ಅನ್ನದಾತರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬೇಡಿ: ಕೇಂದ್ರದ ವಿರುದ್ಧ ಎಂ ಎಸ್ ಸ್ವಾಮಿನಾಥನ್ ಪುತ್ರಿ ಆಕ್ರೋಶ

Date:

Advertisements

ಇತ್ತೀಚಿಗಷ್ಟೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ಕೃಷಿ ಕ್ರಾಂತಿಯ ಹರಿಕಾರ ಎಂ ಎಸ್ ಸ್ವಾಮಿನಾಥನ್ ಪುತ್ರಿ ರೈತರ ಪ್ರತಿಭಟನೆಗೆ ಸರ್ಕಾರ ನಡೆಸಿಕೊಳ್ಳುವ ರೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅರ್ಥಶಾಸ್ತ್ರಜ್ಞೆಯು ಆಗಿರುವ ಮಧುರಾ ಸ್ವಾಮಿನಾಥನ್, ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬೇಡಿ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಪಂಜಾಬಿನ ರೈತರು ಇಂದು ದೆಹಲಿಗೆ ಮೆರವಣಿಗೆ ಹೊರಟಿದ್ದಾರೆ. ಪತ್ರಿಕೆಗಳ ವರದಿಯಂತೆ ಹರಿಯಾಣದಲ್ಲಿ ಜೈಲುಗಳನ್ನು ಸಿದ್ದಪಡಿಸಲಾಗುತ್ತಿದೆ.ಬ್ಯಾರಿಕೇಡ್‌ಗಳಿವೆ, ರೈತರನ್ನು ತಡೆಯಲು ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ” ಎಂದು ತಿಳಿಸಿದರು.

Advertisements

“ಅವರು ರೈತರು, ಅಪರಾಧಿಗಳಲ್ಲ. ಮುಂಚೂಣಿಯಲ್ಲಿರುವ ಭಾರತದ ಎಲ್ಲ ವಿಜ್ಞಾನಿಗಳಿಗೆ ನಾನು ಮನವಿ ಮಾಡುವುದೇನೆಂದರೆ ನಾವು ಅನ್ನದಾತರೊಂದಿಗೆ ಮಾತನಾಡಬೇಕು. ನಾವು ಅವರನ್ನು ಅಪರಾಧಿಗಳಂತೆ ಪರಿಗಣಿಸಬಾರದು. ನಾವು ಇದಕ್ಕೆ ಪರಿಹಾರ ಹುಡುಕಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ದಯವಿಟ್ಟು ಇದು ನನ್ನ ಮನವಿ. ನಾವು ಎಂ ಎಸ್‌ ಸ್ವಾಮಿನಾಥನ್‌ ಅವರನ್ನು ಗೌರವಿಸಬೇಕೆಂದರೆ ಭವಿಷ್ಯತ್ತಿನಲ್ಲಿ ಯಾವುದಾದರೂ ಕಾರ್ಯತಂತ್ರದ ಯೋಜನೆಗಳನ್ನು ರೂಪಿಸಿದರೂ ನಮ್ಮೊಂದಿಗೆ ರೈತರನ್ನು ಕರೆದುಕೊಂಡು ಹೋಗಬೇಕು” ಎಂದು ಮಧುರಾ ಸ್ವಾಮಿನಾಥನ್ ಹೇಳಿದರು.

ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಪಂಜಾಬ್,ಹರಿಯಾಣ ಹಾಗೂ ಉತ್ತರ ಪ್ರದೇಶದ ಒಂದು ಲಕ್ಷಕ್ಕೂ ಅಧಿಕ ರೈತರು (ಫೆ.13ರಿಂದ) ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನಿನ್ನೆ ಪಂಜಾಬ್ – ಹರಿಯಾಣ ಗಡಿಯಲ್ಲಿ ಮೆರವಣಿಗೆ ಸಾಗುವಾಗ ರೈತರು ಪೊಲೀಸರು ನಿರ್ಮಿಸಿದ್ದ ಬ್ಯಾರಿಕೇಡ್‌ಗಳನ್ನು ಮುರಿಯಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಪೊಲೀಸರು ರೈತರ ಮೇಲೆ ಅಶ್ರುವಾಯು ಶೆಲ್, ಸ್ಮೋಕ್‌ ಬಾಂಬ್, ರಬ್ಬರ್ ಬುಲೆಟ್‌ಗಳು, ಜಲ ಪಿರಂಗಿಗಳನ್ನು ಬಳಸಿದರು. ಪೊಲೀಸರ ದಾಳಿಯಿಂದಾಗಿ  ಹಲವು ರೈತರು ಗಾಯಗೊಂಡರು. ಕೆಲವರನ್ನು ಬಂಧಿಸಲಾಯಿತು.

ರೈತರನ್ನು ದೆಹಲಿಯತ್ತ ಬರುವುದನ್ನು ತಡೆಯುವ ಸಲುವಾಗಿಯೆ ಮುಳ್ಳುತಂತ್ತಿಗಳ ಬ್ಯಾರಿಕೇಡ್‌ಗಳು, ಚೂಪಾದ ಬಾಣದ ರೀತಿಯ ಸಲಾಕೆಗಳು, ಸಿಮೆಂಟ್ ತಡೆಗೋಡೆ ಮುಂತಾದ ಕ್ರಮವನ್ನು ಪೊಲೀಸರು ಅಳವಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X