ಪತ್ನಿ ಮನೆ ಕೆಲಸ ಮಾಡಲಿ ಎಂದು ಪತಿ ಬಯಸುವುದು ಹಿಂಸೆಯಲ್ಲ: ದೆಹಲಿ ಹೈಕೋರ್ಟ್

Date:

Advertisements

ಪತ್ನಿ ಮನೆಗೆಲಸ ಮಾಡಬೇಕು ಎಂದು ಪತಿ ಬಯಸುವುದು ಹಿಂಸೆಯೆಂದು ನಾವು ಪರಿಗಣಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯಿಂದ ವಿಚ್ಛೇದನ ಕೋರಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ಜೊತೆಗೆ ದಾಂಪತ್ಯ ಜೀವನದಲ್ಲಿ ಜವಾಬ್ದಾರಿಯನ್ನು ಹಂಚಿಕೊಳ್ಳುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದೆ.

ವಿಚ್ಛೇದನ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈತ್ ಮತ್ತು ನ್ಯಾಯಮೂರ್ತಿ ನೀನಾ ಬನ್ಸಾಲ್‌ ಅವರಿದ್ದ ಪೀಠವು, “ವಿವಾಹಿತ ಮಹಿಳೆ ಮನೆಗೆಲಸ ಮಾಡುವಂತೆ ಪತಿ ಹೇಳಿದರೆ, ಅದನ್ನು ಮನೆಯ ನೌಕರರಿಗೆ ಹೇಳುವ ಕೆಲಸದ ಜೊತೆ ಹೋಲಿಸಲಾಗದು. ಆ ಕೆಲಸವನ್ನು ಆಕೆಯು ಆ ಮನೆಯ, ಕುಟುಂಬದ ಮೇಲೆ ಹೊಂದಿರುವ ಪ್ರೀತಿ, ವಾತ್ಸಲ್ಯದಿಂದ ಮಾಡುವುದು ಎಂದು ಪರಿಗಣಿಸಲಾಗುತ್ತದೆ,” ಎಂದಿದೆ.

“ಇಂತಹ ಸ್ಥಿತಿಯಲ್ಲಿ ಪತಿಯು ಹಣಕಾಸು ಜವಾಬ್ದಾರಿಯನ್ನು ಹೊಂದಿರಬಹುದು, ಪತ್ನಿ ಮನೆಯ ಕೆಲಸಗಳ ಜವಾಬ್ದಾರಿಯನ್ನು ಹೊಂದಿರಬಹುದು. ಈ ಪ್ರಕರಣದಲ್ಲಿ ಅದೇ ಸ್ಥಿತಿ ಇರುವುದು. ಒಂದು ಮನೆಯಲ್ಲಿ ಕೆಲಸವನ್ನು ಹಂಚಿಕೊಂಡು ಮಾಡುವಾಗ ಪತಿಯು ಪತ್ನಿಯಲ್ಲಿ ಮನೆಗೆಲಸ ಮಾಡಲು ಹೇಳಿದರೆ ಅದು ಹಿಂಸೆ ಎನ್ನಲಾಗದು,” ಎಂದು ದೆಹಲಿ ಹೈಕೋರ್ಟ್ ಪೀಠ ಪುನರುಚ್ಛರಿಸಿದೆ.

Advertisements

“ಮದುವೆ ಎಂದರೆ ಜವಾಬ್ದಾರಿಯನ್ನು, ಪ್ರೀತಿಯನ್ನು ಹಂಚಿಕೊಳ್ಳುವುದು. ಇಬ್ಬರೂ ಕೂಡಾ ತಮ್ಮ ಸಾಮರ್ಥ್ಯಕ್ಕೆ ಮತ್ತು ಸಂದರ್ಭಕ್ಕೆ ಸರಿಯಾಗಿ ಈ ಜವಾಬ್ದಾರಿಗಳನ್ನು ತೆಗೆದುಕೊಳ್ಳಬೇಕು,” ಎಂದು ಕೋರ್ಟ್ ತಿಳಿಸಿದೆ.

ಅರ್ಜಿದಾರರು, “ನನ್ನ ಪತ್ನಿ ಮನೆಯ ಕೆಲಸ ಹಂಚಿಕೊಂಡು ಮಾಡುವುದಿಲ್ಲ, ಎಲ್ಲ ಕಾರ್ಯವನ್ನು ನಾನೇ ಮಾಡಬೇಕು, ಕೆಲಸ ಮಾಡಲು ಹೇಳಿದರೆ ಆತ್ಮಹತ್ಯೆಯ ಬೆದರಿಕೆ ಹಾಕುತ್ತಾಳೆ, ಸುಳ್ಳು ಆರೋಪಗಳನ್ನು ಮಾಡುತ್ತಾಳೆ,” ಎಂದು ತಿಳಿಸಿದ್ದಾರೆ. ಆದರೆ ಪತ್ನಿ ಈ ಆರೋಪವನ್ನು ಅಲ್ಲಗಳೆದಿದ್ದು, ವರದಕ್ಷಿಣೆಯ ಆರೋಪವನ್ನು ಪತಿಯ ಮೇಲೆ ಹೊರೆಸಿದ್ದಾರೆ.

ಇದಕ್ಕೆ ವಿಭಿನ್ನವಾಗಿ ಇತ್ತೀಚೆಗೆ ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್‌, “ಮಹಿಳೆಯು ಹೆಂಡತಿ, ಗೃಹಿಣಿ ಮತ್ತು ತಾಯಿಯಾಗಿ ಅವಿಶ್ರಾಂತವಾಗಿ ಕೆಲಸ ಮಾಡುತ್ತಾಳೆ. ಮಕ್ಕಳನ್ನು ನೋಡಿಕೊಳ್ಳುವುದು ಪೂರ್ಣ ಸಮಯದ ಕೆಲಸವಾಗಿದೆ. ಮಕ್ಕಳ ಪಾಲನೆಯಲ್ಲಿ ತೊಡಗಿರುವ ಪತ್ನಿಗೆ ಪತಿಯು ಹಣ ನೀಡಬೇಕು” ಎಂದು ಹೇಳಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X