ಮೂರನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ; ಪ್ರತಿಭಟನೆಯೊಂದಿಗೆ ಕೇಂದ್ರದ ಜೊತೆ ಮಾತುಕತೆ

Date:

Advertisements

ದೆಹಲಿ ಚಲೋ ಹಮ್ಮಿಕೊಂಡಿರುವ ರೈತ ಪ್ರತಿಭಟನೆಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ಹಾಗೂ ಸರ್ಕಾರದೊಂದಿಗೆ ಈಗಾಗಲೇ ಎರಡು ಸುತ್ತು ವಿಫಲಗೊಂಡಿರುವ ಮಾತುಕತೆ ಮೂರನೇ ಸುತ್ತಿಗೆ ಸಜ್ಜುಗೊಂಡಿದೆ.

ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಶ್ ಗೋಯಲ್ ಹಾಗೂ ನಿತ್ಯಾನಂದ ರೈ ಅವರು ಇಂದು ಸಂಜೆ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.

ಎರಡು ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಫೆ.13ರಂದು ರೈತರು ದೆಹಲಿ ಚಲೋ ನಡೆಸಲು ಪ್ರಾರಂಭಿಸಿದರು.

Advertisements

ಈ ನಡುವೆ  ಭಾರತೀಯ ಕಿಸಾನ್ ಯೂನಿಯನ್‌ ಹರ್ಮೀತ್‌ ಸಿಂಗ್‌ ಹಾಗೂ ಪಂಜಾಬ್‌ನ ಸಂಯುಕ್ತ ಕಿಸಾನ್‌ ಮೋರ್ಚಾ ಫೆ.16ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿವೆ. ಈ ನಿಟ್ಟಿನಲ್ಲಿ ಫೆ.15 ರಂದು (ಇಂದು) ಪಂಜಾಬ್‌ನ ಎಲ್ಲ ಟೋಲ್‌ ಪ್ಲಾಜಾಗಳಲ್ಲಿ ಬೆಳಿಗ್ಗೆ 11 ಗಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಪ್ರತಿಭಟನೆ ನಡೆಸಲಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ

ಎರಡನೇ ದಿನ (ಫೆ.14) ನಡೆದ ಪ್ರತಿಭಟನೆಯಲ್ಲಿ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಭದ್ರತಾ ಪಡೆಗಳು ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ ರೈತರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಲ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.

ಹರಿಯಾಣ ಪೊಲೀಸರು ಡಾಟಾ ಸಿಂಘ್ವಾಲಾ-ಖನೌರಿ ಗಡಿಯಲ್ಲಿ ಬ್ಯಾರಿಕೇಡ್‌ಗಳಿಂದ ಭದ್ರಪಡಿಸಿದ್ದು, ರೈತರು ತಮ್ಮ ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ದೆಹಲಿಗೆ ಹೋಗುವುದನ್ನು ತಡೆದಿದ್ದಾರೆ. ಪ್ರತಿಭಟನಾ ನಿರತ ರೈತರು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ ಮತ್ತು ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ .

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X