ಪತಿಯೊಂದಿಗೆ ‘ಲೈಂಗಿಕ ಸಂಬಂಧ’ಕ್ಕೆ ಪತ್ನಿ ನಿರಾಕರಿಸಿದರೆ ವಿಚ್ಛೇದನ ನೀಡಬಹುದು: ಬಾಂಬೆ ಹೈಕೋರ್ಟ್

Date:

Advertisements

ಪತಿಯೊಂದಿಗೆ ಪತ್ನಿ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸುವುದು, ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಪತಿಯನ್ನು ಅನುಮಾನಿಸುವುದು ಕ್ರೌರ್ಯಕ್ಕೆ ಸಮಾನವಾಗಿದೆ. ಇಂತಹ ವಿಚಾರಗಳನ್ನು ವಿಚ್ಛೇದನ ಪಡೆಯಲು ಕಾರಣವಾಗಿ ಉಲ್ಲೇಖಿಸಬಹುದು ಎಂದು ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ.

ದಂಪತಿಗಳಿಗೆ ಪುಣೆ ಕೌಟುಂಬಿಕ ನ್ಯಾಯಾಲಯವು ನೀಡಿದ ವಿಚ್ಛೇದನವನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಬಾಂಬೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯಲ್ಲಿ ವಾದಿಸಿದ್ದ ಮಹಿಳೆಯು, ತಮಗೆ ತನ್ನ ಅತ್ತೆ-ಮಾವ ಮಾತ್ರವೇ ಕುರುಕುಳ ನೀಡುತ್ತಿದ್ದರು. ತನ್ನ ಪತಿಯನ್ನು ಪ್ರೀತಿಸುತ್ತೇನೆ, ಅವರಿಂದ ದೂರವಾಗಲು ಬಯಸುವುದಿಲ್ಲ. ತಮಗೆ ವಿಚ್ಛೇದನ ಬೇಡ ಎಂದು ಮನವಿ ಮಾಡಿದ್ದರು.

ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಮತ್ತು ನೀಲಾ ಗೋಖಲೆ ಅವರಿದ್ದ ಪೀಠವು, ಮಹಿಳೆಯ ಅರ್ಜಿಯನ್ನು ವಜಾಗೊಳಿಸಿದೆ. ಕುಟುಂಬಿಕ ನ್ಯಾಯಾಲಯ ನೀಡಿದ್ದ ವಿಚ್ಛೇದನ ಆದೇಶವನ್ನು ಎತ್ತಿ ಹಿಡಿದಿದೆ.

Advertisements

ಈ ಲೇಖನ ಓದಿದ್ದೀರಾ?: ರಷ್ಯಾ ತೈಲ ಖರೀದಿಸಿದರೆ 500% ಸುಂಕ ಬೆದರಿಕೆ: ಭಾರತದ ಮೇಲೆ ಅಮೆರಿಕ-ನ್ಯಾಟೋ ‘ಇಬ್ಬಂದಿ ನೀತಿ’

ವಿಚಾರಣೆ ವೇಳೆ, ಮಹಿಳೆಯು ತನ್ನ ಪತಿಯೊಂದಿಗೆ ಅವರ ಸಹೋದ್ಯೋಗಿಗಳು ಮತ್ತು ಸ್ನೇಹಿತರ ಎದುರು ವರ್ತಿಸಿರುವ ರೀತಿಯನ್ನು ದೌರ್ಜನ್ಯವೆಂದು ಪರಿಗಣಿಸಲಾಗಿದೆ. ವಿಶೇ‍ಷಚೇತನ ಸಹೋದರಿ ಮತ್ತು ಅವರ ಕುಟುಂಬ ಸದಸ್ಯರ ವಿಚಾರದಲ್ಲಿ ಆಕೆಯ ಅಸಡ್ಡೆ ಕೂಡ ಅವರ ದುಃಖಕ್ಕೆ ಕಾರಣವಾಗಿದೆ ಎಂಬುದನ್ನು ನ್ಯಾಯಾಧೀಶರು ಗಮನಿಸಿದ್ದಾರೆ.

ಮಹಿಳೆಯ ಪತಿ ಪರವಾಗಿ ವಾದ ಮಂಡಿಸಿ ವಕೀಲರು, “2013ರಲ್ಲಿ ವಿವಾಹವಾದ ದಂಪತಿಗಳು ಅಂದಿನಿಂದಲೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಪತಿಯ ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ಉದ್ಯೋಗಿಗಳ ಎದುರು ಆಕೆ ಕಿರುಕುಳ ನೀಡುವ ರೀತಿಯಲ್ಲಿ ವರ್ತಿಸಿದ್ದಾರೆ. ಪತಿಯೊಂದಿಗೆ ಲೈಂಗಿಕ ಸಂಬಂಧವನ್ನು ನಿರಾಕರಿದ್ದಾರೆ. ಮಾತ್ರವಲ್ಲದೆ, ವಿವಾಹೇತರ ಸಂಬಂಧ ಹೊಂದಿದ್ದಾನೆಂದು ಶಂಕಿಸಿ, ನಿರಂತರ ಜಗಳ ಮಾಡುವ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಮದುವೆಯಾದ ಎರಡೇ ವರ್ಷದಲ್ಲಿ – 2015ರಲ್ಲಿ ಅರ್ಜಿದಾರ ಮಹಿಳೆಯ ಪತಿಯು ವಿಚ್ಛೇದನಕ್ಕಾಗಿ ಪುಣೆಯ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಅವರ ಮನವಿಯನ್ನು ಪುರಸ್ಕರಿಸಿತ್ತು. ವಿಚ್ಛೇದನ ನೀಡಿತ್ತು. ವಿಚ್ಛೇದನದ ಆದೇಶವನ್ನು ಪ್ರಶ್ನಿಸಿ, ಮಹಿಳೆಯು ಬಾಂಬೆ ಹೈಕೋರ್ಟ್‌ ಮೊರೆಹೋಗಿದ್ದರು. ಆದರೆ, ಆಕೆಯ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X