ಮಧ್ಯಪ್ರದೇಶ | ಆಸ್ಪತ್ರೆ ಸುತ್ತ ತಿರುಗುತ್ತಿದ್ದ ನಾಯಿ ಬಾಯಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

Date:

Advertisements

ಬೀದಿನಾಯಿಯೊಂದು ನವಜಾತ ಶಿಶುವಿನ ಮೃತದೇಹವನ್ನು ತನ್ನ ಬಾಯಿಯಲ್ಲಿ ಕಚ್ಚಿ ತಿರುಗುತ್ತಿದ್ದ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಆಸ್ಪತ್ರೆಯ ಶೌಚಾಲಯದ ಬಳಿಯಿದ್ದ ನಾಯಿಯ ಬಾಯಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಭದ್ರತಾ ಸಿಬ್ಬಂದಿಗಳು ನಾಯಿಯನ್ನು ಓಡಿಸಿ ಮೃತದೇಹವನ್ನು ಆಸ್ಪತ್ರೆಗೆ ಒಪ್ಪಿಸಿದ್ದಾರೆ. ಸದ್ಯ ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಜಿಲ್ಲಾ ಕೇಂದ್ರ ಕಚೇರಿಯಿಂದ ಸುಮಾರು 25 ಕಿಲೋಮೀಟರ್ ದೂರದ ಮ್ಹೌನಲ್ಲಿರುವ ನಾಗರಿಕ ಆಸ್ಪತ್ರೆಯ ಅಧಿಕಾರಿಗಳು ಮತ್ತು ಪೊಲೀಸರು ಈ ನವಜಾತ ಶಿಶುವಿನ ಸಾವು ಮತ್ತು ಪೋಷಕರು ಯಾರು ಎಂಬ ಬಗ್ಗೆ ತನಿಖೆ ನಡೆಸಲು ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ l ನವಜಾತ ಶಿಶು ಮೃತ ದೇಹ ರಾಜಕಾಲುವೆಯಲ್ಲಿ ಪತ್ತೆ 

Advertisements

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಮ್ಹೌ ನಾಗರಿಕ ಆಸ್ಪತ್ರೆಯ ಉಸ್ತುವಾರಿ ಡಾ.ಎಚ್.ಆರ್. ವರ್ಮಾ, “ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಈ ಘಟನೆ ಬೆಳಗಿನ ಜಾವ 1:30ರಿಂದ 2 ಗಂಟೆಯ ನಡುವೆ ನಡೆದಿದೆ. ಈ ಅವಧಿಯಲ್ಲಿ ಬಾಲಕಿಯೊಬ್ಬಳು ಶೌಚಾಲಯಕ್ಕೆ ಹೋಗುತ್ತಿರುವುದು ಕಂಡುಬಂದಿದೆ. ಆಕೆಯ ಮಗುವೇ ಇದಾಗಿರಬಹುದು ಎಂಬ ಅನುಮಾನವಿದೆ” ಎಂದಿದ್ದಾರೆ.

“17 ವರ್ಷದ ಬಾಲಕಿ ಹೊಟ್ಟೆ ನೋವೆಂದು ಹೇಳಿ ಆಸ್ಪತ್ರೆಗೆ ಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ದಾಖಲಾಗಿದ್ದಳು ಎಂಬುದು ತಿಳಿದುಬಂದಿದೆ. ಬಾಲಕಿ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಸಾಧ್ಯತೆಯಿದೆ” ಎಂದು ಡಾ.ಎಚ್.ಆರ್. ವರ್ಮಾ ಹೇಳಿದ್ದಾರೆ.

ಇನ್ನು ಈ ಬಾಲಕಿಯು ಈ ಘಟನೆ ನಡೆದ ಕೆಲವೇ ಸಮಯದಲ್ಲಿ ನಾಪತ್ತೆಯಾಗಿದ್ದಾಳೆ. ಅಪರಿಚಿತ ವ್ಯಕ್ತಿಯೊಂದಿಗೆ ಆಸ್ಪತ್ರೆಯಿಂದ ತೆರಳಿರುವುದು ಕಂಡುಬಂದಿದೆ. ಬಹುಶಃ ಶೌಚಾಲಯದಲ್ಲಿ ಶಿಶು ಹುಟ್ಟುವಾಗಲೇ ಮೃತಪಟ್ಟಿರಬಹುದು. ಅದನ್ನು ನಾಯಿಯೊಂದು ತೆಗೆದುಕೊಂಡು ಹೋಗಿದೆ” ಎಂದಿದ್ದಾರೆ.

“ಶನಿವಾರ ಬೆಳಿಗ್ಗೆ ಶಿಶುವಿನ ಮೃತದೇಹದ ನಾವು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಇನ್ನಷ್ಟೇ ಸಿಗಬೇಕು. ಪ್ರಾಥಮಿಕ ವರದಿಯ ಪ್ರಕಾರ ಹೆರಿಗೆ ಅಕಾಲಿಕವಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಈ ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪೊಲೀಸರಿಗೆ ಎಲ್ಲಾ ಸಿಸಿಟಿವಿ ದೃಶ್ಯವನ್ನು ನಾವು ಒದಗಿಸುತ್ತೇವೆ” ಎಂದು ವರ್ಮಾ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X