ಸ್ವತಂತ್ರ ಮಾಧ್ಯಮ, ನಾಗರಿಕ ಸಂಘಟನೆಗಳು, ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮೋದಿಯೊಂದಿಗೆ ಪ್ರಸ್ತಾಪ: ಜೋ ಬೈಡನ್

Date:

ಒಂದು ಸಮೃದ್ಧ ಮತ್ತು ಬಲಿಷ್ಠ ದೇಶವನ್ನು ಕಟ್ಟಬೇಕಾದರೆ ಮಾನವ ಹಕ್ಕುಗಳನ್ನು ಗೌರವಿಸುವುದು, ಸ್ವತಂತ್ರ ಮಾಧ್ಯಮ ಮತ್ತು ನಾಗರಿಕ ಸಂಘಟನೆಗಳ ಪಾತ್ರ ಮಹತ್ತರವಾದುದು ಎಂದು ತಾನು ಭಾರತದ ಪ್ರಧಾನ ಮಂತ್ರಿ ಮೋದಿಯವರೊಂದಿಗೆ ಪ್ರಸ್ತಾಪಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ತಿಳಿಸಿದ್ದಾರೆ.  

- Advertisement -

ಜಿ-20 ಸಮಾವೇಶದಲ್ಲಿ ಭಾಗವಹಿಸಿದ ನಂತರ ದೆಹಲಿಯಿಂದ ವಿಯೆಟ್ನಾಂಗೆ ಹಾರಿದ ಅಮೆರಿಕದ ಅಧ್ಯಕ್ಷ ಬೈಡನ್, ತಾವು ನರೇಂದ್ರ ಮೋದಿ ಅವರೊಂದಿಗೆ ಭಾರತ-ಅಮೆರಿಕ ಬಾಂಧವ್ಯವನ್ನು ಬಲಗೊಳಿಸುವ ಬಗ್ಗೆ ಮಾತುಕತೆ ನಡೆಸಿದ್ದಾಗಿ ತಿಳಿಸಿದರು. ಜಿ-20 ಶೃಂಗಸಭೆಯ ಆತಿಥ್ಯ ಮತ್ತು ಭಾರತದ ನಾಯಕತ್ವಕ್ಕಾಗಿ ಅವರು ಮೋದಿಯವರಿಗೆ ಧನ್ಯವಾದ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಮೆರಿಕದ ಅಧ್ಯಕ್ಷರಾದ ನಂತರ ಜೋ ಬೈಡನ್ ಅವರ ಮೊದಲ ಭಾರತ ಭೇಟಿ ಇದಾಗಿತ್ತು.

ದ್ವಿಪಕ್ಷೀಯ ರಕ್ಷಣಾ ಸಹಭಾಗಿತ್ವವನ್ನು ಇನ್ನಷ್ಟು ಆಳ ಮತ್ತು ವಿಸ್ತೃತಗೊಳಿಸುವ ನಿಟ್ಟಿನಲ್ಲಿ 31 ಡ್ರೋನ್‌ಗಳನ್ನು ತರಿಸಿಕೊಳ್ಳಲು ಮತ್ತು ಜೆಟ್ ಇಂಜಿನ್‌ಗಳ ಜಂಟಿ ಅಭಿವೃದ್ಧಿಗೆ ಭಾರತ ಮುಂದಾಗಿರುವುದನ್ನು ಅವರು ಸ್ವಾಗತಿಸಿದರು.

ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ದ್ವಿಪಕ್ಷೀಯ ಮಾತುಕತೆಯ ನಂತರ ಪ್ರಶ್ನೆಗಳನ್ನು ಕೇಳಲು ಅವಕಾಶ ನೀಡುವಂತೆ ವೈಟ್ ಹೌಸ್ ಮೂಲಕ ಅಮೆರಿಕದ ಪತ್ರಕರ್ತರು ಹಲವು ಬಾರಿ ಮನವಿ ಮಾಡಿದ್ದರು. ಆದರೆ, ರಕ್ಷಣೆಯ ಕಾರಣದಿಂದ ಪತ್ರಕರ್ತರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರು ತಿಳಿಸಿದ್ದಾಗಿ ಸಿಎನ್‌ಎನ್‌ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...