ಗೋವಾ | ಡಚ್‌ ಪ್ರಜೆ, ವ್ಯಕ್ತಿಗೆ ಕಿರುಕುಳ, ಹಲ್ಲೆ ; ರೆಸಾರ್ಟ್‌ ಸಿಬ್ಬಂದಿ ಬಂಧನ

Date:

  • ಯೋಗ ಕಾರ್ಯಕ್ರಮಕ್ಕಾಗಿ ಗೋವಾಗೆ ಆಗಮಿಸಿದ್ದ ಡಚ್‌ ಪ್ರಜೆ
  • 2 ವರ್ಷದಿಂದ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ

ಡಚ್‌ ಪ್ರಜೆ ಒಬ್ಬರಿಗೆ ಚೂರಿಯಿಂದ ಇರಿದು, ಕಿರುಕುಳ ನೀಡಿ ಅವರಿಗೆ ಸಹಾಯ ಮಾಡಲು ತೆರಳಿದ ಇನ್ನೊಬ್ಬ ವ್ಯಕ್ತಿಗೂ ಚೂರಿಯಿಂದ ಇರಿದಿರುವ ಆರೋಪದಲ್ಲಿ ಉತ್ತರ ಗೋವಾದ ಪರ್ನೆಮ್‌ನಲ್ಲಿರುವ ರೆಸಾರ್ಟ್‌ನ ಸಿಬ್ಬಂದಿ ಅಭಿಷೇಕ್ ವರ್ಮಾನನ್ನು ಪೊಲೀಸರು ಶುಕ್ರವಾರ (ಮಾರ್ಚ್‌ 31) ಬಂಧಿಸಿದ್ದಾರೆ.

ಗಾಯಗೊಂಡ ಡಚ್‌ ಮಹಿಳೆ ಯುರಿಕೊ (29) ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

“ಗುರುವಾರ (ಮಾರ್ಚ್‌ 30) ರಾತ್ರಿ ನಡೆದ ಘಟನೆ ಸಂಬಂಧ ಉತ್ತರಾಖಂಡ್‌ ಮೂಲದ 27 ವರ್ಷದ ಅಭಿಷೇಕ್‌ ವರ್ಮಾನನ್ನು ಬಂಧಿಸಲಾಗಿದೆ. ಈತ ಎರಡು ವರ್ಷಗಳಿಂದ ರೆಸಾರ್ಟ್ ಪರಿಚಾರಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ” ಎಂದು ಗೋವಾ ಪೊಲೀಸರು ಹೇಳಿದ್ದಾರೆ.

“ನಾನು ಈ ತಿಂಗಳ ಆರಂಭದಿಂದ ಪ್ರವಾಸ ಕೈಗೊಂಡಿದ್ದೇನೆ. ಈಗಾಗಲೇ ರಾಜಸ್ಥಾನ ಹಾಗೂ ಮುಂಬೈಗೆ ಭೇಟಿ ನೀಡಿದ್ದೇನೆ. ನಾಲ್ಕು ದಿನದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಗೋವಾಗೆ ಪ್ರವಾಸ ಮಾಡಿದೆ. ಕಾರ್ಯಕ್ರಮಕ್ಕೂ ಮೊದಲು ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದೆ. ಊಟದ ಬಳಿಕ ಟೆಂಟ್‌ನಲ್ಲಿ ವಿರಾಮಕ್ಕೆ ತೆರಳಿದೆ. ನಡುರಾತ್ರಿ 2 ಗಂಟೆಗೆ ಟೆಂಟ್‌ಗೆ ಒಬ್ಬ ಅಪರಿಚಿತ ವ್ಯಕ್ತಿ ಆಗಮಿಸಿದ. ಆತ ನನ್ನ ಮೇಲೆ ಎರಗಿದ” ಎಂದು ಡಚ್‌ ಪ್ರಜೆ ಯುರಿಕೊ ಪೊಲೀಸರಿಗೆ ತಿಳಿಸಿದ್ದಾರೆ.

