ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಜಕೀಯ ನಾಯಕರಿಗೆ ಚುನಾವಣಾ ಆಯೋಗ ಎಚ್ಚರಿಕೆ

Date:

Advertisements

ಕಾಂಗ್ರೆಸ್‌ನ ಸುಪ್ರಿಯಾ ಶ್ರೀನಾಥೆ ಮತ್ತು ಬಿಜೆಪಿಯ ದಿಲೀಪ್ ಘೋಷ್ ಅವರ ವಿವಾದಾತ್ಮಕ ಹೇಳಿಕೆಗಳ ನಂತರ, ಭಾರತದ ಚುನಾವಣಾ ಆಯೋಗ ಸೋಮವಾರ “ಮಾದರಿ ನೀತಿ ಸಂಹಿತೆಯ ಅವಧಿಯಲ್ಲಿ ಸಾರ್ವಜನಿಕ ಹೇಳಿಕೆಗಳಲ್ಲಿ ಜಾಗರೂಕರಾಗಿರಿ” ಎಂದು ನಾಯಕರಿಗೆ ಎಚ್ಚರಿಕೆ ನೀಡಿದೆ.

ಚುನಾವಣಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ ಆದೇಶದಲ್ಲಿ, ಎಂಸಿಸಿ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ನೀಡಿದ ನಂತರ ಚುನಾವಣಾ ಆಯೋಗವು ಇಬ್ಬರು ನಾಯಕರ ಉತ್ತರಗಳನ್ನು ಸ್ವೀಕರಿಸಿದ ನಂತರ ಎಚ್ಚರಿಕೆ ನೀಡಿದ್ದು, ಮಹಿಳೆಯರ ಘನತೆಯ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಖಂಡನೀಯ ಎಂದು ದಿಲೀಪ್ ಘೋಷ್ ಮತ್ತು ಸುಪ್ರಿಯಾ ಶ್ರಿನಾಥೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ನೀತಿ ಸಂಹಿತೆ ಉಲ್ಲಂಘನೆಗಳ ಬಗ್ಗೆ ನಾಯಕರುಗಳಿಗೆ ನೀಡಲಾದ ನೋಟಿಸ್‌ಗಳಿಗೆ ಉತ್ತರಗಳನ್ನು ಸ್ವೀಕರಿಸಿದ ನಂತರ ಆಯೋಗವು ಇಂದು ತನ್ನ ಆದೇಶದಲ್ಲಿ, ಅವರು ಕೆಳಮಟ್ಟದ ವೈಯಕ್ತಿಕ ದಾಳಿಯನ್ನು ಮಾಡಿದ್ದಾರೆ. ಇದರಿಂದಾಗಿ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆಂದು ಅವರಿಗೆ ಮನವರಿಕೆಯಾಗಿದೆ” ಎಂದು  ತಿಳಿಸಿದೆ. ಎಂಸಿಸಿ ಅವಧಿಯಲ್ಲಿ ಸಾರ್ವಜನಿಕ ಹೇಳಿಕೆಗಳಲ್ಲಿ ಜಾಗರೂಕರಾಗಿರಲು ಚುನಾವಣಾ ಆಯೋಗವು ನಾಯಕರಿಗೆ ಎಚ್ಚರಿಕೆ ನೀಡಿದೆ.

Advertisements

“ಈ ಸಮಯದಿಂದ ಅವರ ಚುನಾವಣೆಗೆ ಸಂಬಂಧಿಸಿದ ಸಂವಹನಗಳನ್ನು ಆಯೋಗವು ವಿಶೇಷವಾಗಿ ಮತ್ತು ಹೆಚ್ಚುವರಿಯಾಗಿ ಮೇಲ್ವಿಚಾರಣೆ ಮಾಡುತ್ತದೆ. ಸಾರ್ವಜನಿಕ ಡೊಮೇನ್‌ನಲ್ಲಿ ಸಂವಹನ ನಡೆಸುವಾಗ ಜಾಗರೂಕರಾಗಿರುವಂತೆ ಹಾಗೂ ಅಂತಹ ಯಾವುದೇ ಅವಹೇಳನಕಾರಿ ಪ್ರತಿಕ್ರಿಯೆಗಳು ಮತ್ತು ನೀತಿ ಸಂಹಿತೆ ಮಾರ್ಗಸೂಚಿಗಳ ಉಲ್ಲಂಘನೆ ನಡೆಸದಂತೆ ತಮ್ಮ ಕಾರ್ಯಕರ್ತರನ್ನು ಸಂವೇದನಾಶೀಲಗೊಳಿಸಲು ಪಕ್ಷದ ಮುಖ್ಯಸ್ಥರಿಗೆ ಎಚ್ಚರಿಕೆ ನೋಟಿಸ್‌ನ ಪ್ರತಿಯನ್ನೂ ಕೂಡ ನೀಡಲಾಗಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ.

ಕಂಗನಾ ರಣಾವತ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ವೇದಿಕೆಯ ಅಧ್ಯಕ್ಷೆ ಸುಪ್ರಿಯಾ ಶ್ರಿನಾಥೆ ಅವರಿಗೆ ಮತ್ತು ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಮತ್ತು ಅಗೌರವದ ಕಾಮೆಂಟ್ ಮಾಡಿದ್ದಕ್ಕಾಗಿ ಪಶ್ಚಿಮ ಬಂಗಾಳದ ಸಂಸದ ದಿಲೀಪ್ ಘೋಷ್ ಇಬ್ಬರಿಗೂ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಮೈತ್ರಿ ಬೆನ್ನಲ್ಲೇ ಆರ್‌ಎಲ್‌ಡಿಗೆ ಆಘಾತ; ಪಕ್ಷ ತೊರೆದ ರಾಷ್ಟ್ರೀಯ ಉಪಾಧ್ಯಕ್ಷ!

 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X