ಶುಲ್ಕ ವಿವಾದ | ಶಾಲೆಯಿಂದ ಹೊರಹಾಕಲಾಗಿದ್ದ 32 ವಿದ್ಯಾರ್ಥಿಗಳ ಮರು ಸೇರ್ಪಡೆಗೆ ಆದೇಶ

Date:

Advertisements

ದೆಹಲಿಯಲ್ಲಿ ಶುಲ್ಕ ವಿವಾದ ಕಾರಣಕ್ಕಾಗಿ ಶಾಲೆಯಿಂದ ಹೊರದಬ್ಬಲಾಗಿದ್ದ 32 ವಿದ್ಯಾರ್ಥಿಗಳ ಪೋಷಕರು ದೂರುಗಳನ್ನು ನೀಡಿದ ಬಳಿಕ ವಿದ್ಯಾರ್ಥಿಗಳನ್ನು ಮರಳಿ ಸೇರಿಸಿಕೊಳ್ಳುವಂತೆ ಡಿಪಿಎಸ್‌ ದ್ವಾರಕಾ ಶಾಲೆಗೆ ಶಿಕ್ಷಣ ನಿರ್ದೇಶನಾಲಯ (ಡಿಒಇ) ನಿರ್ದೇಶನ ನೀಡಿದೆ.

ಶಾಲೆಗೆ ನೀಡಲಾದ ಆದೇಶ ಪ್ರತಿಯಲ್ಲಿ ಡಿಒಇ, “ಶಾಲೆಯ ಧೋರಣೆ, ಕ್ರಮಗಳು ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿವೆ. ಶಾಲೆಯು ಇಲಾಖೆಯ ಅನುಮೋದನೆಯಿಲ್ಲದೆ ಶುಲ್ಕ ಹೆಚ್ಚಳ ಮತ್ತು ಶುಲ್ಕ ಸಂಬಂಧಿತ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ತಾರತಮ್ಯವನ್ನು ಮಾಡುವಂತಿಲ್ಲ. ಯಾವುದೇ ಮಗು ಶುಲ್ಕ ಸಂಬಂಧಿತ ಸಮಸ್ಯೆಗಳ ಕಾರಣಕ್ಕೆ ತಾರತಮ್ಯವನ್ನು ಎದುರಿಸಬಾರದು. ಆದರೂ, ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಲಾಗಿದೆ. ಇದು ಕಾನೂನುಬಾಹಿರ ಕ್ರಮ. ಶಾಲೆಯಿಂದ ಹೊರಹಾಕಲ್ಪಟ್ಟ ಮಕ್ಕಳನ್ನು ಮರಳಿ ಸೇರಿಸಿಕೊಳ್ಳಬೇಕು” ಎಂದು ಸೂಚಿಸಿದೆ.

“ಸರಿಯಾದ ಯಾವುದೇ ಕಾರಣ, ಸಮರ್ಥನೆಯ ಅಂಶಗಳಿಲ್ಲದೆ ವಿದ್ಯಾರ್ಥಿಗಳನ್ನು ತೆಗೆದುಹಾಕುವುದು, ಪೋಷಕರ ಒಪ್ಪಿಗೆಯಿಲ್ಲದೆ ವಿದ್ಯಾರ್ಥಿಗಳನ್ನು ಶಾಲಾ ಬಸ್‌ಗಳಲ್ಲಿಯೇ ಮನೆಗೆ ಕಳುಹಿಸುವುದು ಅನುಚಿತ ಕೃತ್ಯವಾಗಿದೆ. ಹೆಚ್ಚಿನ ಶುಲ್ಕವನ್ನು ಪಾವತಿಸದ ಕಾರಣ ಪ್ರವೇಶ ಪತ್ರ ಅಥವಾ ವರ್ಗಾವಣೆ ಪ್ರಮಾಣಪತ್ರಗಳನ್ನು ತಡೆಹಿಡಿಯುವುದು ಸೂಕ್ತವಲ್ಲ. ಇಂತಹ ಧೋರಣೆಯನ್ನು ಸಹಿಸಲಾಗದು” ಎಂದು ಹೇಳಿದೆ.

Advertisements

“ಶುಲ್ಕ ವಿವಾದದ ಕಾರಣಕ್ಕಾಗಿ ಶಾಲೆಯಿಂದ ತೆಗೆದುಹಾಕಲಾದ ಎಲ್ಲ ವಿದ್ಯಾರ್ಥಿಗಳನ್ನು ಮತ್ತೆ ಸೇರಿಸಿಕೊಳ್ಳಬೇಕು. ಬಲವಂತ ಅಥವಾ ತಾರತಮ್ಯಕ್ಕೆ ಒಳಪಡಿಸಬಾರದು. ಶಾಲೆಯು ಮೂರು ದಿನಗಳಲ್ಲಿ ಅನುಸರಣಾ ವರದಿಯನ್ನು ಇಲಾಖೆಗೆ ಸಲ್ಲಿಸಬೇಕು ಎಂದು ಡಿಒಇ ಹೇಳಿದೆ. ಆದಾಗ್ಯೂ, ಈವರೆಗೆ ಶಾಲೆಯಿಂದ ಯಾವುದೇ ಪಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಪೋಷಕರ ದೂರಿನ ಪ್ರಕಾರ, “ಶಾಲೆಯು ಕಳೆದ ಕೆಲವು ವರ್ಷಗಳಿಂದ ಅನುಮೋದಿಸದ ಶುಲ್ಕಗಳನ್ನು ಸಂಗ್ರಹಿಸಲು ಮುಂದಾಗಿದೆ. ಆ ಶುಲ್ಕಗಳನ್ನು ಪಾವತಿಸುವಂತೆ ಪೋಷಕರ ಮೇಲೆ ಒತ್ತಡ ಮತ್ತು ಬಲವಂತದ ತಂತ್ರಗಳನ್ನು ಬಳಸಿದೆ. ಮಾಸಿಕ ಶುಲ್ಕವನ್ನು ಈ ಹಿಂದೆ 7,000 ರೂ. ಹೆಚ್ಚಿಸಲಾಗಿತ್ತು. ಇತ್ತೀಚೆಗೆ ಅದನ್ನು 9,000 ರೂ.ಗೆ ಹೆಚ್ಚಿಸಲಾಗಿದೆ” ಎಂದು ಆರೋಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X