ದೆಹಲಿ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ದೇವೇಂದರ್ ಯಾದವ್ ನೇಮಕ

Date:

Advertisements

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮಧ್ಯಂತರ ಅಧ್ಯಕ್ಷರಾಗಿ ದೇವೇಂದರ್ ಯಾದವ್‌ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಇಂದು ನೇಮಿಸಿದೆ.

ದೇವೇಂದರ್ ಯಾದವ್‌ ಅವರನ್ನು ಪಂಜಾಬ್‌ನ ಎಐಸಿಸಿ ಉಸ್ತುವಾರಿಯಾಗಿ ಕೂಡ ನೇಮಿಸಲಾಗಿದೆ.

ಅರವಿಂದರ್‌ ಸಿಂಗ್‌ ಲವ್ಲಿ ದೆಹಲಿ ಕಾಂಗ್ರೆಸ್ ಹುದ್ದೆಗೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಅರವಿಂದರ್‌ ಸಿಂಗ್‌ ರಾಜೀನಾಮೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಾಟ್ಸ್ಯಾಪ್ ಯೂನಿವರ್ಸಿಟಿಯ ಭಕ್ತರೂ ಮತ್ತು ಮಹಾಪ್ರಭು ಮೋದಿಯೂ

ಕಾಂಗ್ರೆಸ್ ಅಧ್ಯಕ್ಷರು ದೇವೇಂದರ್ ಸಿಂಗ್ ಅವರನ್ನು ದೆಹಲಿ ಕಾಂಗ್ರೆಸ್ ಸಮಿತಿಯ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಿದ್ದು,ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಇವರು ಪಂಜಾಬ್‌ನ ಎಐಸಿಸಿ ಉಸ್ತುವಾರಿಯಾಗಿ ಕೂಡ ಮುಂದುವರಿಯಲಿದ್ದಾರೆ” ಎಂದು ಕಾಂಗ್ರೆಸ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರವಿಂದರ್‌ ಸಿಂಗ್‌ ಲವ್ಲಿ ಅವರು ಎಎಪಿ ಮೈತ್ರಿಯ ಜೊತೆಗೆ ಕನ್ಹಯ್ಯ ಕುಮಾರ್ ಹಾಗೂ ಉದಿತ್‌ ರಾಜ್‌ ಅವರನ್ನು ದೆಹಲಿ ಕ್ಷೇತ್ರಗಳಿಂದ ಕಣಕ್ಕಿಳಿಸಿರುವುದರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು.

ದೆಹಲಿ ಲೋಕಸಭಾ ಚುನಾವಣೆಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ 3 ಹಾಗೂ ಎಎಪಿ 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ. ಪಂಜಾಬ್‌ನಲ್ಲಿ ಎರಡೂ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

Download Eedina App Android / iOS

X