಿಯಾಣದ ಸಿರ್ಸಾದಲ್ಲಿ 50.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ದಕ್ಷಿಣ ರಾಜಸ್ಥಾನದ ಬಾರ್ಮರ್, ಜೋಧ್‌ಪುರ್, ಉದಯಪುರ, ಸಿರೋಹಿ ಮತ್ತು ಜಲೋರ್ ಜಿಲ್ಲೆಗಳಲ್ಲಿ ಇಂದು 4 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಕುಸಿತ ಕಂಡು ಬಂದಿದೆ.

ಇದನ್ನು ಓದಿದ್ದೀರಾ? ಭಾರತದ ಪ್ರಮುಖ 10 ನಗರಗಳಲ್ಲಿ ಬಿಸಿಗಾಳಿ ಹೆಚ್ಚಳ; ರೆಡ್‌ ಅಲರ್ಟ್ ಘೋಷಣೆ

ಇನ್ನು ಈಗಾಗಲೇ ರಾಜಸ್ಥಾನ, ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಮಧ್ಯಪ್ರದೇಶಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.

ಗುಜರಾತ್‌ನ ವಡೋದರಾದಲ್ಲಿ ಮೇ 22ರಿಂದ ಮೇ 27ರವರೆಗಿನ ಅವಧಿಯಲ್ಲಿ ಸುಮಾರು ಆರು ಮಂದಿ ಬಿಸಿಲಿನ ದಗೆಯಿಂದಾಗಿಯೇ ಸಾವನ್ನಪ್ಪಿದ್ದಾರೆ. 108 ತುರ್ತು ವೈದ್ಯಕೀಯ ಸೇವೆ ಸಹಾಯವಾಣಿಗೆ ಮೇ 21ರಿಂದ 100ಕ್ಕೂ ಅಧಿಕ ತಾಪಮಾನ ಸಂಬಂಧಿತ ಆರೋಗ್ಯ ಸಮಸ್ಯೆಯ ಕರೆಗಳು ಬಂದಿದೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X