ಬ್ರಿಜ್ ಭೂಷಣ್ ಸಿಂಗ್ ವಿರುದ್ಧ 1,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ: ಪೋಕ್ಸೊ ಕೈಬಿಟ್ಟ ದೆಹಲಿ ಪೊಲೀಸ್‌

Date:

Advertisements

ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್‌ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಆರೋಪದ ದೂರಿನಲ್ಲಿ, ದೆಹಲಿ ಪೊಲೀಸರು 1,500 ಪುಟಗಳ ಆರೋಪಪಟ್ಟಿಯನ್ನು (ಚಾರ್ಜ್‌ಶೀಟ್) ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್‌ಗೆ ಗುರುವಾರ ಸಲ್ಲಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ, 180ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದ್ದ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿದ್ದಾರೆ. ಸಿಂಗ್‌ ವಿರುದ್ಧ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಆಕ್ರೋಶವನ್ನು ಉಂಟುಮಾಡುವ ಉದ್ದೇಶದಿಂದ ಮಹಿಳೆಯ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ ಪ್ರಯೋಗ) 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವುದು) ಅಪರಾಧಗಳಿಗಾಗಿ ಆರೋಪಪಟ್ಟಿ ಸಲ್ಲಿಸಲಾಗಿದೆ.

ಪೋಕ್ಸೊ ಕೈಬಿಟ್ಟ ಪೊಲೀಸ್‌

Advertisements

ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೊ ಪ್ರಕರಣವನ್ನು ದೆಹಲಿ ಪೊಲೀಸರು ರದ್ದುಮಾಡಿದ್ದಾರೆ. ಈ ಕುರಿತು 550 ಪುಟಗಳ ವರದಿಯನ್ನು ಸಲ್ಲಿಸಲಾಗಿದೆ. ದೂರು ದಾಖಲಿಸಿದ್ದ ಅಪ್ರಾಪ್ತೆ, ಆ ಬಳಿಕ ತನ್ನ ಹೇಳಿಕೆಯನ್ನು ವಾಪಸ್‌ ಪಡೆದಿದ್ದಳು. ಇದಲ್ಲದೆ ಬ್ರಿಜ್ ಭೂಷಣ್ ವಿರುದ್ಧ ಸುಳ್ಳು ದೂರು ಸಲ್ಲಿಸಿದ್ದೆ ಎಂದು ಬಾಲಕಿಯ ತಂದೆ ಹೇಳಿಕೆ ನೀಡಿದ್ದರು. ಈ ದೂರಿಗೆ ಪೂರಕವಾಗಿ ಯಾವುದೇ ಪುರಾವೆ ಲಭ್ಯವಾಗಿಲ್ಲ ಎಂದು ಹೇಳಿರುವ ದಿಲ್ಲಿ ಪೊಲೀಸರು, ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಕಾಯ್ದೆಯಡಿ ದಾಖಲಾಗಿದ್ದ ದೂರಿನ ರದ್ದತಿ ವರದಿಯನ್ನು ಸಲ್ಲಿಸಿದ್ದಾರೆ. ಈ ಕುರಿತ ವಿಚಾರಣೆ ಜುಲೈ 4 ರಂದು ನಡೆಯಲಿದೆ.

ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿದ್ದ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌, ಜೂನ್‌ 15ರ ಒಳಗಾಗಿ ಚಾರ್ಜ್‌ಶೀಟ್ ಸಲ್ಲಿಸುವುದಾಗಿ ಭರವಸೆ ನೀಡಿದ್ದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X