ಪಾಕ್‌ಗೆ ಮಾಹಿತಿ ಸೋರಿಕೆ ಮಾಡಿದ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್‌ ಕಾರ್ಯಕರ್ತ; ಕಾಂಗ್ರೆಸ್ ಆರೋಪ

Date:

ದೇಶದ ರಕ್ಷಣಾ ಕ್ಷೇತ್ರದ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿದೆ.

- Advertisement -

ಹನಿಟ್ರ್ಯಾಪ್‌ಗೆ ಒಳಗಾಗಿ ಪಾಕ್‌ಗೆ ಮಾಹಿತಿ ಸೋರಿಕೆ ಮಾಡಿದ್ದ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್‌ನನ್ನು ಕಳೆದ ವಾರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿತ್ತು. ಆರೋಪಿಯನ್ನು ಮೇ 15ರವರೆಗೆ ಎಟಿಎಸ್ ವಶಕ್ಕೆ ನೀಡುವ ಆದೇಶವನ್ನು ಪುಣೆ ವಿಶೇಷ ನ್ಯಾಯಾಲಯ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಪ್ರದೀಪ್ ಕುರುಲ್ಕರ್‌ ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರ ಜತೆಗೆ ಭಾಗಿಯಾಗಿರುವ ವಿಡಿಯೋಗಳನ್ನು ಕಾಂಗ್ರೆಸ್ ವಕ್ತಾರರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅಲ್ಲದೇ, ಪಾಕಿಸ್ತಾನದ ಪರವಾಗಿ ಗೂಢಚರ್ಯೆ ಮಾಡಿರುವ ಪ್ರದೀಪ್, ಆರ್‌ಎಸ್‌ಎಸ್‌ನ ಕಟ್ಟಾ ಸ್ವಯಂ ಸೇವಕ ಎಂದಿದೆ.

ಈ ಸುದ್ದಿ ಓದಿದ್ದೀರಾ? ದೆಹಲಿ ಸರ್ಕಾರದ ಅಧಿಕಾರ ನಿರ್ಬಂಧಿತ; ಹಸ್ತಕ್ಷೇಪಕ್ಕೆ ಎಲ್‌ಜಿಗೆ ಅಧಿಕಾರವಿಲ್ಲ ಎಂದ ಸುಪ್ರೀಂ ಕೋರ್ಟ್

‘ಪ್ರದೀಪ್ ಕುರುಲ್ಕರ್‌ ತಾತ ಕೂಡ ಆರ್‌ಎಸ್‌ಎಸ್‌ನ ಕಾರ್ಯಕರ್ತರಾಗಿದ್ದರು. ಇವರ ತಂದೆ ಕೂಡ ಸಂಘದ ಸಕ್ರಿಯ ಸದಸ್ಯರಾಗಿದ್ದರು.ರಾಷ್ಟ್ರೀಯವಾದಿ ಎಂದು ಬಿಂಬಿಸಿಕೊಳ್ಳುತ್ತಿರುವ ಸಂಘಟನೆಯ ನಿಜವಾದ ಬಣ್ಣ ಬಯಲಾಗಿದೆ. ಆರ್‌ಎಸ್‌ಎಸ್‌ ಹಾಗೂ ಪ್ರದೀಪ್‌ಗೂ ಇರುವ ಸಂಬಂಧ ಏನು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ವಿವರಿಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ವ್ಯಾಟ್ಸಪ್ ಹಾಗೂ ವಿಡಿಯೋ ಕಾಲ್‌ಗಳ ಮೂಲಕ ಪಾಕಿಸ್ತಾನದ ಗೂಢಚಾರಿಗಳ ಜೊತೆ ಪ್ರದೀಪ್ ಸಂಪರ್ಕದಲ್ಲಿದ್ದರು ಎಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...

ರಾಹುಲ್‌ ಇಂದೋರ್‌ ಸಮಾವೇಶಕ್ಕೆ 29 ಭದ್ರತಾ ಷರತ್ತು: ಕಾಂಗ್ರೆಸ್ ಆಕ್ರೋಶ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ‘ಛಾತ್ರೋಂ ಕಿ...

ತಿರುಪತಿ ಲಡ್ಡು ಕಲಬೆರಕೆ ಹಗರಣ: ಪಾಮ್ ಆಯಿಲ್ ಪೂರೈಸುತ್ತಿದ್ದ ಉದ್ಯಮಿ ಇ.ಡಿ ವಶಕ್ಕೆ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಭಾರಿ ಪ್ರಮಾಣದ ಕಲಬೆರಕೆ...

ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವಾಗ 'ಚಾಟ್ ಜಿಪಿಟಿ' (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ...