ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಗೊಂಡಿದ್ದರು.
ಜೈಲಿನಿಂದ ಹೊರಬಂದ ನಂತರ ಶನಿವಾರ ನಡೆಸಿದ ಮೊದಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅರವಿಂದ್ ಕೇಜ್ರಿವಾಲ್, “ಬಿಜೆಪಿಯವರು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಪ್ರಶ್ನಿಸುತ್ತಾರೆ. ನಾನು ಬಿಜೆಪಿಯವರಿಗೆ ನಿಮ್ಮ ಪ್ರಧಾನಿ ಯಾರು ಎಂದು ಕೇಳಬಯಸುತ್ತೇನೆ. ಯಾಕೆಂದರೆ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ 75ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. 75 ವರ್ಷದ ನಂತರ ರಾಜಕೀಯ ನಿವೃತ್ತಿಯಾಗುವಂತೆ ಬಿಜೆಪಿಯೇ ನಿಯಮ ಮಾಡಿಕೊಂಡಿದೆ. ಆ ನಿಯಮದಂತೆ ಎಲ್ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಮಿತ್ರಾ ಮಹಾಜನ್ ಮತ್ತು ಯಶವಂತ್ ಸಿನ್ಹಾ ನಿವೃತ್ತರಾಗಿದ್ದರು. ಪ್ರಧಾನಿ ಮೋದಿ ನಿವೃತ್ತರಾಗಲಿದ್ದಾರೆ. ಮೋದಿ ಮತ್ತೆ ಗೆದ್ದರೆ, ಎರಡು ತಿಂಗಳೊಳಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬದಲಾಯಿಸುತ್ತಾರೆ” ಎಂದು ಹೇಳಿದ್ದರು.
मोदी जी 2029 तक ही नहीं, उससे आगे भी भाजपा और देश का नेतृत्व करते रहेंगे…केजरीवाल और इंडी अलायन्स वालों को खुश होने की जरूरत नहीं है। pic.twitter.com/pBcxT7hqNg
— Amit Shah (Modi Ka Parivar) (@AmitShah) May 11, 2024
ಕೇಜ್ರಿವಾಲ್ ಅವರ ಈ ಹೇಳಿಕೆಯನ್ನು ಉಲ್ಲೇಖಿಸಿ ತೆಲಂಗಾಣದ ಹೈದರಾಬಾದ್ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಪತ್ರಕತ್ರರೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “75 ವರ್ಷ ದಾಟಿದರೂ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ” ಎಂದು ತಿಳಿಸಿದ್ದಾರೆ.
#WATCH | Delhi CM Arvind Kejriwal says “…These people ask the INDIA alliance who will be their Prime Minister. I ask BJP who will be your Prime Minister? PM Modi is turning 75, on 17th September. He made a rule that leaders in the party would retire after 75 years…LK Advani,… pic.twitter.com/P1qYOl7hIt
— ANI (@ANI) May 11, 2024
“ಮೋದೀಜಿಯವರಿಗೆ 75 ವರ್ಷ ಆಯಿತೆಂದು ಅರವಿಂದ್ ಕೇಜ್ರಿವಾಲ್ ಮತ್ತವರ ಕಂಪೆನಿ ಖುಷಿ ಪಡುವಂತಹ ಅಗತ್ಯವಿಲ್ಲ. ಬಿಜೆಪಿಯ ಸಂವಿಧಾನದಲ್ಲಿ 75 ವರ್ಷದ ನಂತರ ರಾಜಕೀಯ ನಿವೃತ್ತಿಯಾಗುವಂತಹ ಯಾವುದನ್ನೂ ಉಲ್ಲೇಖಿಸಲಾಗಿಲ್ಲ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಇಂಡಿಯಾ ಮೈತ್ರಿಕೂಟದ ಕಂಪೆನಿಗೆ ನಾನು ಇದನ್ನು ಹೇಳಲು ಬಯಸುತ್ತೇನೆ. ಮೋದಿಯವರು ಈ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಭವಿಷ್ಯದಲ್ಲಿ ಪ್ರಧಾನಿಯಾಗಿ ಮತ್ತೊಮ್ಮೆ ಆಯ್ಕೆಯಾಗಿ ಮೋದಿಯವರೇ ದೇಶವನ್ನು ಮುನ್ನಡೆಸಲಿದ್ದಾರೆ. ಬಿಜೆಪಿಯಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಸುಮ್ಮನೆ ಗೊಂದಲ ಸೃಷ್ಟಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.
