ಹಿಂಸಾಚಾರಕ್ಕೆ ಮಣಿಪುರ ಮುಖ್ಯಮಂತ್ರಿ ಕುಮ್ಮಕ್ಕು ಆರೋಪ: ಸರಕಾರಿ ಪ್ರಯೋಗಾಲಯದ ವರದಿ ಕೇಳಿದ ಸುಪ್ರೀಂ

Date:

Advertisements

ಮಣಿಪುರ ಹಿಂಸಾಚಾರಕ್ಕೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕುಮ್ಮಕ್ಕು ನೀಡಿದರು ಎಂದು ಕುಕಿ ಬುಡಕಟ್ಟು ಸಮುದಾಯಗಳು ಆರೋಪಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸೋರಿಕೆಯಾಗಿರುವ ಆಡಿಯೊ ತುಣುಕಿನ ಸತ್ಯಾಸತ್ಯತೆಯ ಕುರಿತು ಸರಕಾರಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಸೋಮವಾರ ಅರ್ಜಿಯ ವಿಚಾರಣೆ ಪ್ರಾರಂಭವಾದಾಗ, ನಾನು ಸುಪ್ರೀಂ ಕೋರ್ಟ್ ನ್ಯಾಯಾಧೀಶನಾಗಿ ಪದೋನ್ನತಿ ಹೊಂದಿದಾಗ ಮಣಿಪುರ ಮುಖ್ಯಮಂತ್ರಿ ಆಯೋಜಿಸಿದ್ದ ಔತಣ ಕೂಟದಲ್ಲಿ ಭಾಗವಹಿಸಿದ್ದರಿಂದ, ಈ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿಯಲೆ? ಎಂದು ನ್ಯಾ. ಪಿ.ವಿ.ಸಂಜಯ್ ಕುಮಾರ್ ಅರ್ಜಿದಾರರನ್ನು ಪ್ರಶ್ನಿಸಿದರು. ಅದಕ್ಕೆ ಪ್ರತಿಯಾಗಿ, ನ್ಯಾ. ಸಂಜಯ್ ಕುಮಾರ್ ಅವರು ತಾವಾಗಿ ವಿಚಾರಣೆಯಿಂದ ಹಿಂದೆ ಸರಿಯಬಾರದು ಎಂದು ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಮನವಿ ಮಾಡಿದರು.

ಕುಕಿ ಆರ್ಗನೈಸೇಷನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಪರ ಹಾಜರಿದ್ದ ವಕೀಲ ಪ್ರಶಾಂತ್ ಭೂಷಣ್, ಶೇ. 93ರಷ್ಟು ಧ್ವನಿಮುದ್ರಿಕೆಯು ಎನ್ ಬಿರೇನ್ ಸಿಂಗ್ ಅವರ ಧ್ವನಿಯನ್ನು ಹೋಲುತ್ತದೆ ಎಂದು ಲಾಭರಹಿತ ಟ್ರೂತ್ ಲ್ಯಾಬ್ಸ್ ದೃಢಪಡಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಟ್ರೂತ್ ಲ್ಯಾಬ್ಸ್ 2007ರಲ್ಲಿ ಭಾರತದಲ್ಲಿ ಸ್ಥಾಪನೆಯಾಗಿರುವ ಪ್ರಪ್ರಥಮ ಸರ್ಕಾರೇತರ ಸುಸಜ್ಜಿತ ವಿಧಿವಿಜ್ಞಾನ ಪ್ರಯೋಗಾಲಯವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಗ್ರೇಸ್ ಅಂಕ ಇಲ್ಲ

ಇದಕ್ಕೆ ಪ್ರತಿಯಾಗಿ, “ಟ್ರೂತ್ ಲ್ಯಾಬ್ಸ್ ವರದಿಯನ್ನು ಅವಲಂಬಿಸಲು ಸಾಧ್ಯವಿಲ್ಲ. ಧ್ವನಿಮುದ್ರಿಕೆಗಳನ್ನು ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ”ಎಂದು ಸರಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯವು, ಮುಚ್ಚಿದ ಲಕೋಟೆಯಲ್ಲಿ ಸರಕಾರಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X