ಎಎಪಿ ನಾಯಕರಿಗೆ 100 ಕೋಟಿ ಲಂಚ: ಕೆ ಕವಿತಾ ವಿರುದ್ಧ ಆರೋಪ ಪಟ್ಟಿ ದಾಖಲಿಸಿದ ಇ.ಡಿ

Date:

Advertisements

ಭಾರತ್‌ ರಾಷ್ಟ್ರ ಸಮಿತಿ(ಬಿಆರ್‌ಎಸ್‌) ನಾಯಕಿ ಕೆ ಕವಿತಾ ಅವರು ಈಗಾಗಲೇ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಭಾಗಿಯಾಗಿದ್ದಾರೆ. ದೊಡ್ಡ ಮಟ್ಟದಲ್ಲಿ ಅನುಕೂಲ ಪಡೆಯುವ ಸಲುವಾಗಿ ಎಎಪಿ ನಾಯಕರಿಗೆ 100 ಕೋಟಿ ರೂ. ಲಂಚ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಕವಿತಾ ವಿರುದ್ಧ ಸಲ್ಲಿಸಲಾಗಿರುವ ಆರೋಪಟ್ಟಿಯಲ್ಲಿ ದಾಖಲಿಸಿದೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಇಂಡೋ ಸ್ಪಿರಿಟ್ಸ್‌ ಎಂಬ ಸಂಸ್ಥೆಯನ್ನು ರಚಿಸಿ ಅದನ್ನು ಸ್ವಾಧೀನಪಡಿಸಿಕೊಳ್ಳುವ ಪಿತೂರಿಯ ಭಾಗವಾಗಿ 292.8 ಕೋಟಿ ರೂ. ಮೊತ್ತವನ್ನು ಬಳಸುವ ಪ್ರಕ್ರಿಯೆಯಾಗಿತ್ತು. ಇದಕ್ಕಾಗಿ ಲಂಚ ನೀಡಲಾಗಿತ್ತು ಎಂದು ತನಿಖಾ ಸಂಸ್ಥೆ ಆರೋಪಪಟ್ಟಿಯಲ್ಲಿ ತಿಳಿಸಿದೆ.

ಇಂಡೋ ಸ್ಪಿರಿಟ್ಸ್‌ನಿಂದ ಸಹಾಯಕ ಅಭಿಷೇಕ್‌ ಬೋಯ್ನಪಲ್ಲಿ ಎಂಬುವವರ ಹೆಸರಿನಲ್ಲಿ ಬಿಆರ್‌ಎಸ್‌ ನಾಯಕಿ 5.5 ಕೋಟಿ ರೂ. ಆದಾಯವನ್ನು ಸ್ವೀಕರಿಸಿದ್ದಾರೆ ತನಿಖಾ ಸಂಸ್ಥೆ ಆರೋಪಿಸಿದೆ.

Advertisements

ಕೆ ಕವಿತಾ ಅವರು ಸರ್ಕಾರದಲ್ಲಿ ಇಂಡೋ ಸ್ಪಿರಿಟ್ಸ್‌ ಕಾರ್ಯ ಸ್ಥಾಪಿಸುವ ಸಲುವಾಗಿ 1100 ಕೋಟಿ ರೂ. ಲಾಭ ಪಡೆಯಲು ಮಧ್ಯವರ್ತಿಯ ಮೂಲಕ ಲಂಚ ನೀಡಿದ್ದಾರೆ. ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿರುವ ಪುರಾವೆಗಳು ಹಾಗೂ ತಮ್ಮ ಮೊಬೈಲ್‌ನಲ್ಲಿರುವ ದಾಖಲೆಗಳನ್ನು ಅಳಿಸಿದ್ದಾರೆ. ಪರಿಶೀಲನೆಗಾಗಿ ಇ.ಡಿ ಸಂಸ್ಥೆಗೆ ನೀಡಲಾಗಿರುವ 9 ಫೋನ್‌ಗಳಲ್ಲಿ ಯಾವುದೇ ಡಾಟಾ ಇಲ್ಲದಂತೆ ಫಾರ್ಮೆಟ್ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

ವಿಚಾರಣೆಯ ಸಂದರ್ಭದಲ್ಲಿ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವ ಸಲುವಾಗಿ ಕವಿತಾ ಅವರು ಫಾರ್ಮೇಟ್‌ ಮಾಡಲಾದ ಫೋನ್‌ಗಳ ಬಗ್ಗೆ ಯಾವುದೇ ಮಾಹಿತಿಗಳನ್ನು ನೀಡುತ್ತಿರಲಿಲ್ಲ. ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿರುವ ಸಾಕ್ಷಿಗಳ ಮೇಲೂ ಕವಿತಾ ಅವರು ಪ್ರಭಾವ ಬೀರಿದ್ದಾರೆ ಎಂದು ಇ.ಡಿ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

ಕೆ ಕವಿತಾ ಅವರ ಚಾರ್ಟೆಡ್‌ ಅಕೌಂಟೆಡ್‌ ಆಗಿರುವ ಬುಚಿ ಬಾಬು ಅವರು ಇ.ಡಿ ಮುಂದೆ ಕಳೆದ ಫೆ.23 ಹಾಗೂ ಫೆ.28ರಂದು ನೀಡಿರುವ ಹೇಳಿಕೆಗಳಲ್ಲಿ ಇದು ದಾಖಲಾಗಿದೆ. ಆತನು ತಾನು ನೀಡಿರುವ ಹೇಳಿಕೆ ಹಿಂತೆಗೆದುಕೊಳ್ಳುವಂತೆ ಕವಿತಾ ಅವರು ಪ್ರಭಾವ ಬೀರಿದ್ದರು ಎಂದು ತನಿಖಾ ಸಂಸ್ಥೆ ಮುಂದೆ ತಿಳಿಸಿದ್ದಾನೆ.

ನಿನ್ನೆಯಷ್ಟೆ ಕವಿತಾ ಅವರನ್ನು ದೆಹಲಿ ಕೋರ್ಟ್‌ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.3ರವರೆಗೂ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿತ್ತು. ಅಬಕಾರಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ಹಾಗೂ ಇ.ಡಿ ಎರಡೂ ಸಂಸ್ಥೆಗಳು ತನಿಖೆ ನಡೆಸುತ್ತಿದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿಯಾದ ಕೆ ಚಂದ್ರಶೇಖರ್‌ ರಾವ್‌ ಅವರ ಪುತ್ರಿಯಾದ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಮಾ.15 ರಂದು ಹೈದರಾಬಾದ್‌ನಿಂದ ಬಂಧಿಸಿತ್ತು. ಸದ್ಯ ಅವರು ತಿಹಾರ್‌ ಜೈಲಿನಲ್ಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X