ದೆಹಲಿ | ಯಮುನಾ ನದಿಯ ನೀರಿನ ಮಟ್ಟ ಇಳಿಕೆ; ಪರಿಹಾರ ಶಿಬಿರಗಳಲ್ಲಿ ಮೂಲಸೌಕರ್ಯಗಳ ಕೊರತೆ

Date:

Advertisements

ದೆಹಲಿಯಲ್ಲಿ ಯಮುನಾ ನದಿಯ ನೀರಿನ ಮಟ್ಟ ನಿಧಾನಕ್ಕೆ ಕಡಿಮೆಯಾಗುತ್ತಿದ್ದು, ಮತ್ತೆ ಮಳೆ ಬೀಳದಿದ್ದರೆ ಶೀಘ್ರದಲ್ಲೇ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ನಗರದ ಹಲವಾರು ಭಾಗಗಳು ಇನ್ನೂ ಜಲಾವೃತವಾಗಿರುವುದರಿಂದ, ಅಂಥ ಪ್ರದೇಶಗಳಲ್ಲಿ ಸಂಚರಿಸದಿರಲು ಮುಖ್ಯಮಂತ್ರಿ ಜನರನ್ನು ವಿನಂತಿಸಿದ್ದಾರೆ. ದೆಹಲಿಯ ಶಾಂತಿವನದಲ್ಲಿ ಮಕ್ಕಳು ಪ್ರವಾಹದಲ್ಲಿ ಆಟವಾಡುತ್ತಿರುವ ವಿಡಿಯೋವನ್ನು ಟ್ಯಾಗ್ ಮಾಡಿರುವ ಅವರು, “ಇದನ್ನು ತಪ್ಪಿಸಲು ನಾನು ಪ್ರತಿಯೊಬ್ಬರನ್ನು ಒತ್ತಾಯಿಸುತ್ತೇನೆ. ಅದು ಮಾರಣಾಂತಿಕವಾಗಬಹುದು” ಎಂದು ಎಚ್ಚರಿಸಿದ್ದಾರೆ. ವಾಜಿರಾಬಾದ್ ಮತ್ತು ಚಂದ್ರವಾಲ್‌ನಲ್ಲಿನ ನೀರು ಸಂಸ್ಕರಣಾ ಘಟಕಗಳು ಭಾನುವಾರದಿಂದ ಮತ್ತೆ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ದೆಹಲಿಯ ಕೆಲವು ಭಾಗಗಳಲ್ಲಿ ಜೀವನ ಮತ್ತು ಜೀವನೋಪಾಯದ ಮೇಲೆ ಪ್ರಹಾರ ಮಾಡಿದ ನಂತರ ಯಮುನಾ ಶನಿವಾರ ಬೆಳಗ್ಗೆ ಕೊಂಚ ಮಟ್ಟಿಗೆ ಇಳಿಮುಖ ಕಂಡಿದೆ.

Advertisements

ಇದೇ ವೇಳೆ ದೆಹಲಿಯ ಮೆಟ್ರೋ ರೈಲುಗಳ ವೇಗದ ಕುರಿತು ಹಾಕಿದ್ದ ನಿರ್ಬಂಧಗಳನ್ನೂ ತೆಗೆದುಹಾಕಲಾಗಿದ್ದು, ರೈಲುಗಳು ಎಂದಿನಂತೆ ಸಹಜ ವೇಗದಲ್ಲಿ ಸಂಚರಿಸಲಿವೆ ಎಂದು ದೆಹಲಿ ಮೆಟ್ರೋ ರೈಲ್ ಕಾರ್ಪೊರೇಷನ್ ಪ್ರಕಟಣೆ ತಿಳಿಸಿದೆ.

ಸುಗ್ರೀವಾಜ್ಞೆ ವಿನಾಶಕಾರಿ ಎನ್ನುವುದು ಸಾಬೀತಾಯಿತು ಎಂದ ಸಚಿವೆ

ಇನ್ನೊಂದೆಡೆ ಪ್ರವಾಹ ಸ್ಥಿತಿಗೆ ಡಿಸಿ ಸ್ಪಂದಿಸುತ್ತಿಲ್ಲ ಎಂದು ಮುಖ್ಯ ಕಾರ್ಯದರ್ಶಿ ನರೇಶ್‌ಕುಮಾರ್ ಅವರಿಗೆ ದೆಹಲಿ ಲೋಕೋಪಯೋಗಿ ಸಚಿವೆ ಅತಿಶಿ ಪತ್ರ ಬರೆದಿದ್ದಾರೆ. ಪರಿಹಾರ ಶಿಬಿರಗಳಲ್ಲಿ ನೀರು, ವಿದ್ಯುತ್, ಶೌಚಾಲಯದಂಥ ಮೂಲ ಸೌಕರ್ಯಗಳ ಕೊರತೆಯಿದೆ. ಈ ಕುರಿತು ಮಾತನಾಡಲು ತಾನು ವಿಭಾಗೀಯ ಆಯುಕ್ತರನ್ನು ಸಂಪರ್ಕಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ ಅದು ಸಾಧ್ಯವಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ: ಏಕರೂಪ ನಾಗರಿಕ ಸಂಹಿತೆ; ಭಾರತದ ಬಹುತ್ವಕ್ಕೆ ಮಾರಕ

ಇದೇ ಸಂದರ್ಭದಲ್ಲಿ ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಸಂಬಂಧ ಕೇಂದ್ರ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ತಂದಿದ್ದನ್ನು ನೆನಪಿಸಿರುವ ಅವರು, ‘ಸುಗ್ರೀವಾಜ್ಞೆಯು ವಿನಾಶಕಾರಿ ಎಂಬುದು ಪ್ರವಾಹ ಪರಿಹಾರ ಸಂದರ್ಭದಲ್ಲಿ ಸಾಬೀತಾಗಿದೆ’ ಎಂದಿದ್ದಾರೆ.    

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X