ಸ್ವಯಂ ಘೋಷಿತ ದೇವಮಾನವನಿಂದ ಕಿರುಕುಳ; ವ್ಯಕ್ತಿ ಆತ್ಮಹತ್ಯೆ

Date:

Advertisements

ಸ್ವಯಂ ಘೋಷಿತ ದೇವಮಾನವನ ಕಿರುಕುಳದಿಂದ ಬೇಸತ್ತು 30 ವರ್ಷದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಭೋಕರ್ದನ್ ತಹಸಿಲ್‌ನ ವಾಲ್ಸಾ ವಡಾಲಾ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಈ ಘಟನೆಗೆ ಸಂಬಂಧಿಸಿದಂತೆ ತನ್ನನ್ನು ತಾನು ದೇವಮಾನವ ಎಂದು ಕರೆದುಕೊಳ್ಳುವ 45 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಕಿರಣ್ ಬಿಡ್ವೆ ತಿಳಿಸಿದ್ದಾರೆ. ಆದರೆ ಸ್ವಯಂ ಘೋಷಿತ ದೇವಮಾನವನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಇದನ್ನು ಓದಿದ್ದೀರಾ? ಜನ ಮರುಳೋ ಜಾತ್ರೆ ಮರುಳೋ; ಸ್ವಯಂಘೋಷಿತ ದೇವಮಾನವನ ಪಾದ ಮುಟ್ಟಲು ಪ್ರಾಣತೆತ್ತ ಜನರು

Advertisements

ಈ ಬಗ್ಗೆ ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಮತ್ತು ಆತನ ಪತ್ನಿ ನೆರೆಯ ಬುಲ್ದಾನಾ ಜಿಲ್ಲೆಯ ಧಮಂಗಾವ್‌ನಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಆರೋಪಿ ಸ್ವಯಂ ಘೋಷಿತ ದೇವಮಾನವನನ್ನು ಭೇಟಿಯಾಗಿದ್ದಾರೆ ಎಂದು ಹೇಳಲಾಗಿದೆ.

ಈ ಭೇಟಿಯ ಬಳಿಕ ಆರೋಪಿಯು ನಿರಂತರವಾಗಿ ದಂಪತಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಆಗಾಗ್ಗೆ ದಂಪತಿಗೆ ಕರೆ ಮಾಡಿ ಏನೇನೋ ಬೇಡಿಕೆ ಮುಂದಿಡುತ್ತಿದ್ದನು ಎಂದು ಹೇಳಲಾಗಿದೆ. ಈ ದಂಪತಿಯ ಪುತ್ರಿ ವಾಸ್ತವವಾಗಿ ತನಗೆ ಸೇರಿದವಳು, ತನ್ನವಳು. ಹಾಗಾಗಿ ಆಕೆಯನ್ನು ತನಗೆ ನೀಡಬೇಕು ಎಂದು ದಂಪತಿಗೆ ಒತ್ತಡ ಹೇರಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಹಸು ಕಳ್ಳಸಾಗಣೆ ಶಂಕೆ; ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋ ರಕ್ಷಕರು

ದಂಪತಿಗಳು ತಮ್ಮ ಮಗಳನ್ನು ಸ್ವಯಂ ಘೋಷಿತ ದೇವಮಾನವನಿಗೆ ನೀಡಲು ನಿರಾಕರಿಸಿದಾಗ ಆರೋಪಿಯು ದಂಪತಿಗೆ ಬೆದರಿಕೆ ಹಾಕಲು ಆರಂಭಿಸಿದ್ದಾನೆ. ಮೃತ ವ್ಯಕ್ತಿಯ ಪತ್ನಿಗೆ ಕಿರಕುಳ ನೀಡಲು ಪ್ರಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಿರಂತರ ಕಿರಕುಳವನ್ನು ಸಹಿಸಲಾಗದೆ ವ್ಯಕ್ತಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯನ್ನು ಮಂಗಳವಾರ ಬುಲ್ಧಾನಾದ ಗುಮ್ಮಿ ಗ್ರಾಮದಲ್ಲಿ ಬಂಧಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X