ಸ್ವಂತ ಗುರುತಿನ ಮೇಲೆ ಭೂಮಿ ಖರೀದಿಸಿದ ದೇಶದ ಮೊದಲ ಲಿಂಗತ್ವ ಅಲ್ಪಸಂಖ್ಯಾತ

Date:

Advertisements

ಕೇರಳದ ತ್ರಿಶೂರ್‌ನ ಚಾವಕ್ಕಾಡ್‌ನಲ್ಲಿ ವ್ಯಕ್ತಿಯೊಬ್ಬರು ಇತ್ತೀಚೆಗೆ ಸಣ್ಣ ತುಂಡು ಭೂಮಿಯನ್ನು ನೋಂದಾಯಿಸಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತ (ಟಿಜಿ) ಗುರುತಿನ ಅಡಿಯಲ್ಲಿ ಭೂಮಿ ನೋಂದಣಿ ಮಾಡಿಕೊಂಡ ದೇಶದ ಮೊದಲಿಗರಾಗಿದ್ದಾರೆ.

38 ವರ್ಷ ವರ್ಷದ ಲೈಂಗಿಕ ಅಲ್ಪಸಂಖ್ಯಾತರಾದ ಫೈಸಲ್ ಫೈಸು ಅವರು ತಮ್ಮ ಸ್ವಂತ ಲಿಂಗತ್ವದ ಗುರುತಿನ ಅಡಿಯಲ್ಲಿ ತಾವು ಕೊಂಡುಕೊಂಡ ಭೂಮಿಯನ್ನು ನೋಂದಾಯಿಸಬೇಕಾದರೆ ಸಮುದಾಯದ ಇತರ ಸದಸ್ಯರು ಎದುರಿಸುತ್ತಿರುವ ಹಲವು ತೊಂದರೆಗಳನ್ನು ಇವರು ಎದುರಿಸಬೇಕಾಯಿತು.

ಏಕೆಂದರೆ ಆನ್‌ಲೈನ್‌ ವ್ಯವಸ್ಥೆಯ ಲಿಂಗದ ವಿಭಾಗದಲ್ಲಿ ‘ಪುರುಷ’ ಅಥವಾ ‘ಮಹಿಳೆ’ ಎಂದು ನಮೂದಿಸಲು ಮಾತ್ರ ನಿಬಂಧನೆಗಳಿತ್ತು.

Advertisements

ಫೈಸು ಅವರು ತಾವು ಕೊಂಡುಕೊಳ್ಳುವ ಭೂಮಿಯನ್ನು ಕಾನೂನುಬದ್ಧವಾಗಿ ನೋಂದಾಯಿಸಿಕೊಳ್ಳಲು ಬಯಸಿದ್ದರು. ಅದೇ ಸಮಯದಲ್ಲಿ, ಲೈಂಗಿಕ ಅಲ್ಪಸಂಖ್ಯಾತ ಗುರುತನ್ನು ಉಳಿಸಿಕೊಳ್ಳಲು ಬಯಸಿದ್ದರು. ಮೇಲಾಗಿ, ಆಧಾರ್ ಕಾರ್ಡ್ ಸೇರಿದಂತೆ ಇತರ ಎಲ್ಲ ದಾಖಲೆಗಳಲ್ಲಿ “ಟಿಜಿ”(ಲಿಂಗತ್ವ ಅಲ್ಪಸಂಖ್ಯಾತ) ಲಿಂಗದ ಗುರುತನ್ನು ಇವರು ಹೊಂದಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ಫೈಸು ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಕೊಂಡೊಯ್ದರು. ಮೂರು ವಾರಗಳಲ್ಲಿ ‘ಟಿಜಿ’ ಲಿಂಗವನ್ನು ನಮೂದಿಸುವ ಕಾನೂನು ಇರುವುದಾಗಿ ಅವರಿಗೆ ಮನವರಿಕೆ ಮಾಡಿದರು.

ಅಂತಿಮವಾಗಿ, ಫೈಸು ಅವರ ಆಶಯದಂತೆ ಚಾವಕ್ಕಾಡ್ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸುಮಾರು ಐದು ಸೆಂಟ್ಸ್ ಜಮೀನನ್ನು ನೋಂದಾಯಿಸಿಕೊಂಡರು.

“ಟಿಜಿ ಸಮುದಾಯದ ವ್ಯಕ್ತಿಯೊಬ್ಬರು ‘ಟಿಜಿ’ ಗುರುತನ್ನು ನಮೂದಿಸುವ ಮೂಲಕ ಭೂಮಿಯನ್ನು ನೋಂದಣಿ ಮಾಡಿಸಿಕೊಂಡಿರುವುದು ದೇಶದಲ್ಲಿ ಇದೇ ಮೊದಲಾಗಿದೆ. ಈ ಹಿಂದೆ ಕೇರಳ ಸರ್ಕಾರದ ‘ಲೈಫ್ ಮಿಷನ್ ಯೋಜನೆಯಡಿ’ಯಲ್ಲಿ ಮನೆ ಮಂಜೂರು ಮಾಡಿದ ಟಿಜಿ ಸಮುದಾಯದ ಸದಸ್ಯರು ಹಲವು ತೊಂದರೆಗಳಿಂದಾಗಿ ನೋಂದಣಿ ಸಮಯದಲ್ಲಿ ಲಿಂಗವನ್ನು ‘ಪುರುಷ’ ಎಂದು ನಮೂದಿಸಬೇಕಾಗಿತ್ತು” ಎಂದು ಫೈಸು ತಿಳಿಸುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X