ಯೆಚೂರಿ, ದೇವರಾಜನ್ ಭಾಷಣದ ಸರ್ವಾಧಿಕಾರಿ-ಮುಸ್ಲಿಂ ಪದ ಸೆನ್ಸಾರ್ ಮಾಡಿದ ರೇಡಿಯೋ, ದೂರದರ್ಶನ

Date:

Advertisements

ದೂರದರ್ಶನ ಹಾಗೂ ಆಲ್‌ ಇಂಡಿಯಾ ರೇಡಿಯೋ ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹಾಗೂ ಆಲ್‌ ಇಂಡಿಯಾ ಫಾರ್ವರ್ಡ್ ಬ್ಲಾಕ್ ನಾಯಕ ಜಿ ದೇವರಾಜನ್‌ ಅವರ ಕೇಂದ್ರ ಸರ್ಕಾರವನ್ನು ಟೀಕಿಸುವ ಭಾಷಣದ ತುಣುಕುಗಳನ್ನು ಸೆನ್ಸಾರ್‌ ಮಾಡಿದೆ.

ಈ ಇಬ್ಬರು ನಾಯಕರು ತಮ್ಮ ಭಾಷಣಗಳಲ್ಲಿ ಬಳಸಿದ್ದ ‘ಕೋಮುವಾದಿ ಸರ್ವಾಧಿಕಾರಿ ಆಡಳಿತ’, ‘ಕಠಿಣ ಕಾನೂನುಗಳು’ ಹಾಗೂ ‘ಮುಸ್ಲಿಂ’ ಪದಗಳನ್ನು ಸೆನ್ಸಾರ್‌ಗೊಳಪಡಿಸಿದೆ.

ಚುನಾವಣಾ ಆಯೋಗದ ನಿರ್ದೇಶನಗಳ ಅನುಸಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೂರದರ್ಶನದ ಅಧಿಕಾರಿಗಳು ತಿಳಿಸಿದ್ದಾರೆ. ಭಾಷಣಕ್ಕೂ ಮೊದಲು ಸೀತಾರಾಮ್‌ ಯೆಚೂರಿ ಅವರಿಗೆ ಕೋಮುವಾದಿ ಸರ್ವಾಧಿಕಾರಿ ಆಡಳಿತ ಪದವನ್ನು ಬಳಸದಂತೆ ಕೇಂದ್ರ ಸರ್ಕಾರದ ಮಾಧ್ಯಮಗಳು ಸಲಹೆ ನೀಡಿದ್ದವು.

Advertisements

ಅದೇ ರೀತಿ ಜಿ ದೇವರಾಜನ್‌ ಅವರಿಗೆ ಮುಸ್ಲಿಮರು ಪದ ಬಳಸದಂತೆ ಕೂಡ ಎಐಆರ್‌ ಹಾಗೂ ದೂರದರ್ಶನ ಸೂಚನೆ ನೀಡಿತ್ತು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಚುನಾವಣಾ ಚಿಹ್ನೆಗಳ(ಮೀಸಲು ಮತ್ತು ಹಂಚಿಕೆ) ನಿಬಂಧನೆಗಳ ಆದೇಶ 1968ರಡಿ 6 ರಾಷ್ಟ್ರೀಯ ಪಕ್ಷಗಳು ಹಾಗೂ 59 ರಾಜ್ಯ ಪಕ್ಷಗಳಿಗೆ ಚುನಾವಣಾ ಪ್ರಚಾರ ಸುದ್ದಿ ಪ್ರಸಾರವಾಗುವ ಅರ್ಹತೆ ಹೊಂದಿವೆ. ರಾಷ್ಟ್ರ ಹಾಗೂ ರಾಜ್ಯಗಳನ್ನು ಪ್ರತಿನಿಧಿಗಳ ಚುನಾವಣಾ ಪ್ರಚಾರವನ್ನು ಪ್ರಸಾರ ಮಾಡಲು ಅನುಮತಿಸಲಾಗಿರುವುದನ್ನು ಏಪ್ರಿಲ್‌ನಲ್ಲಿ ಹೊರಡಿಸಿರುವ ಚುನಾವಣಾ ಆಯೋಗದ ಆದೇಶದಲ್ಲಿ ತಿಳಿಸಲಾಗಿತ್ತು.

ಈ ಬಗ್ಗೆ ಮಾತನಾಡಿರುವ ಸೀತಾರಾಂ ಯೆಚೂರಿ, ನಾನು ಮಾತನಾಡಿರುವ ಹಿಂದಿ ಆವೃತ್ತಿಯಲ್ಲಿ ಯಾವುದೇ ಸಮಸ್ಯೆಗಳು ಇರಲಿಲ್ಲ. ಇಂಗ್ಲಿಷ್‌ಗೆ ತರ್ಜುಮೆ ಮಾಡಿದ ನಂತರ ನನ್ನ ಪದಗಳನ್ನು ಅಳಿಸಿದ್ದಾರೆ ಎಂದು ಹೇಳಿದರು.

ದೇವರಾಜನ್‌ ಕೂಡ ಈ ಬಗ್ಗೆ ಮಾತನಾಡಿ, ನಾನು ನನ್ನ ಭಾಷಣದಲ್ಲಿ ಸಿಎಎ ವಿವಾದದಲ್ಲಿನ ತಾರತಮ್ಯದ ಷರತ್ತುಗಳ ಬಗ್ಗೆ ಉಲ್ಲೇಖಿಸಿದ್ದೆ. ಅವರು ಮುಸ್ಲಿಂ ಪದವನ್ನು ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ನಾನು ಸಿಎಎ ಕಾನೂನಿನಲ್ಲಿ ಮುಸ್ಲಿಮರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸರ್ಕಾರದ ಮಾಧ್ಯಮಗಳಿಗೆ ಮನವರಿಕೆ ಮಾಡಿದರೂ ಪದವನ್ನು ಉಳಿಸಿಕೊಳ್ಳದೆ ಅಳಿಸಿದ್ದಾರೆ ಎಂದು ತಿಳಿಸಿದರು.

ಈ ಇಬ್ಬರು ನಾಯಕರು ಮಾತನಾಡಿದ ಭಾಷಣವು ಏ.16ರಂದು ದೂರದರ್ಶನದಲ್ಲಿ ಪ್ರಸಾರವಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X