ಮಧ್ಯಪ್ರದೇಶ: ಫೇಸ್‌ಬುಕ್‌ನಲ್ಲಿ ಹೋಮ್ ಡೆಲಿವರಿಯೊಂದಿಗೆ ಗನ್ ಮಾರಾಟ ಜಾಹಿರಾತು

Date:

Advertisements

ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಫೇಸ್‌ಬುಕ್‌ ಪುಟದಲ್ಲಿ ಚಿತ್ರಸಹಿತ ಜಾಹಿರಾತು ನೀಡಿದ್ದ ಆರೋಪಕ್ಕಾಗಿ ಮಧ್ಯಪ್ರದೇಶದ ಉಜ್ಜೈನ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜಾಹಿರಾತಿನಲ್ಲಿ ಪಿಸ್ತೂಲ್‌ಗಳನ್ನು ಹೋಮ್‌ ಡೆಲಿವರಿ ಮಾಡುವುದಾಗಿ ಭರವಸೆ ನಿಡಲಾಗಿತ್ತು. ಏಪ್ರಿಲ್ 23, 2023ರ ಕೊಹಿನೂರ್‌ ಗ್ರೂಪ್ ಉಜ್ಜೈನ್ ಎಂಬ ಹೆಸರಿನ ಫೇಸ್‌ಬುಕ್‌ ಪುಟದಲ್ಲಿ ಶಸ್ತ್ರಗಳ ಚಿತ್ರಗಳನ್ನು ಕೂಡ ಪ್ರಕಟಿಸಲಾಗಿತ್ತು.

ಆರೋಪಿಗಳು ಶಸ್ತ್ರಾಸ್ತ್ರ ಮಾರಾಟ ಮಾಡುವ ವ್ಯಕ್ತಿಯನ್ನು ‘ಪ್ಯೂರ್‌ ಬದ್ಮಾಶ್, ಮೈನ್‌ಲಿ ಕ್ರಿಮಿನಲ್ 302’ ಎಂಬ ಅಡಿಬರಹ ನೀಡಿದ್ದಾರೆ. ಪಿಸ್ತೂಲ್‌ ಹಾಗೂ ಗುಂಡುಗಳನ್ನು ಹೊಂದಿರುವ ವ್ಯಕ್ತಿಯ ಚಿತ್ರವನ್ನು ಜಾಹಿರಾತಿನಲ್ಲಿ ಪ್ರಕಟಿಸಲಾಗಿತ್ತು.

Advertisements

“ಪೋಸ್ಟ್‌ಅನ್ನು ಉಜ್ಜೈನ್‌ನ ಹೊರ ವಲಯದಲ್ಲಿ ಪೋಸ್ಟ್‌ ಮಾಡಲಾಗಿದೆ. ಆರೋಪಿಗಳನ್ನು ಸೈಬರ್‌ ಪೊಲೀಸರು ಪತ್ತೆ ಹಚ್ಚುವಲ್ಲಿ ಕಾರ್ಯನಿರತರಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ. ಫೇಸ್‌ಬುಕ್‌ ಪುಟದಲ್ಲಿ ಆರೋಪಿಯ ಚಿತ್ರವು ಸ್ಪಷ್ಟವಾಗಿಲ್ಲ. ಮೊಬೈಲ್‌ ನಂಬರ್‌ ಹಾಗೂ ಮಾರಾಟ ಮಾಡುವ ಸ್ಥಳಗಳನ್ನು ನೀಡಲಾಗಿರಲಿಲ್ಲ” ಎಂದು ಹೆಚ್ಚುವರಿ ಎಸ್‌ಪಿ ಜಯಂತ್ ರಾಥೋರ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಉಜ್ಜೈನ್‌ ಪೊಲೀಸರು ಈ ಮೊದಲು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದುರ್ಲಬ್‌ ಕಶ್ಯಪ್‌ ಎಂಬಾತ  ಗನ್‌ ಮತ್ತು ಇತರ ಶಸ್ತ್ರಾಶ್ತ್ರಗಳೊಂದಿಗೆ ಗ್ಯಾಂಗ್ ಸದಸ್ಯರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಜಾಹಿರಾತು ನೀಡಿದ್ದ. ನಂತರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿತ್ತು. 2020ರ ಸೆಪ್ಟೆಂಬರ್‌ನಲ್ಲಿ ನಡೆದ ಗ್ಯಾಂಗ್‌ವಾರ್‌ನಲ್ಲಿ ದುರ್ಲಬ್‌ ಕಶ್ಯಪ್‌ ಹತನಾಗಿದ್ದ.

ಭಾರತೀಯ ಕಾನೂನು ‘ನೀಡಬಹುದಾದ’ ಆಧಾರದ ಮೇಲೆ ಪರವಾನಗಿಯೊಂದಿಗೆ ಬಂದೂಕು ಹೊಂದುವುದನ್ನು ಅನುಮತಿಸುತ್ತದೆ. ಕೇಂದ್ರ ಗೃಹ ಇಲಾಖೆಯು 2016ರಲ್ಲಿ ಬಿಡುಗಡೆಗೊಂಡ ಶಸ್ತ್ರಾಸ್ತ್ರಗಳ ನಿಯಮಗಳನ್ನು ಪ್ರಕಟಿಸಿದ ನಂತರ ಎಲ್ಲ ರೀತಿಯ ಬಂದೂಕು ಹೊಂದಿರುವ ಬಗ್ಗೆ ರಾಜ್ಯ ಸರ್ಕಾರಗಳು ಅವಲೋಕನ ವಹಿಸುವಂತೆ ಸೂಚನೆ ನೀಡಿದೆ.

ಕೇಂದ್ರ ಸರ್ಕಾರದ ನಿಯಮದ ಅನ್ವಯ ಪರವಾನಗಿಯೊಂದಿಗೆ ಬಂದೂಕು ಹೊಂದಿರುವವರು ತಮ್ಮ ಬಂದೂಕನ್ನು ಸಾರ್ವಜನಿಕ ಸ್ಥಳಗಳಿಗೆ ವಿನ್ಯಾಸಗೊಳಿಸಲಾದ ಹೊದಿಕೆ ಇಲ್ಲದೆ ತೆಗೆದುಕೊಂಡು ಹೋಗುವಂತಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X