ದೆಹಲಿ ಅಬಕಾರಿ ಹಗರಣ: ಕೇಜ್ರಿವಾಲ್‌ಗೆ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಕಾರ

Date:

Advertisements

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

“ನಾವು ಎರಡು ಕಡೆಯ ವಾದಗಳನ್ನು ಕೇಳಿದ್ದೇವೆ. ನಾವು ಈ ಹಂತದಲ್ಲಿ ಮಧ್ಯಂತರ ರಕ್ಷಣೆಯನ್ನು ನೀಡಲು ಸಾಧ್ಯವಿಲ್ಲ. ಪ್ರತಿವಾದಿಗಳು ಪ್ರತಿಕ್ರಿಯೆ ನೀಡಲು ಸ್ವತಂತ್ರರಿದ್ದಾರೆ” ಎಂದು ಸುರೇಶ್ ಕುಮಾರ್‌ ಕೈತ್ ಹಾಗೂ ಮನೋಜ್‌ ಜೈನ್‌ ಅವರಿದ್ದ ಪೀಠ ಹೇಳಿದೆ.

ಸಮನ್ಸ್‌ ನೀಡುವುದನ್ನು ಪ್ರಶ್ನಿಸಿ ಮಧ್ಯಂತರ ರಕ್ಷಣೆ ನೀಡಲು ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯ ವಿಚಾರಣೆಯ ಮುಂದಿನ ಪರಿಗಣನೆಯನ್ನು ಏಪ್ರಿಲ್‌ 22 ಕ್ಕೆ ಕೋರ್ಟ್ ನಿಗದಿಪಡಿಸಿದೆ.

Advertisements

ಹಲವು ಸಮನ್ಸ್‌ಗಳನ್ನು ನೀಡಿ ತಮ್ಮನ್ನು ಬಂಧಿಸಲು ಯತ್ನಿಸುತ್ತಿರುವ ಜಾರಿ ನಿರ್ದೇಶನಾಲಯದಿಂದ ರಕ್ಷಣೆ ನೀಡಬೇಕೆಂದು ಬೇಡಿಕೆಗೆ ಒತ್ತಾಯಿಸಿ ಅರವಿಂದ್ ಕೇಜ್ರಿವಾಲ್‌ ಇಂದು ಹೊಸ ಅರ್ಜಿ ಸಲ್ಲಿಸಿದ್ದರು.

“ನಾನು ಸಮನ್ಸ್‌ಗಳನ್ನು ಸ್ವೀಕರಿಸಿದರೆ ತಮ್ಮನ್ನು ಬಂಧಿಸುವುದಿಲ್ಲ ಎಂಬ ಭರವಸೆಯನ್ನು ಜಾರಿ ನಿರ್ದೇಶನಾಲಯ ನೀಡಬೇಕು” ಎಂದು ಅರವಿಂದ್‌ ಕೇಜ್ರಿವಾಲ್‌ ಕೋರ್ಟ್‌ಗೆ ತಮ್ಮ ಅರ್ಜಿಯನ್ನು ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಜಾರಿ ನಿರ್ದೇಶನಾಲಯ 9ನೇ ಸಮನ್ಸ್‌ ನೀಡಿದ ನಂತರ ಕೋರ್ಟ್‌ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪುನರಾವರ್ತಿತವಾಗಿ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳನ್ನು ಅಕ್ರಮ ಎಂದು ದೆಹಲಿ ಮುಖ್ಯಮಂತ್ರಿ ನಿರಾಕರಿಸುತ್ತಿದ್ದಾರೆ.

ಸಮನ್ಸ್‌ಗಳನ್ನು ನಿರಾಕರಿಸುತ್ತಿರುವ ಹಿನ್ನಲೆ ಜಾರಿ ನಿರ್ದೇಶನಾಲಯ ರೋಸ್‌ ಅವಿನ್ಯೂ ಕೋರ್ಟ್‌ನಲ್ಲಿ ಎರಡು ದೂರುಗಳನ್ನು ಸಲ್ಲಿಸಿದೆ.

2021-22ರಲ್ಲಿ ಜಾರಿಗೊಳಿಸಲಾಗಿದ್ದ ಅಬಕಾರಿ ಯೋಜನೆ ಅಕ್ರಮ ಹಣ ವರ್ಗಾವಣೆ, ಭ್ರಷ್ಟಾಚಾರದ  ಆರೋಪದ ನಂತರ ರದ್ದುಗೊಂಡಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Download Eedina App Android / iOS

X