ಸಾಮಾಜಿಕ ಮಾಧ್ಯಮದಲ್ಲಿ ಮಕ್ಕಳ ಖಾತೆಗಳಿಗೆ ಪೋಷಕರ ಒಪ್ಪಿಗೆ ಕಡ್ಡಾಯ : ಕರಡು ನಿಯಮಾವಳಿ

Date:

Advertisements

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳು 2025ರಲ್ಲಿ ಪ್ರಸ್ತಾಪಿಸಲಾದ ಕರಡು ನಿಯಮಗಳ ಪ್ರಕಾರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತೆರೆಯಲು ಮಕ್ಕಳಿಗೆ ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಸಾಮಾಜಿಕ ಮಾಧ್ಯಮ ಖಾತೆ ಹೊಂದಿರುವವರು ವಯಸ್ಕರು ಆಗಿರಬೇಕು ಅಥವಾ ಪೋಷಕರ ಒಪ್ಪಿಗೆ ಇರಬೇಕು ಎಂದು ನಿಯಮ ಹೇಳುತ್ತದೆ.

ಕೇಂದ್ರ ಸರ್ಕಾರ ಶುಕ್ರವಾರ ಕರಡು ನಿಯಮಗಳನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಆಕ್ಷೇಪಣೆ ಮತ್ತು ಸಲಹೆ ನೀಡಲು ತಿಳಿಸಿದೆ. mygov.inನಲ್ಲಿ ಆಕ್ಷೇಪಣೆ ವ್ಯಕ್ತಪಡಿಸಬಹುದಾಗಿದೆ. ಫೆಬ್ರವರಿ 18ರಿಂದ ಈ ಕರಡು ನಿಯಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಶುಕ್ರವಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ಭಾರತದ ಸಾಮಾಜಿಕ ಮಾಧ್ಯಮ ಆಪ್ ‘ಕೂ’ ಶೀಘ್ರದಲ್ಲೇ ಸ್ಥಗಿತ

Advertisements

ಸಾಮಾಜಿಕ ಮಾಧ್ಯಮ ಖಾತೆಗಳನ್ನು ತೆರೆಯಲು ಮಗುವಿಗೆ ಪೋಷಕರು ನೀಡಿದ ಒಪ್ಪಿಗೆಯನ್ನು ‘ಪರಿಶೀಲಿಸುವ’ ಅಗತ್ಯವಿದೆ ಎಂದು ನಿಯಮಗಳು ಹೇಳುತ್ತವೆ. ಇನ್ನು ವಿಶೇಷ ಚೇತನರ ಸಾಮಾಜಿಕ ಜಾಲತಾಣ ತೆರೆಯುವಾಗಲೂ ವ್ಯಕ್ತಿಯ ಒಪ್ಪಿಗೆ ಪಡೆಯಲಾಗಿದೆಯೇ ಎಂದು ಪರಿಶೀಲಿಸುವುದು ಅಗತ್ಯವಾಗಿದೆ.

ಮಗುವಿನ ಯಾವುದೇ ವೈಯಕ್ತಿಕ ಡೇಟಾ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರಕಟಿಸುವ ಮೊದಲು ಪೋಷಕರ ಒಪ್ಪಿಗೆ ಇದೆಯೇ ಎಂದು ಪರಿಶೀಲಿಸುವುದು ಮುಖ್ಯವಾಗಿದೆ ಎಂದು ಕೂಡಾ ನಿಯಮ ಹೇಳುತ್ತದೆ.

ಇನ್ನು ಈ ಕರಡು ನಿಯಮಗಳ ಪ್ರಕಾರ ಬಳಕೆದಾರರ ಕೆಲವು ಡೇಟಾಗಳನ್ನು ಅಳಿಸಬಹುದಾಗಿದೆ. ಒಂದು ಸಂಸ್ಥೆಯು ಬಳಕೆದಾರರ ವೈಯಕ್ತಿಕ ಡೇಟಾವನ್ನು ಸಂಗ್ರಹಿಸಿದರೆ ಆ ಬಗ್ಗೆ ಪಾರದರ್ಶಕತೆ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ಒಂದು ವೇಳೆ ಬಳಕೆದಾರರ ಯಾವುದೇ ಡೇಟಾ ದುರ್ಬಳಕೆಯಾದರೆ ಸುಮಾರು 250 ಕೋಟಿ ರೂಪಾಯಿ ದಂಡವನ್ನು ವಿಧಿಸಲಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X