ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಉತ್ತರಾಖಂಡದ ಮಾಜಿ ಸಿಎಂ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್ಗೆ ಮುಂಬೈ ಮೂಲದ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ.
ನಟಿಯೂ ಆಗಿರುವ ಆರುಷಿ ನಿಶಾಂಕ್ ಡೆಹ್ರಾಡೂನ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂಬೈ ಮೂಲದ ಮಾನ್ಸಿ ಹಾಗೂ ವರುಣ್ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ ಎಂದು ಆರುಷಿ ನಿಶಾಂಕ್ ಆರೋಪಿಸಿದ್ದಾರೆ.
ತಮ್ಮ ನಿವಾಸಕ್ಕೆ ದಂಪತಿ ಆಗಮಿಸಿ ‘ಅಂಯೋಂ ಕಿ ಗುಸ್ತಾಖಿಯಾನ್’ ಚಿತ್ರದಲ್ಲಿ ಪಾತ್ರ ನೀಡುವುದಾಗಿ ಹೇಳಿದ್ದರು. ಅದಕ್ಕಾಗಿ 5 ಕೋಟಿ ರೂ. ತಮಗೆ ಕೊಡಿ ಕೇಳಿದ್ದರು. ಚಿತ್ರ ಬಿಡುಗಡೆಯಾದ ಮೇಲೆ ಬಂದ ಲಾಭದಲ್ಲಿ ಶೇ. 20 ಸೇರಿ 15 ಕೋಟಿ ರೂ. ಕೊಡುವುದಾಗಿ ಭರವಸೆ ನೀಡಿದ್ದರು. ಬಳಿಕ ತನ್ನಿಂದ ಸಿನಿಮಾಗೆ 4 ಕೋಟಿ ರೂ. ಹೂಡಿಕೆ ಮಾಡಿಸಿದ್ದರು. ಇದಕ್ಕೆ ಆರುಷಿ ಕೂಡ ಒಪ್ಪಿಕೊಂಡು 4 ಕಂತುಗಳಲ್ಲಿ 4 ಕೋಟಿ ರೂ. ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?
ನನ್ನ ಸ್ಕ್ರೀಪ್ಟ್ ಅನ್ನು ತಾವೇ ಫೈನಲ್ ಮಾಡುವುದಕ್ಕೂ ಅವಕಾಶವಿದೆ. ಜೊತೆಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಮಾಡಲು ಅವಕಾಶ ನೀಡುವುದಾಗಿ ಹೇಳಿದ್ದರು. ಈ ವರ್ಷ ಫೆಬ್ರವರಿ 2ರಂದು ಭಾರತದಲ್ಲಿ ಆಗಬೇಕಾದ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಲಾಗಿದ್ದು, ಉಳಿದ ಭಾಗವನ್ನು ಯುರೋಪಿನಲ್ಲಿ ಚಿತ್ರೀಕರಿಸುವ ಯೋಜನೆ ಮಾಡಲಾಗಿದೆ. ಆದರೆ ನನ್ನನ್ನು ಆಯ್ಕೆ ಮಾಡಿದ್ದ ಸ್ಥಾನದಲ್ಲಿ ಬೇರೆ ನಟಿಯನ್ನು ಆಯ್ಕೆ ಮಾಡಲಾಗಿದೆ. ತನ್ನ ಹಣ ಹಿಂದಿರುಗಿಸಿ ಕೊಡುವಂತೆ ಕೇಳಿದಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ನಟಿ ಆರುಷಿ ನಿಶಾಂಕ್ ದೂರಿನ ಮೇಲೆ ಮಾನ್ಸಿ ವರುಣ್ ದಂಪತಿ ಪ್ರಕರಣ ದಾಖಲಿಸಿಕೊಂಡು ಡೆಹ್ರಾಡೂನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
