75 ವರ್ಷ ದಾಟಿದರೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ: ಅಮಿತ್ ಶಾ

Date:

Advertisements

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಗೊಂಡಿದ್ದರು.

ಜೈಲಿನಿಂದ ಹೊರಬಂದ ನಂತರ ಶನಿವಾರ ನಡೆಸಿದ ಮೊದಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅರವಿಂದ್ ಕೇಜ್ರಿವಾಲ್, “ಬಿಜೆಪಿಯವರು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಪ್ರಶ್ನಿಸುತ್ತಾರೆ. ನಾನು ಬಿಜೆಪಿಯವರಿಗೆ ನಿಮ್ಮ ಪ್ರಧಾನಿ ಯಾರು ಎಂದು ಕೇಳಬಯಸುತ್ತೇನೆ. ಯಾಕೆಂದರೆ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ 75ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. 75 ವರ್ಷದ ನಂತರ ರಾಜಕೀಯ ನಿವೃತ್ತಿಯಾಗುವಂತೆ ಬಿಜೆಪಿಯೇ ನಿಯಮ ಮಾಡಿಕೊಂಡಿದೆ. ಆ ನಿಯಮದಂತೆ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಮಿತ್ರಾ ಮಹಾಜನ್ ಮತ್ತು ಯಶವಂತ್ ಸಿನ್ಹಾ ನಿವೃತ್ತರಾಗಿದ್ದರು. ಪ್ರಧಾನಿ ಮೋದಿ ನಿವೃತ್ತರಾಗಲಿದ್ದಾರೆ. ಮೋದಿ ಮತ್ತೆ ಗೆದ್ದರೆ, ಎರಡು ತಿಂಗಳೊಳಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬದಲಾಯಿಸುತ್ತಾರೆ” ಎಂದು ಹೇಳಿದ್ದರು.

ಕೇಜ್ರಿವಾಲ್ ಅವರ ಈ ಹೇಳಿಕೆಯನ್ನು ಉಲ್ಲೇಖಿಸಿ ತೆಲಂಗಾಣದ ಹೈದರಾಬಾದ್‌ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಪತ್ರಕತ್ರರೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “75 ವರ್ಷ ದಾಟಿದರೂ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ” ಎಂದು ತಿಳಿಸಿದ್ದಾರೆ.

Advertisements

“ಮೋದೀಜಿಯವರಿಗೆ 75 ವರ್ಷ ಆಯಿತೆಂದು ಅರವಿಂದ್ ಕೇಜ್ರಿವಾಲ್ ಮತ್ತವರ ಕಂಪೆನಿ ಖುಷಿ ಪಡುವಂತಹ ಅಗತ್ಯವಿಲ್ಲ. ಬಿಜೆಪಿಯ ಸಂವಿಧಾನದಲ್ಲಿ 75 ವರ್ಷದ ನಂತರ ರಾಜಕೀಯ ನಿವೃತ್ತಿಯಾಗುವಂತಹ ಯಾವುದನ್ನೂ ಉಲ್ಲೇಖಿಸಲಾಗಿಲ್ಲ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಇಂಡಿಯಾ ಮೈತ್ರಿಕೂಟದ ಕಂಪೆನಿಗೆ ನಾನು ಇದನ್ನು ಹೇಳಲು ಬಯಸುತ್ತೇನೆ. ಮೋದಿಯವರು ಈ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಭವಿಷ್ಯದಲ್ಲಿ ಪ್ರಧಾನಿಯಾಗಿ ಮತ್ತೊಮ್ಮೆ ಆಯ್ಕೆಯಾಗಿ ಮೋದಿಯವರೇ ದೇಶವನ್ನು ಮುನ್ನಡೆಸಲಿದ್ದಾರೆ. ಬಿಜೆಪಿಯಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಸುಮ್ಮನೆ ಗೊಂದಲ ಸೃಷ್ಟಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X