ಯೂಟ್ಯೂಬ್ ನೋಡಿ ಚಿಕಿತ್ಸೆ; ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕ ಸಾವು !

Date:

Advertisements

ಖಾಸಗಿ ಕ್ಲಿನಿಕ್‌ನ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೊ ನೋಡಿಕೊಂಡು ಚಿಕಿತ್ಸೆ ನೀಡಿದ್ದರಿಂದ ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕರೊಬ್ಬರು ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಮೃತ ಯುವಕನನ್ನು ದೀಪಕ್ ಪಾಸ್ವಾನ್ (24) ಎಂದು ಗುರುತಿಸಲಾಗಿದ್ದು, ಆತ ಕೇಂದ್ರೀಯ ಕೈಗಾರಿಕಾ ಭದ್ರತೆ ಪಡೆಗೆ ಉದ್ಯೋಗಕ್ಕೆ ಸೇರ್ಪಡೆಯಾಗಬೇಕಿತ್ತು. ಆದರೆ,ಆತನಿಗೆ ಶನಿವಾರ ಸಂಜೆ ವಾಂತಿ ಕಾಣಿಸಿಕೊಂಡಿದ್ದರಿಂದ, ಇಲ್ಲಿನ ಕದಮ್ ಕ್ವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೇಂದ್ರ ನಗರ ರಸ್ತೆ ಸಂಖ್ಯೆ 3ರಲ್ಲಿರುವ ಖಾಸಗಿ ಕ್ಲಿನಿಕ್ ಒಂದಕ್ಕೆ ದಾಖಲಾಗಿದ್ದರು. ಆದರೆ, ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದೀಪಕ್ ಪಾಸ್ವಾನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೆ ಕ್ಲಿನಿಕ್ ಅನ್ನು ಧ್ವಂಸಗೊಳಿಸಿರುವ ಆತನ ಸಂಬಂಧಿಕರು, ವೈದ್ಯರು ಯೂಟ್ಯೂಬ್ ವಿಡಿಯೊ ನೋಡಿಕೊಂಡು ಚಿಕಿತ್ಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ನಂತರದಲ್ಲಿ ಪಾಸ್ವಾನ್ ಕುಟುಂಬದ ಸದಸ್ಯರು ಕದಮ್ ಕ್ವಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಈ ಕುರಿತು ಪ್ರತಿಕ್ರಿಯಿಸಿದ ಪಾಸ್ವಾನ್ ಸಹೋದರ, ಒಂದು ವೇಳೆ ಅಲ್ಲಿ ವೈದ್ಯರಿದ್ದು, ಆತನಿಗೆ ಸೂಕ್ತ ಚಿಕಿತ್ಸೆ ಒದಗಿಸಿದ್ದರೆ, ಆತ ಬದುಕುಳಿದಿರುತ್ತಿದ್ದ. ನನ್ನ ಸಹೋದರ ಪಾಸ್ವಾನ್ ಇನ್ನು 24 ಗಂಟೆಯೊಳಗೆ ಗುಣಮುಖವಾಗಲಿದ್ದಾನೆ ಎಂದು ಕ್ಲಿನಿಕ್‌ನ ವೈದ್ಯರು ಭರವಸೆ ನೀಡಿದ್ದರು ಎಂದೂ ಅವರು ದೂರಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೆ ಸ್ಥಳಕ್ಕೆ ಧಾವಿಸಿದ ಕದಮ್ ಕ್ವಾನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ವರದಿಯನ್ನು ಸಿದ್ಧಪಡಿಸಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸದರ್ ಉಪ ವಿಭಾಗ ಪೊಲೀಸ್ ಅಧಿಕಾರಿ ದೀಕ್ಷಾ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X