ತಾಂತ್ರಿಕ ಸಮಸ್ಯೆ: ಲೇಹ್‌ಗೆ ಹಾರಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್

Date:

Advertisements

ದೆಹಲಿಯಿಂದ ಲೇಹ್‌ಗೆ ಹಾರಿದ್ದ ಇಂಡಿಗೋ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ದೆಹಲಿಗೆ ವಾಪಸ್ ಬಂದಿದೆ. ವಿಮಾನವು ಗುರುವಾರ ಬೆಳಿಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ರಾಷ್ಟ್ರ ರಾಜಧಾನಿಗೆ ಮರಳಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ವಿಮಾನಯಾನ ವಕ್ತಾರರು, “2025ರ ಜೂನ್ 19ರಂದು ದೆಹಲಿಯಿಂದ ಲೇಹ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ 6E 2006, ತಾಂತ್ರಿಕ ಸಮಸ್ಯೆಯಿಂದಾಗಿ ಲೇಹ್‌ನಲ್ಲಿ ಇಳಿಯಲು ಸಾಧ್ಯವಾಗದೆ ದೆಹಲಿಗೆ ವಾಪಸ್ ಮರಳಿದೆ. ಕಾರ್ಯವಿಧಾನಗಳ ಪ್ರಕಾರ, ಪೈಲಟ್ ವಿಮಾನವನ್ನು ದೆಹಲಿಯಲ್ಲಿ ಲ್ಯಾಂಡ್ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ವೈದ್ಯರು ಸೇರಿ ಒಂಬತ್ತು ಮಂದಿ ಸಾವು; ಹಾಸ್ಟೆಲ್ ತೆರವು

Advertisements

ವಿಮಾನವು ಕಾರ್ಯಾಚರಣೆಯನ್ನು ಪುನರಾರಂಭಿಸುವ ಮೊದಲು ಅಗತ್ಯ ನಿರ್ವಹಣೆಗೆ ಒಳಗಾಗುತ್ತಿದೆ ಎಂದೂ ವಕ್ತಾರರು ಹೇಳಿದ್ದಾರೆ. “ಪ್ರಯಾಣಿಕರನ್ನು ಲೇಹ್‌ಗೆ ಕರೆದೊಯ್ಯಲು ಪರ್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುತ್ತೇವೆ” ಎಂದಿದ್ದಾರೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದಾರೆ ಎಂಬ ವಿವರ ಮಾತ್ರ ತಿಳಿಸಿಲ್ಲ.

ಇತ್ತೀಚೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ AI171 ಬೋಯಿಂಗ್ 787-8 ಡ್ರೀಮ್‌ಲೈನರ್‌ ಅಪಘಾತಕ್ಕೀಡಾಗಿದ್ದು, ಈ ದುರಂತದಲ್ಲಿ ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಬಿಟ್ಟು ಉಳಿದೆಲ್ಲರೂ ಮೃತಪಟ್ಟಿದ್ದಾರೆ. ವಿಮಾನ ಅಪ್ಪಳಿಸಿದ ಹಾಸ್ಟೆಲ್ ಕಟ್ಟಡದಲ್ಲಿದ್ದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈವರೆಗೂ ಖಚಿತವಾಗಿ ಮೃತರ ಸಂಖ್ಯೆ ತಿಳಿಸಲಾಗಿಲ್ಲ. ವೈದ್ಯರುಗಳು 270 ಮೃತದೇಹ ಸಿಕ್ಕಿದೆ ಎಂದಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆ ಮೂಲಕ ಮೃತದೇಹದ ಗುರುತು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಈ ಘಟನೆ ಬಳಿಕ ವಿಮಾನಯಾನ ಸಂಸ್ಥೆಗಳು ತಾಂತ್ರಿಕ ಸಮಸ್ಯೆಗಳ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X