ಹರಿಯಾಣ ಚುನಾವಣೆ | ಯಾವುದೇ ಪಕ್ಷಕ್ಕೂ ಬೆಂಬಲ ನೀಡದಿರಲು ರೈತರ ನಿರ್ಧಾರ: ಮಹಾಪಂಚಾಯತ್

Date:

Advertisements

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸದಿರಲು ಅಥವಾ ವಿರೋಧಿಸದಿರಲು ಜಿಂದ್ ಜಿಲ್ಲೆಯ ಉಚ್ಚಾನಾದಲ್ಲಿ ಭಾನುವಾರ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ನಿರ್ಧರಿಸಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಭಾರತೀಯ ಕಿಸಾನ್ ನೌಜವಾನ್ ಒಕ್ಕೂಟದ ಆಶ್ರಯದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಹರಿಯಾಣ, ಪಂಜಾಬ್ ಮತ್ತು ಇತರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ರೈತರು ಭಾಗವಹಿಸಿದ್ದರು. ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್, ಶ್ರವಣ್ ಸಿಂಗ್ ಪಂಧೇರ್, ಅಭಿಮನ್ಯು ಕೊಹಾಡ್ ಭಾಗವಹಿಸಿದ್ದರು.

ಮಹಾಪಂಚಾಯತ್‌ನಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ ದಲ್ಲೆವಾಲ್, “ನಮಗೂ (ರೈತ ಚಳವಳಿ) ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಚಳವಳಿಯನ್ನು ಬಲಗೊಳಿಸುವುದು ನಮ್ಮ ಉದ್ದೇಶ. ಚುನಾವಣೆಯಲ್ಲಿ ನಾವು ಯಾರಿಗೂ ಸಹಾಯ ಮಾಡುವುದಿಲ್ಲ ಅಥವಾ ಯಾರನ್ನೂ ವಿರೋಧಿಸುವುದಿಲ್ಲ” ಎಂದು ತಿಳಿಸಿದರು.

Advertisements

“ನಮ್ಮ ಆಂದೋಲನವನ್ನು ಬಲಪಡಿಸುವ ನಿಟ್ಟಿನಲ್ಲಿ ನಾವು ಸರ್ಕಾರದ ವೈಫಲ್ಯಗಳು ಮತ್ತು ರೈತರ ವಿರುದ್ಧ ಕೈಗೊಂಡ ನಿರ್ಧಾರಗಳ ಬಗ್ಗೆ ಜನರಿಗೆ ಅರಿವು ಮೂಡಿಸುತ್ತೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಹರಿಯಾಣ ಚುನಾವಣೆ | ನಾನೇ ಅತ್ಯಂತ ಹಿರಿಯ ಶಾಸಕ; ಬಿಜೆಪಿ ಗೆದ್ದರೆ ಸಿಎಂ ಹುದ್ದೆಗೆ ಹಕ್ಕು ಮಂಡನೆ: ಅನಿಲ್ ವಿಜ್

“ನಾವು ಯಾವ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದೇವೆಯೋ ಅದು ಬರೀ ಪಂಜಾಬ್, ಹರಿಯಾಣದ ರೈತರ ಬೇಡಿಕೆಯಲ್ಲ, ಇಡೀ ದೇಶದ ರೈತರ ಬೇಡಿಕೆಯಾಗಿದೆ. ಇಡೀ ದೇಶವನ್ನು ಈ ಆಂದೋಲನದೊಂದಿಗೆ ಸಂಪರ್ಕಿಸಲು ದೇಶದ ಮೂಲೆ ಮೂಲೆಗಳಲ್ಲಿ ಮಹಾಪಂಚಾಯತ್‌ಗಳನ್ನು ನಡೆಸಲಾಗುತ್ತಿದೆ. ಮುಂದಿನ ಮಹಾಪಂಚಾಯತ್ ಸೆಪ್ಟೆಂಬರ್ 22ರಂದು ಕುರುಕ್ಷೇತ್ರದ ಪಿಪ್ಲಿಯಲ್ಲಿ ನಡೆಯಲಿದೆ” ಎಂದು ಮಾಹಿತಿ ನೀಡಿದರು.

ಇನ್ನು ರೈತರನ್ನು ತಡೆದ ವಿಚಾರದ ಬಗ್ಗೆ ಮಾತನಾಡಿದ ಅವರು, “ಕಿಸಾನ್ ಮಹಾಪಂಚಾಯತ್‌ಗೆ ರೈತರನ್ನು ಬರದಂತೆ ಸರ್ಕಾರ ತಡೆದ ರೀತಿ ತುಂಬಾ ನಾಚಿಕೆಗೇಡಿನದು, ಖಂಡನೀಯ. ರೈತರು ಜಮಾಯಿಸುವುದನ್ನು ತಡೆಯಲು ಹಲವೆಡೆ ಸಿಮೆಂಟ್ ತಡೆಗೋಡೆಗಳನ್ನು ಹಾಕಲಾಗಿದೆ. ರೈತರಿಗೆ ಆಹಾರ ನೀಡಬೇಡಿ ಎಂದು ಸರ್ಕಾರ ಗುರುದ್ವಾರದ ವ್ಯವಸ್ಥಾಪಕರಿಗೆ ಹೇಳಿದೆ” ಎಂದು ಆರೋಪಿಸಿದರು.

ರೈತ ಮುಖಂಡ ಅಭಿಮನ್ಯು ಕೋಹಾದ್ ಮಾತನಾಡಿ, “ಯಾವುದೇ ರಾಜಕೀಯ ಪಕ್ಷಕ್ಕೆ ಮತ ಹಾಕುವಂತೆ ನಾವು ಮನವಿ ಮಾಡುವುದಿಲ್ಲ. ಆದರೆ ನೀವು ಮತ ​​ಹಾಕಲು ಹೋದಾಗ ಕಳೆದ ಹತ್ತು ವರ್ಷಗಳಲ್ಲಿ ರೈತರು ಮತ್ತು ಕೂಲಿಕಾರರ ಮೇಲೆ ನಡೆದಿರುವ ದೌರ್ಜನ್ಯವನ್ನು ನೆನಪಿಸಿಕೊಳ್ಳಿ ಎಂದು ಖಂಡಿತಾ ಹೇಳುತ್ತೇವೆ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X