ಪಹಲ್ಗಾಮ್ ದಾಳಿ ಅಪರಾಧಿಗಳ ಶೋಧ; ಅಮಾಯಕರಿಗೆ ಹಾನಿಯಾಗದಿರಲಿ: ಸಿಎಂ ಒಮರ್ ಅಬ್ದುಲ್ಲಾ ಒತ್ತಾಯ

Date:

Advertisements

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಮಾಡಿದ ಉಗ್ರರ ಶೋಧ ಕಾರ್ಯಾಚರಣೆ ಜಮ್ಮು ಕಾಶ್ಮೀರದಲ್ಲಿ ಮುಂದುವರೆದಿದೆ. ಈ ವೇಳೆ ಅಮಾಯಕರಿಗೆ ಹಾನಿಯಾಗದಿರಲಿ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಒತ್ತಾಯಿಸಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು 28 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಸದ್ಯ ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ಭಯೋತ್ಪಾದನೆ ಮತ್ತು ಅದರ ಮೂಲದ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಭಾನುವಾರ ಜಮ್ಮು ಕಾಶ್ಮೀರ ಸಿಎಂ ಕರೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಗುಪ್ತಚರ ವೈಫಲ್ಯದ ಬಗ್ಗೆ ಅನುಮಾನವಿದೆ; ಯಾರನ್ನಾದರೂ ಹೊಣೆ ಮಾಡಬೇಕು: ಸೇನಾ ಮಾಜಿ ಮುಖ್ಯಸ್ಥ

Advertisements

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಒಮರ್, “ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಯೋತ್ಪಾದನೆ ಮತ್ತು ಅದರ ಮೂಲದ ವಿರುದ್ಧ ನಿರ್ಣಾಯಕ ಹೋರಾಟ ನಡೆಯಬೇಕು. ಕಾಶ್ಮೀರದ ಜನರು ಭಯೋತ್ಪಾದನೆ ಮತ್ತು ಮುಗ್ಧ ಜನರ ಹತ್ಯೆಯ ವಿರುದ್ಧ ಬಹಿರಂಗವಾಗಿ ಹೊರಬಂದಿದ್ದಾರೆ. ಸ್ವಯಂಪ್ರೇರಿತವಾಗಿ ಬಹಿರಂಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಬೆಂಬಲವನ್ನು ನಿರ್ಮಿಸುವ ಮತ್ತು ಜನರನ್ನು ದೂರವಿಡುವ ಯಾವುದೇ ತಪ್ಪು ಕ್ರಮವನ್ನು ತಪ್ಪಿಸುವ ಸಮಯ ಇದು. ತಪ್ಪಿತಸ್ಥರನ್ನು ಶಿಕ್ಷಿಸಿ, ಅವರ ಮೇಲೆ ಯಾವ ಕರುಣೆಯೂ ಬೇಡ. ಆದರೆ ಮುಗ್ಧ ಜನರು ಹಾನಿಗೊಳಗಾಗಲು ಬಿಡಬೇಡಿ” ಎಂದು ಮನವಿ ಮಾಡಿದ್ದಾರೆ.

ಈ ಭಯೋತ್ಪಾದನ ದಾಳಿ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಉದ್ವಿಗ್ನತೆ ಇನ್ನಷ್ಟೂ ಹೆಚ್ಚಾಗಿದೆ. ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ ರದ್ದು ಮಾಡಲಾಗುತ್ತದೆ ಎಂದು ಭಾರತ ಈಗಾಗಲೇ ಘೋಷಿಸಿದೆ. ಪಾಕಿಸ್ತಾನದಿಂದಲೂ ಭಾರತೀಯರು ವಾಪಸ್ ಬರುತ್ತಿದ್ದಾರೆ, ಇಲ್ಲಿಂದಲೂ ಪಾಕಿಸ್ತಾನ ಪ್ರಜೆಗಳು ವಾಪಸ್ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X