ಯುವತಿಯರ ಉಡುಗೆ ಬಗ್ಗೆ ಮಧ್ಯ ಪ್ರದೇಶ ಸಚಿವ ವಿವಾದಾತ್ಮಕ ಹೇಳಿಕೆ

Date:

Advertisements

ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಮಧ್ಯ ಪ್ರದೇಶ ಸಚಿವ ಕೈಲಾಶ್ ವಿಜಯ್ ವರ್ಗೀಯ ಮತ್ತೊಮ್ಮೆ ವಿವಾದವನ್ನು ಸೃಷ್ಟಿಸಿದ್ದಾರೆ.

ಇಂದೋರ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೈಲಾಶ್ ವಿಜಯ್ ವರ್ಗೀಯ, “ಯುವತಿಯರು ತುಂಡುಡುಗೆ ಧರಿಸುವುದನ್ನು ನಾನು ಇಷ್ಟಪಡುವುದಿಲ್ಲ. ಪಾಶ್ಚಿಮಾತ್ಯ ದೇಶಗಳಲ್ಲಿ ತುಂಡುಡುಗೆ ಧರಿಸಿದ ಯುವತಿಯರನ್ನು ಸೌಂದರ್ಯವತಿಯರು ಎಂದು ಪರಿಗಣಿಸಲಾಗುತ್ತದೆ. ಆದರೆ, ನಾನಿದನ್ನು ಒಪ್ಪುವುದಿಲ್ಲ. ಭಾರತದಲ್ಲಿ ಚೆನ್ನಾಗಿ ಉಡುಪು,ಆಭರಣಗಳನ್ನು ಧರಿಸಿ, ಆಕರ್ಷಕವಾಗಿ ಅಲಂಕಾರ ಮಾಡಿಕೊಂಡಿರುವ ಮಹಿಳೆಯರನ್ನು ಸೌಂದರ್ಯವತಿಯರು ಎಂದು ಪರಿಗಣಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಮಿತವಾದ ಮಾತು ಹಾಗೂ ಮಿತವಾದ ಉಡುಪಿನೊಂದಿಗೆ ಹೋಲಿಕೆ ಮಾಡಿದ ಅವರು, “ಪಾಶ್ಚಿಮಾತ್ಯ ದೇಶಗಳಲ್ಲಿ ಕಡಿಮೆ ಮಾತನಾಡುವ ಹಾಗೂ ಕಡಿಮೆ ಉಡುಪು ಧರಿಸುವ ಮಹಿಳೆಯರನ್ನು ಸೌಂದರ್ಯವತಿಯರು ಎಂದು ಪರಿಗಣಿಸಲಾಗುತ್ತದೆ. ಆದರೆ, ನಾನದನ್ನು ಒಪ್ಪುವುದಿಲ್ಲ. ಮಹಿಳೆಯು ದೇವತೆಯ ಸ್ವರೂಪವಿದ್ದಂತೆ ಎಂಬುದು ನನ್ನ ಭಾವನೆ. ಆಕೆ ಚೆನ್ನಾಗಿ ಉಡುಪುಗಳನ್ನು ಧರಿಸಬೇಕು. ತುಂಡುಡುಗೆ ಧರಿಸುವ ಮಹಿಳೆಯರು ನನಗೆ ಆಕರ್ಷಕವೆನಿಸುವುದಿಲ್ಲ” ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಜಿಕರ್‌ ಆಸ್ಪತ್ರೆ, ಅಣ್ಣಾ ವಿ ವಿ ರೀತಿ ಎಲ್ಲ ಅತ್ಯಾಚಾರ ಪ್ರಕರಣಗಳಲ್ಲೂ ತ್ವರಿತ ನ್ಯಾಯದಾನ ಅತ್ಯಗತ್ಯ

“ಕೆಲವೊಮ್ಮೆ ಯುವತಿಯರು ನನ್ನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಆಗ ನಾನು, “ಮಗಳೆ, ಮುಂದಿನ ಬಾರಿ ಸರಿಯಾದ ಬಟ್ಟೆ ಧರಿಸಿ ಬಾ. ಆಗ ಪೋಟೊ ತೆಗೆದುಕೊಳ್ಳೋಣ” ಎಂದು ಅವರಿಗೆ ಕಿವಿಮಾತು ಹೇಳುತ್ತೇನೆ” ಎಂದು ಹೇಳಿದರು.

ಸಚಿವ ಕೈಲಾಶ್ ವಿಜಯ್ ವರ್ಗೀಯ ಈ ಮೊದಲು ಕೂಡ ಇದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿದ್ದರು.

2022ರಲ್ಲಿ ಇಂದೋರ್‌ನಲ್ಲಿ ನಡೆದಿದ್ದ ಹನುಮಾನ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದಾಗ, ನಾನು ಹನುಮಾನ್ ಜಯಂತಿಯಂದು ಸುಳ್ಳು ಹೇಳುವುದಿಲ್ಲ. ಈಗಿನ ಕಾಲದ ಯುವತಿಯರು ಅಸಹ್ಯ ಉಡುಪುಗಳನ್ನು ಧರಿಸುತ್ತಾರೆ. ನಾವು ಅವರನ್ನು ದೇವತೆಯರು ಎಂದು ಕರೆಯುತ್ತೇವೆ. ಆದರೆ, ಅವರು ಹಾಗೆ ಕಾಣಿಸುವುದಿಲ್ಲ. ಅವರು ಶೂರ್ಪನಖಿಗಳಂತೆ ಕಾಣಿಸುತ್ತಾರೆ. ದೇವರು ನಿಮಗೆ ಸುಂದರವಾದ ದೇಹ ನೀಡಿದ್ದಾನೆ. ಕನಿಷ್ಠ ಪಕ್ಷ ಸಭ್ಯ ಉಡುಪುಗಳನ್ನಾದರೂ ಧರಿಸಿ. ನಿಮ್ಮ ಮಕ್ಕಳಿಗೆ ಮೌಲ್ಯಗಳನ್ನು ಕಲಿಸಿ” ಎಂದು ತಾಕೀತು ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X