‘ಡಬಲ್ ಸ್ಟ್ಯಾಂಡ್’ | ನೆಟ್ಟಿಗರ ಟ್ರೋಲ್‌ಗೆ ಗುರಿಯಾದ ಗೌತಮ್ ಗಂಭೀರ್

Date:

Advertisements

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ‘ಫ್ಯಾಂಟಸಿ ಕ್ರಿಕೆಟ್ ಅಪ್ಲಿಕೇಶನ್’ನ ಜಾಹೀರಾತನ್ನು ಸಾಮಾಜಿಕ ಜಾಲತಾಣಗಳ ತಮ್ಮ ಖಾತೆಯಲ್ಲಿ ಹಂಚಿಕೊಂಡ ಬಳಿಕ ಭಾರೀ ಟ್ರೋಲ್‌ಗೆ ಗುರಿಯಾಗಿದ್ದಾರೆ. ಬಿಜೆಪಿಯ ಮಾಜಿ ಸಂಸದರೂ ಆಗಿರುವ ಗಂಭೀರ್ ನೆಟ್ಟಿಗರ ಟ್ರೋಲ್‌ನಿಂದ ಮುಜುಗರಕ್ಕೆ ಸಿಲುಕಿದ್ದಾರೆ.

ಬೆಟ್ಟಿಂಗ್ ಅಪ್ಲಿಶೇಷನ್‌ ಆಗಿರುವ ‘ರಿಯಲ್ 11’ನ ಪ್ರಚಾರಕ್ಕಾಗಿ ಅದರ ಜಾಹೀರಾತನ್ನು ಇನ್ಸ್‌ಟಾಗ್ರಾಂ, ಎಕ್ಸ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಗಂಭೀರ್ ಹಂಚಿಕೊಂಡಿದ್ದಾರೆ. ಅವರು ಜಾಹೀರಾತನ್ನು ಹಂಚಿಕೊಂಡ ಕೆಲವೇ ನಿಮಿಷಗಳಲ್ಲಿ ಅವರ ಅಭಿಮಾನಿಗಳು ‘ಬೆಟ್ಟಿಂಗ್ ಅಪ್ಲಿಕೇಶನ್’ಅನ್ನು ಪ್ರಚಾರ ಮಾಡುತ್ತಿರುವ ಗಂಭೀರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟೀಕೆ ಮಾಡಿದ್ದಾರೆ.

ಜಾಹೀರಾತನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಗಂಭೀರ್, “ಆಶಾದಾಯಕವಾಗಿ, ಭಾರತವು T20 ಕ್ರಿಕೆಟ್‌ ಸರಣಿಯಲ್ಲಿ ಬಾಂಗ್ಲಾದೇಶದ ವಿರುದ್ಧ ತಮ್ಮ ಪ್ರಾಬಲ್ಯವನ್ನು ಮುಂದುವರೆಸುತ್ತದೆ. Real11official ಜೊತೆಗೆ ಟಿ20ಯ ಮೂರು ಪಂದ್ಯಗಳ ಸರಣಿಯನ್ನು ನೋಡಿ, ಆನಂದಿಸಿರಿ. ಭಾರತ ತಂಡವು 3-0 ಅಂತರದಲ್ಲಿ ಸರಳಿಯನ್ನು ಗೆಲ್ಲುತ್ತದೆಯೇ? ನಿಮ್ಮ ಅಭಿಪ್ರಾಯವನ್ನು ಹೌದು/ಇಲ್ಲವೆಂದು ಹಂಚಿಕೊಳ್ಳಿ ಹಾಗೂ ತ್ವರಿತ ನಗದು ಬಹುಮಾನಗಳನ್ನು ಪಡೆಯಿರಿ” ಎಂದು ಪೋಸ್ಟ್‌ ಮಾಡಿದ್ದಾರೆ.

Advertisements

ಈ ಹಿಂದೆ, ಇದೇ ಗಂಭೀರ್‌ ಅವರು ಪಾನ್ ಮಸಾಲಾ ಮತ್ತು ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ ಮಾಜಿ ಕ್ರಿಕೆಟಿಗರನ್ನು ಟೀಕಿಸಿದ್ದರು. ಇದೀಗ, ಅವರೇ ‘ಬೆಟ್ಟಿಂಗ್ ಅಪ್ಲಿಕೇಶನ್‌’ಅನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಗಂಭೀರ್ ಅವರ ‘ಡಬಲ್ ಸ್ಟ್ಯಾಂಡ್‌’ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X