ಭೀಕರ ಅಪಘಾತ | ಚತುಷ್ಪಥ ಹೆದ್ದಾರಿಯಲ್ಲಿ ಹಾರಿ ಪಲ್ಟಿ ಹೊಡೆದ ಕಾರು; ಬೈಕ್‌ ಸವಾರ ಸೇರಿ 5 ಮಂದಿ ಸಾವು

Date:

Advertisements

ಚತುಷ್ಪಥ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಇನೋವಾ ಕಾರೊಂದು ಮೊದಲು ದ್ವಿಚಕ್ರ ವಾಹನಕ್ಕೆ ಗುದ್ದಿ ಆಮೇಲೆ ಡಿವೈಡರ್‌ಗೆ ಢಿಕ್ಕಿ ಹೊಡೆದು ಗಾಳಿಯಲ್ಲಿ ಹಾರಿಕೊಂಡು ಬಿದ್ದಿರುವ ಭೀಕರ ಅಪಘಾತ ತಮಿಳುನಾಡಿನಲ್ಲಿ ನಡೆದಿದೆ.

ಕಾರಿನಲ್ಲಿದ್ದ ಐವರು ಪ್ರಯಾಣಿಕರಲ್ಲಿ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೈಕ್ ಸವಾರ ಪಂಡಿ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಮೃತರನ್ನು ಕನಗವೇಲ್ ಹಾಗೂ ಆತನ ಪತ್ನಿ ಕೃಷ್ಣಕುಮಾರಿ, ಸಂಬಂಧಿ ನಾಗಜ್ಯೋತಿ, 8 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ.

ಮಧುರೈ ಸಮೀಪದ ತಿರುಮಂಗಲಂ ಬಳಿ ಭೀಕರ ಅಪಘಾತ ನಡೆದಿದೆ. ವಿಲ್ಲಾಪುರಂ ಮೂಲದ ಕನಗವೇಲ್ ಎಂಬಾತ ಕುಟುಂಬಸಮೇತ ತಲವೈಪುರಂ ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದರು. ಕಾರು ಚಾಲಕ ಮಣಿಕಂದಂ ಚತುಷ್ಪಥ ಹೆದ್ದಾರಿಯಲ್ಲಿ ವೇಗವಾಗಿ ಬರುವಾಗ ಕಾರು ನಿಯಂತ್ರಣ ತಪ್ಪಿದೆ.

Advertisements

ಈ ಸುದ್ದಿ ಓದಿದ್ದೀರಾ? ಜೈಲಿನಲ್ಲಿ ಕೇಜ್ರಿವಾಲ್: ಭ್ರಷ್ಟಾಚಾರದ ಕಾರಣ ನೀಡಿ ಎಎಪಿಗೆ ಸಚಿವ ರಾಜೀನಾಮೆ

ಹೆದ್ದಾರಿಯ ಎಡಬದಿಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಮೊದಲು ಗುದ್ದಿದ ಕಾರು ಬಳಿಕ ಅದೇ ವೇಗದಲ್ಲಿ ಡಿವೈಡರ್‌ಗೆ ಢಿಕ್ಕಿ ಹೊಡೆದು ತರಗೆಲೆಯಂತೆ ಗಾಳಿಯಲ್ಲಿ ಹಾರಿ ಮತ್ತೊಂದು ಬದಿಗೆ ಪಲ್ಟಿ ಹೊಡೆದು ಬಿದ್ದಿದೆ.

ತಿರುಮಂಗಲಂ ಬಳಿ ನಡೆದಿರುವ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X