“ಆರೋಪಿಯು ನನ್ನನ್ನು ಹಿಡಿಯಲು ಪ್ರಯತ್ನಿಸಿದ. ನಾನು ಅವನನ್ನು ತಳ್ಳಲು ಪ್ರಯತ್ನಿಸಿದೆ. ನಂತರ ಜೋರಾಗಿ ಕೂಗಿದೆ. ಆಗ ಇನ್ನೊಬ್ಬ ವ್ಯಕ್ತಿ ಟೆಂಟ್‌ನೊಳಗೆ ಧಾವಿಸಿ ಸಹಾಯಕ್ಕೆ ಮುಂದಾದ. ಅಲ್ಲಿಂದ ಓಡಿಹೋದ ಆರೋಪಿ ಬಳಿಕ ಚಾಕುವಿನೊಡನೆ ಬಂದು ನನಗೆ ಹಾಗೂ ಸಹಾಯಕ್ಕೆ ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ” ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶ್ರೀರಾಮನವಮಿ | ಬಂಗಾಳ, ಗುಜರಾತ್‌, ಮಹಾರಾಷ್ಟ್ರದಲ್ಲಿ ಗಲಭೆ

“ಸಂತ್ರಸ್ತೆಯಾದ ಡಚ್‌ ಪ್ರಜೆ ಯುರಿಕೊ ಅವರ ರೆಸಾರ್ಟ್‌ನ ಬಾಡಿಗೆ ಟೆಂಟ್‌ಗೆ ರೆಸಾರ್ಟ್‌ ಸಿಬ್ಬಂದಿಯೊಬ್ಬ ಅತಿಕ್ರಮ ಪ್ರವೇಶ ಮಾಡಿದ್ದ. ಡಚ್‌ ಮಹಿಳೆ ಸಹಾಯಕ್ಕಾಗಿ ಚೀರಿದರು. ಆಗ ಮಹಿಳೆ ರಕ್ಷಣೆಗೆ ಸ್ಥಳೀಯ ಪ್ರವಾಸಿಯೊಬ್ಬರು ಅಲ್ಲಿಗೆ ಧಾವಿಸಿದರು. ನಂತರ ಆರೋಪಿ ಅಲ್ಲಿಂದ ಓಡಿ ಹೋದ. ಸ್ವಲ್ಪ ಸಮಯದ ನಂತರ ಅಲ್ಲಿಗೆ ಬಂದ ಆರೋಪಿ ಚಾಕುವಿನಿಂದ ಡಚ್ ಪ್ರಜೆ ಹಾಗೂ ಸ್ಥಳೀಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾದ. ಇಬ್ಬರನ್ನೂ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ನಿಧಿನ್‌ ವಲ್ಸನ್‌ ಹೇಳಿದ್ದಾರೆ.

ಆರೋಪಿಯ ವಿರುದ್ಧ ಸೆಕ್ಷನ್ 307 (ಕೊಲೆಗೆ ಯತ್ನ), 354 (ಹೆಣ್ಣಿನ ಮೇಲೆ ದೌರ್ಜನ್ಯ), 452 (ಗಾಯ, ಹಲ್ಲೆ ಅಥವಾ ಅತಿಕ್ರಮಣ) ಮತ್ತು 506 (||) (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ಕೈಯಿಂದ ಮಲ ಬಾಚುವ ವೇಳೆ ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಪೌರ...

ಜಗಳದ ವೇಳೆ 4ನೇ ತರಗತಿ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿದ ಸಹಪಾಠಿಗಳು

ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ...

ಥೈಲ್ಯಾಂಡ್, ಶ್ರೀಲಂಕಾ ಬಳಿಕ ಭಾರತೀಯರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಮಲೇಷ್ಯಾ ಅನುಮತಿ

ಥೈಲ್ಯಾಂಡ್, ಶ್ರೀಲಂಕಾ ದೇಶಗಳ ನಂತರ ಈಗ ಮಲೇಷ್ಯಾ ಕೂಡ ಭಾರತೀಯರಿಗೆ ವೀಸಾ...

ಗುಜರಾತ್ | ಅಕಾಲಿಕ ಮಳೆಯಿಂದ ಸಿಡಿಲು ಬಡಿದು 20 ಮಂದಿ ಸಾವು

ಗುಜರಾತ್‌ನ 251 ತಾಲೂಕುಗಳ ಪೈಕಿ 230ಕ್ಕೂ ಹೆಚ್ಚು ತಾಲೂಕುಗಳಲ್ಲಿ ಗುಡುಗು ಸಹಿತ...