ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಬಾಗಿಲು ಸದಾ ತೆರೆದಿರುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಒಕ್ಕೂಟ ಸೇರ್ಪಡೆಗೆ ಮತ್ತೆ ಆಹ್ವಾನಿಸಿದ್ದಾರೆ. ಇತ್ತೀಚಿಗಷ್ಟೆ ನಿತೀಶ್ ಕುಮಾರ್ ಅವರು ಆರ್ಜೆಡಿ ಸಖ್ಯ ಬಿಟ್ಟು ಬಿಜೆಪಿ ಜೊತೆ ಸೇರಿ ಪುನಃ ಸರ್ಕಾರ ರಚಿಸಿದ್ದರು.
ಜೆಡಿಯು ಹಾಗೂ ಆರ್ಜೆಡಿ ಮೈತ್ರಿಕೂಟ ಸರ್ಕಾರ ಬಿದ್ದ ನಂತರದಿಂದ ಲಾಲು ಪ್ರಸಾದ್ ಯಾದವ್ ಅವರು ಮೌನಕ್ಕೆ ಜಾರಿದ್ದರು. ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ.
ಇಬ್ಬರು ನಾಯಕರು ಗುರುವಾರ ಬಿಹಾರ ವಿದಾನಸೌಧದ ಆವರಣದಲ್ಲಿ ಸಾಂಪ್ರದಾಯಿಕವಾಗಿ ಹಸ್ತಲಾಘವ ಮಾಡಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಮೂತ್ರಕೋಶ ಕಸಿ ಚಿಕಿತ್ಸೆಯ ನಂತರ ಲಾಲು ಪ್ರಸಾದ್ ಯಾದವ್ ಅವರು ಹೆಚ್ಚಾಗಿ ಮನೆಯಲ್ಲಿಯೇ ಇರುತ್ತಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುತ್ತಿರುವ ಮನೋಜ್ ಝಾ ಹಾಗೂ ಸಂಜಯ್ ಯಾದವ್ ಅವರಿಗೆ ನೈತಿಕ ಸ್ಥೈರ್ಯ ತುಂಬುವುದಕ್ಕಾಗಿ ನಾಮಪತ್ರ ಸಲ್ಲಿಕೆಯ ದಿನದಂದು ಅವರ ಜೊತೆ ಕಾಣಿಸಿಕೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ
ಪತ್ರಕರ್ತರು ಲಾಲು ಅವರನ್ನು ವಿಧಾನಸಭೆ ಆವರಣದಲ್ಲಿ ಪ್ರಶ್ನಿಸಿದಾಗ ಅವರು ವಾಪಸ್ ಬರಲಿ,ಆನಂತರ ನಾವು ನೋಡೋಣ ಎಂದಿದ್ದರು.
ನಿತೀಶ್ ಅವರು ಆರ್ಜೆಡಿ ಮೈತ್ರಿ ಬಿಡುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಜೆಡಿಯು ದೂರವಾದ ನಂತರ ಎರಡು ಬಾರಿಯು ಡಿಸಿಎಂ ಸ್ಥಾನ ಕಳೆದುಕೊಂಡಿದ್ದರು.
ಲಾಲು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ವಕ್ತಾರ ನೀರಜ್ ಕುಮಾರ್, ಲಾಲು ಅವರು ಬಾಗಿಲು ತೆರೆದಿದೆ ಎಂದು ಹೇಳುತ್ತಾರೆ. ನಮ್ಮ ನಾಯಕ ನಿತೀಶ್ ಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ ಆರ್ಜೆಡಿಯೊಂದಿಗೆ ಅಧಿಕಾರ ಹಂಚಿಕೊಂಡರೆ ಭ್ರಷ್ಟಚಾರದೊಂದಿಗೆ ಭಾಗಿಯಾಗಬೇಕಾಗುತ್ತದೆ. ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ” ಎಂದು ತಿಳಿಸಿದ್ದಾರೆ.