ಖಲಿಸ್ತಾನ್ ಪರ ಹಣ ಸಹಾಯ ಆರೋಪ: ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸ್ಸು

Date:

Advertisements

ಅಮೆರಿಕ ಮೂಲದ ನಿಷೇಧಿತ ಖಲಿಸ್ತಾನ್‌ ಗುಂಪಿನ ‘ಸಿಖ್ಖರಿಗೆ ನ್ಯಾಯ’ ಚಳುವಳಿಯ ಸಂಘಟನೆಯಿಂದ ಹಣಕಾಸು ನೆರವು ಸ್ವೀಕರಿಸಿದ ಸಿಎಂ ಅರವಿಂದ್‌ ಕೇಜ್ರಿವಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಶಿಫಾರಸ್ಸು ಮಾಡಿದ್ದಾರೆ.

1993 ದೆಹಲಿ ಸ್ಫೋಟಗಳ ಆರೋಪಿ ಹಾಗೂ ಭಯೋತ್ಪಾದಕ ದೇವೇಂದ್ರ ಪಾಲ್‌ ಬುಲ್ಲರ್ ಬಿಡುಗಡೆ ಹಾಗೂ ಖಲಿಸ್ತಾನ ಪರ ಭಾವನೆಗಳನ್ನು ಪ್ರತಿಪಾದಿಸಲು ಖಲಿಸ್ತಾನ್‌ ಪರ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ ಹಣ ಸ್ವೀಕರಿಸಿರುವ ಬಗ್ಗೆ ಸಕ್ಸೇನಾ ಅವರು ದೂರು ಸ್ವೀಕರಿಸಿದ್ದರು.

ಅರವಿಂದ್‌ ಕೇಜ್ರಿವಾಲ್ ಅವರು ನಿಷೇಧಿತ ಗುಂಪುಗಳಿಂದ ರಾಜಕೀಯ ಹಣ ಸಹಾಯ ಸಂಬಂಧ ದೂರು ನೀಡಲಾಗಿದೆ. ದೂರುದಾರರು ಸೇರಿಸಿರುವ ವಿದ್ಯುನ್ಯಾನ ಪುರಾವೆಗಳಿಗೆ ಫಾರೆನ್ಸಿಕ್ ಪರೀಕ್ಷೆ ಒಳಗೊಂಡ ತನಿಖೆಯ ಅಗತ್ಯವಿದೆ ಎಂದು ಲೆಫ್ಟಿನೆಂಟ್ ಗನರ್ನರ್ ತಿಳಿಸಿದ್ದಾರೆ.

Advertisements

ಕೇಜ್ರಿವಾಲ್ ಅವರು 2014ರ ಜನವರಿಯಲ್ಲಿ ಇಕ್ಬಾಲ್‌ ಸಿಂಗ್‌ ಎಂಬುವವರಿಗೆ ಬರೆದಿದ್ದ ಪತ್ರ ಹಾಗೂ ದೇವೇಂದ್ರ ಪಾಲ್‌ ಬುಲ್ಲರ್ ಎಂಬುವವರನ್ನು ಬಿಡುಗಡೆ ಕೋರಿ ಎಎಪಿ ಸರ್ಕಾರ ರಾಷ್ಟ್ರಪತಿಗೆ ಶಿಫಾರಸ್ಸು ಒಳಗೊಂಡ ವಿಷಯಗಳ ಬಗ್ಗೆ ತನಿಖೆ ಕೈಗೊಳ್ಳುವಂತೆ ಲೆಫ್ಟಿನೆಂಟ್ ಗವರ್ನರ್ ಅವರು ಗೃಹ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

ಬುಲ್ಲರ್ ಬಿಡುಗಡೆ ಸಂಬಂಧ ಇಕ್ಬಾಲ್‌ ಸಿಂಗ್‌ ಜಂತರ್‌ ಮಂತರ್‌ನಲ್ಲಿ ಉಪವಾಸ ಕುಳಿತ್ತಿದ್ದರು.  ಆಗ ಉಪವಾಸ ನಿಲ್ಲಿಸುವಂತೆ ಕೇಜ್ರಿವಾಲ್‌ ಪತ್ರ ಬರೆದಿದ್ದರು ಎಂದು ಸಕ್ಸೇನಾ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಏಪ್ರಿಲ್ 1ರಿಂದ ತಿಹಾರ್‌ ಸೆರೆಮನೆಯಲ್ಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X