ಬಹುಮತ ಬರದಿದ್ದರೆ ಬಿಜೆಪಿ ಪ್ಲಾನ್ ಬಿ ಬಗ್ಗೆ ಚಿಂತಿಸುತ್ತಿದೆಯೆ: ಅಮಿತ್ ಶಾ ಹೇಳಿದ್ದೇನು?

Date:

Advertisements

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ದರೆ ಪ್ಲಾನ್‌ ಬಿ ಬಗ್ಗೆ ಚಿಂತಿಸುತ್ತಿದೆಯೆ? ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿಗಾರರ ಪ್ರಶ್ನೆಗೆ ಕೊಟ್ಟ ಉತ್ತರ ಹೀಗಿತ್ತು.

“ಪ್ಲಾನ್‌ ಎ ನಲ್ಲಿ ಶೇ.60 ರಷ್ಟು ಸಾಧ್ಯತೆಗಳು ಯಶಸ್ವಿಯಾಗದಿದ್ದರೆ ಮಾತ್ರ ಪ್ಲಾನ್‌ ಬಿ ಬಗ್ಗೆ ಚಿಂತಿಸುವ ಅಗತ್ಯವಿದೆ. ಅಂತಹ ಸಾಧ್ಯತೆಗಳು ನಾನು ನೋಡುವುದಿಲ್ಲ. ನನಗೆ ಖಚಿತ ವಿಶ್ವಾಸವಿದೆ ಪ್ರಧಾನಿ ನರೇಂದ್ರ ಮೋದಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದಾರೆ” ಎಂದು ತಿಳಿಸಿದರು.

“ವಯಸ್ಸು, ಜಾತಿಯನ್ನೂ ಮೀರಿ ಮೋದಿ ಸರ್ಕಾರದ ಅನುಕೂಲ ಪಡೆದುಕೊಂಡವರು 400 ಸಂಖ್ಯೆ ನೀಡಲಿದ್ದಾರೆ. ದಕ್ಷಿಣ ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡಿನಲ್ಲೂ ನಾವು ದೊಡ್ಡ ಜಯ ಗಳಿಸುತ್ತೇವೆ” ಎಂದು ಅಮಿತ್ ಶಾ ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು

543 ಸದಸ್ಯಬಲದ ಲೋಕಸಭೆಯಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿ ಒಕ್ಕೂಟ ಬಹುಮತ ಗಳಿಸಬೇಕೆಂದರೆ 272 ಸ್ಥಾನಗಳನ್ನು ಗೆಲ್ಲಬೇಕು. 2019ರಲ್ಲಿ ಬಿಜೆಪಿ 303 ಸ್ಥಾನಗಳನ್ನು ಜಯಿಸಿತ್ತು. ಎನ್‌ಡಿಎ ಒಕ್ಕೂಟ 353 ಸ್ಥಾನ ಗಳಿಸಿತ್ತು.

ಈಗಾಗಲೇ ನಾಲ್ಕು ಹಂತದ ಲೋಕಸಭೆ ಚುನಾವಣೆಯಲ್ಲಿ 23 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 379 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು,ಇನ್ನು 164 ಕ್ಷೇತ್ರಗಳು ಬಾಕಿಯಿದ್ದು, ಮೇ.20, ಮೇ. 25 ಹಾಗೂ ಜೂನ್‌ 1ರಂದು ಚುನಾವಣೆ ನಡೆಯಲಿದೆ. ಜೂನ್‌.4 ರಂದು ಫಲಿತಾಂಶ ಹೊರಬೀಳಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X