ಪಂಜಾಬ್ | ಶಂಭು ಗಡಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ತೆರವುಗೊಳಿಸಿದ ಪೊಲೀಸರು

Date:

Advertisements

ಉಪವಾಸ ನಿರತ ರೈತ ಮುಖಂಡರಾದ ಜಗಜೀತ್ ಸಿಂಗ್ ದಲ್ಲೇವಾಲ್ ಮತ್ತು ಕಿಸಾನ್ ಮಜ್ದೂರು ಮೋರ್ಚಾ ಮುಖ್ಯಸ್ಥ ಸರ್ವನ್ ಸಿಂಗ್ ಪಂಧೇರ್ ಸೇರಿದಂತೆ ಹಲವು ಮಂದಿ ಪ್ರಮುಖ ರೈತ ಹೋರಾಟಗಾರರನ್ನು ಪೊಲೀಸರು ಮೊಹಾಲಿಯಲ್ಲಿ ಬಂಧಿಸಿದ್ದಾರೆ.

ಕೇಂದ್ರ ಸರ್ಕಾರದ ನಿಯೋಗದ ಜತೆ ಚಂಡೀಗಢದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ವಾಪಸ್ಸಾದ ಇವರನ್ನು ಬಂಧಿಸಲಾಗಿದ್ದು, ಶಂಭು ಗಡಿ ಮತ್ತು ಖನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನೂ ತೆರವುಗೊಳಿಸಲಾಗಿದೆ.

ಶಂಭು ಮತ್ತು ಖನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಯಾವುದೇ ತೊಂದರೆ ಕೊಡುವುದಿಲ್ಲ ಎಂದು ಪಂಜಾಬ್ ಸಚಿವರು ಹೇಳಿಕೆ ನೀಡುತ್ತಿರುವ ನಡುವೆಯೇ ಈ ಕಾರ್ಯಾಚರಣೆ ನಡೆದಿದೆ. ಬುಧವಾರ ತಡರಾತ್ರಿ ಉಭಯ ಪ್ರತಿಭಟನಾ ತಾಣಗಳಲ್ಲಿ ರೈತರನ್ನು ತೆರವುಗೊಳಿಸಲಾಗಿದೆ.

Advertisements

ಖನೌರಿಯಲ್ಲಿ 250 ಮಂದಿ ಹಾಗೂ ಶಂಭು ಗಡಿಯಲ್ಲಿ 110 ಮಂದಿಯನ್ನು ಮತ್ತು ಮೊಹಾಲಿಯಲ್ಲಿ ಕೆಲ ರೈತರನ್ನು ಬಂಧಿಸಲಾಗಿದೆ ಎಂದು ಹಿರಿಯ ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಎಲ್ಲರನ್ನೂ ಕಲ್ಯಾಣ ಮಂಟಪವೊಂದಕ್ಕೆ ಸ್ಥಳಾಂತರಿಸಲಾಗಿದೆ. ಫೆಬ್ರವರಿಯ ಬಳಿಕ ರೈತರು ಹಾಗೂ ಕೇಂದ್ರದ ಪ್ರತಿನಿಧಿಗಳ ನಡುವೆ ನಡೆದ ಏಳನೇ ಸುತ್ತಿನ ಮಾತುಕತೆ ಇದಾಗಿತ್ತು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕಾನೂನು ಜಾರಿಗೊಳಿಸಬೇಕೆಂಬ ಬೇಡಿಕೆ ಬಗ್ಗೆ ಮಾತುಕತೆ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮನರೇಗ- ಕೂಲಿ ಸಂಕಟಕ್ಕೆ ಮೋದಿ ತಾತ್ಸಾರ

ಎಂಎಸ್‌ಪಿ ಸಮಸ್ಯೆ ಬಗ್ಗೆ ಆಳವಾಗಿ ಅಧ್ಯಯನ ನಡೆಸುವ ಸಲುವಾಗಿ ವಿವಿಧ ಹಕ್ಕುದಾರರನ್ನು ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಜಂಟಿ ಕಾರ್ಯದರ್ಶಿಯನ್ನು ನೇಮಕ ಮಾಡಲು ಕೇಂದ್ರ ಸಚಿವರು ನಿರ್ಧರಿಸಿದರು. ಮುಂದಿನ ಸುತ್ತಿನ ಮಾತುಕತೆ ಮೇ 4ರಂದು ನಡೆಯಲಿದೆ.

ಜಂಟಿ ಕಾರ್ಯದರ್ಶಿ ಪೂರ್ಣಚಂದ ಕಿಶನ್ ಅವರು ಕೃಷಿ ತಜ್ಞರು ಮತ್ತು ರೈತ ಮುಖಂಡರ ಜತೆ ಚರ್ಚೆ ನಡೆಸುವರು. ಪ್ರತಿಷ್ಠಿತ ಸಂಸ್ಥೆಗಳಾದ ಆರ್ಗನೈಸೇಷನ್ ಫಾರ್ ಎಕನಾಮಿಕ್ ಕೋ ಆಪರೇಷನ್ ಅಂಡ್ ಡೆವಲಪ್ಮೆಂಟ್, ಕ್ರಿಸಿಲ್ ಮತ್ತು ಆರ್ ಬಿಐನಂಥ ಸಂಸ್ಥೆಗಳ ಅಂಕಿ ಅಂಶಗಳನ್ನು ರೈತರು ಪ್ರಸ್ತುತಪಡಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

https://twitter.com/ANI/status/1902547750098510137?ref_src=twsrc%5Etfw%7Ctwcamp%5Etweetembed%7Ctwterm%5E1902547750098510137%7Ctwgr%5E13e3ea3630c780535836030b39dc8dfd5757adcd%7Ctwcon%5Es1_&ref_url=https%3A%2F%2Fwww.deccanherald.com%2F%2Findia%2Findia-politics-live-news-latest-updates-jp-nadda-narendra-modi-amit-shah-congress-rahul-gandhi-jairam-ramesh-nagpur-violence-shiv-sena-devendra-fadnavis-tmc-mamata-banerjee-nda-nitish-kumar-farmers-protest-3454362

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X