ಉತ್ತರಕಾಶಿ | ಭೀಕರ ಅಗ್ನಿ ಅವಘಡ: ಮಹಿಳೆ ಸಾವು, ಹತ್ತು ಮನೆಗಳು ನಾಶ

Date:

ಉತ್ತರಕಾಶಿ ಜಿಲ್ಲೆಯ ಮೋರಿ ಬ್ಲಾಕ್‌ನ ಸವಾನಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಅಗ್ನಿ ಅವಘಡದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಸುಮಾರು ಹತ್ತು ಮನೆಗಳು ನಾಶವಾಗಿದೆ.

- Advertisement -

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಜಿಲ್ಲಾ ಆಡಳಿತ, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್), ಪೊಲೀಸರು, ಅಗ್ನಿಶಾಮಕ ಸೇವೆಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದನ್ನು ಓದಿದ್ದೀರಾ? ಟರ್ಕಿ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ; 76 ಮಂದಿ ದುರ್ಮರಣ

ಆರಂಭಿಕ ವರದಿ ಪ್ರಕಾರ ಸುಮಾರು 8ರಿಂದ 10 ಮನೆಗಳು ನಾಶವಾಗಿದೆ. ಸುಮಾರು 25 ಮನೆಗಳಿಗೆ ಹಾನಿ ಉಂಟಾಗಿದೆ ಎಂದು ವರದಿಯಾಗಿದೆ. ಈ ಅಗ್ನಿ ದುರಂತದಲ್ಲಿ ಸವಾನಿ ಗ್ರಾಮದ 75 ವರ್ಷದ ಬ್ರಹ್ಮ ದೇವಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಉತ್ತರಕಾಶಿಯ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಭಾನುವಾರ ರಾತ್ರಿ 10:40ರ ಸುಮಾರಿಗೆ ಅಗ್ನಿ ದುರಂತದ ಬಗ್ಗೆ ಮಾಹಿತಿ ಲಭಿಸಿದೆ. ಕೂಡಲೇ ಮೋರಿ ಮತ್ತು ನೌಗಾಂವ್‌ನಲ್ಲಿರುವ ಎಸ್‌ಡಿಆರ್‌ಎಫ್, ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳು, ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ 5 ಕಿ.ಮೀ. ಕಾಲ್ನಡಿಗೆ ದಾರಿ ಮಾತ್ರವಿದ್ದು ಇದು ತಂಡಕ್ಕೆ ದೊಡ್ಡ ಸವಾಲಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ಮೆಹರ್ಬಾನ್ ಸಿಂಗ್ ಬಿಶ್ತ್, “ಮೋರಿಯ ತಹಶೀಲ್ದಾರ್ ಅವರು ಹೆಚ್ಚುವರಿ ಕಂದಾಯ ಸಿಬ್ಬಂದಿ ಮತ್ತು ರಕ್ಷಣಾ ಸಾಮಾಗ್ರಿಗಳೊಂದಿಗೆ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ಸ್ಥಳಕ್ಕೆ ತಲುಪಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪ್ರಯಾಗ್‌ರಾಜ್‌ | ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ

ಹಾಗೆಯೇ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ದೇವಾನಂದ್ ಶರ್ಮಾ, ಕಂದಾಯ ಮತ್ತು ಅರಣ್ಯ ಇಲಾಖೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ.

ಕಾರ್ಯಾಚರಣೆ ಸಹಾಯವಾಗಲು ಹತ್ತಿರದ ಪ್ರದೇಶಗಳಿಂದ ಹೆಚ್ಚುವರಿ ತಂಡಗಳನ್ನು ಕಳುಹಿಸಲಾಗಿದೆ. ವೈದ್ಯಕೀಯ ಮತ್ತು ಕುಡಿಯುವ ನೀರು ಸೇವೆಗಳು ಸೇರಿದಂತೆ ಎಲ್ಲಾ ಸಂಬಂಧಿತ ಇಲಾಖೆಗಳಿಗೆ ತ್ವರಿತವಾಗಿ ಸೇವೆ ನೀಡುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸದ್ಯ ಈ ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ನಿರಾಶ್ರಿತರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಅಮೆರಿಕದ ಶೇ 100 ಸುಂಕದಿಂದ ಭಾರತದ ಆರ್ಥಿಕತೆಗೆ ಕಾದಿದೆ ಭಾರಿ ಆಪತ್ತು

ವಾಷಿಂಗ್ಟನ್‌ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ...

ಮಮತಾ ಬೆಂಬಲಕ್ಕೆ ಕಾಂಗ್ರೆಸ್: ಮೋದಿಗೆ ಇಸಿಯಿಂದ ‘ಬರ್ತ್‌ಡೇ ಗಿಫ್ಟ್’ ಎಂದ ವೇಣುಗೋಪಾಲ್

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಂತರಿಕ ಭಿನ್ನಮತದ ಹಿನ್ನೆಲೆಯಲ್ಲಿ, ಮುಂಬರುವ...

ಫ್ಯಾಕ್ಟ್‌ಚೆಕ್ | ‘ಮೋದಿಗೂ 76 ವರ್ಷ, ಅವರ ಶಿಕ್ಷಕರಿಗೂ 76 ವರ್ಷ’; ಅಸಲಿಯತ್ತೇನು?

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಸಂದರ್ಭದಲ್ಲಿ, ಅವರ ಶಾಲಾ...