ಗೆಲ್ಲುತ್ತೇನೆ ಅಥವಾ ಸಾಯುತ್ತೇನೆ; ನನ್ನನ್ನು ಮೇಲೆತ್ತಲು ಸರ್ಕಾರಕ್ಕೆ ಬಿಡಬೇಡಿ: 29 ದಿನಗಳಿಂದ ಉಪವಾಸ ಮಾಡುತ್ತಿರುವ ರೈತ ದಲೈವಾಲ್

Date:

Advertisements

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಗೆ ಆಗ್ರಹಿಸಿ ಪಂಜಾಬ್‌ನ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ್ ಅವರು ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಆದರೂ, ಕೇಂದ್ರ ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಲಾಗಿದೆ. “ನಾನು ನನ್ನ ಹೋರಾಟದಲ್ಲಿ ಗೆಲ್ಲುತ್ತೇನೆ ಅಥವಾ ಸಾಯುತ್ತೇನೆ. ನನ್ನನ್ನು ಬಲವಂತವಾಗಿ ಮೇಲೆತ್ತಲು ಸರ್ಕಾರಕ್ಕೆ ಬಿಡಬೇಡಿ” ಎಂದು ಅವರು ಹೇಳಿದ್ದಾರೆ.

ಪಂಜಾಬ್‌ನ ಖಾನೌರಿ-ಶಂಭು ಗಡಿಯಲ್ಲಿ ರೈತರು ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಹೋರಾಟದ ಸ್ಥಳದಲ್ಲಿಯೇ ದಲೈವಾಲ್ ಅವರು 29 ದಿನಗಳಿಂದ ಉಪವಾಸ ನಡೆಸುತ್ತಿದ್ದಾರೆ. “ನಾನು ಚೆನ್ನಾಗಿದ್ದೇನೆ. ಆದರೆ, ನಾವು ಈ ಹೋರಾಟದ ಯುದ್ಧವನ್ನು ಗೆಲ್ಲಬೇಕು. ಇಡೀ ದೇಶವು ಒಗ್ಗೂಡಿದರೆ ಮಾತ್ರ ಈ ಹೋರಾಟವನ್ನು ಗೆಲ್ಲಲು ಸಾಧ್ಯ. ರೈತರು 2021ರ ಪ್ರತಿಭಟನೆಯನ್ನು ಅಪೂರ್ಣಗೊಳಿಸಿದ್ದಾರೆ. ಅದನ್ನು ಪೂರ್ಣಗೊಳಿಸಬೇಕು. ಎಂಎಸ್‌ಪಿ ಪಡೆಯಬೇಕು. ನನ್ನನ್ನು ಬಲವಂತವಾಗಿ ಇಲ್ಲಿಂದ ತೆರವುಗೊಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಡಿ” ಎಂದು ಹೇಳಿದ್ದಾರೆ.

ಸುಮಾರು ಒಂದು ತಿಂಗಳಿನಿಂದ ಏನನ್ನೂ ತಿನ್ನದೇ ಪ್ರತಿಭಟನೆ ನಡೆಸುತ್ತಿರುವ ದಲೈವಾಲ್ ಅವರ ದೇಹದಲ್ಲಿ ಕೀಟೋನ್ ಮಟ್ಟ ಅಪಾಯಕಾರಿಯಾಗಿ ಹೆಚ್ಚಾಗಿವೆ. ಅವರು ಹೃದಯಸ್ತಂಭನ ಅಥವಾ ಅಂಗಾಂಗ ವೈಫಲ್ಯಕ್ಕೆ ಒಳಗಾಗುವ ಅಪಾಯದಲ್ಲಿದ್ದಾರೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಆದಾಗ್ಯೂ, ಉಪವಾಸವನ್ನು ನಿಲ್ಲಿಸದ ದಲೈವಾಲ್ ಪ್ರತಿಭಟನೆ ಮುಂದುವರೆಸಿದ್ದಾರೆ.

Advertisements

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಟ್ವೀಟ್‌ನಲ್ಲಿ ತಮ್ಮ ಹೋರಾಟವನ್ನು ಸ್ಥಗಿತಗೊಳಿಸುವಂತೆ ದಲೈವಾಲ್ ಅವರಲ್ಲಿ ಮನವಿ ಮಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಲು ಸಾಧ್ಯವಾದರೆ, ಕೇವಲ 200 ಕಿಮೀ ದೂರದಲ್ಲಿ ಕುಳಿತಿರುವ ಅನ್ನದಾತರೊಂದಿಗೆ ಏಕೆ ಮಾತುಕತೆ ನಡೆಸಲು ಸಾಧ್ಯವಿಲ್ಲ? ಸರ್ಕಾರದ ಪ್ರತಿಕ್ರಿಯೆ ಮತ್ತು ಕ್ರಮಕ್ಕಾಗಿ ಉಪವಾಸನಿರತ ರೈತರು ಕಾಯುತ್ತಿದ್ದಾರೆ” ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X