ಅಶಿಸ್ತಿನ ವರ್ತನೆ: ಕಾಂಗ್ರೆಸ್, ಡಿಎಂಕೆ ಸೇರಿ 14 ಲೋಕಸಭಾ ಸದಸ್ಯರ ಅಮಾನತು

Date:

Advertisements

ಪದೇ ಪದೆ ಕಲಾಪಕ್ಕೆ ಅಡ್ಡಿಯುಂಟು ಮಾಡಿದ ಅಶಿಸ್ತಿನ ಆರೋಪದ ಮೇಲೆ ಕಾಂಗ್ರೆಸ್‌, ಡಿಎಂಕೆ ಸೇರಿ ಒಟ್ಟು 14 ಲೋಕಸಭಾ ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಸಂಸದರಾದ ಟಿ ಎನ್ ಪ್ರತಾಪನ್, ಡೀನ್ ಕುರಿಯಾಕೋಸ್, ಎಸ್ ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಹೈಬಿ ಈಡನ್ ಅವರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ಪ್ರಸ್ತಾವನೆಯನ್ನು ಮಂಡಿಸಿದರು.

ವಿರೋಧ ಪಕ್ಷದ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆ ಲೋಕಸಭಾ ಸದನವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು.

Advertisements

ಮಧ್ಯಾಹ್ನ 3 ಗಂಟೆಗೆ ಕಲಾಪ ಶುರುವಾದಗ ಮತ್ತೆ ವಿಪಕ್ಷ ಸಂಸದರು ಪ್ರತಿಭಟನೆ ನಡೆಸಿದರು.

ಈ ಹಿನ್ನಲೆಯಲ್ಲಿ ಕೇಂದ್ರ  ಸಚಿವ ಪ್ರಹ್ಲಾದ್ ಜೋಶಿ ಅವರು ಪುನಃ ಪ್ರತಿಪಕ್ಷದ ಸಂಸದರಾದ ವೇಗಿ ಶ್ರೀಕಂಠನ್, ಬೆನ್ನಿ ಬೆಹನನ್, ಮೊಹಮ್ಮದ್ ಜಾವೇದ್, ಪಿಆರ್ ನಟರಾಜನ್, ಕನಿಮೋಳಿ, ಕೆ ಸುಬ್ರಮಣ್ಯಂ, ಎಸ್‌ಆರ್ ಪಾರ್ಥಿಬನ್, ಎಸ್ ವೆಂಕಟೇಶನ್ ಮತ್ತು ಮಾಣಿಕ್ಕಂ ಟ್ಯಾಗೋರ್ ಅವರನ್ನು ಅಶಿಸ್ತಿನ ವರ್ತನೆಗಾಗಿ ಅಮಾನತುಗೊಳಿಸಿದರು. ಈ ಪ್ರಕ್ರಿಯೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯನ್ನು ನಾಳೆಗೆ(ಡಿ.15) ಮುಂದೂಡಲಾಗಿದೆ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳಜಗಳದಲ್ಲಿ ಬಸವಳಿದ ಬಿಜೆಪಿ; ಕರ್ನಾಟಕಕ್ಕೆ ಬೇಕು ಸಮರ್ಥ ವಿರೋಧ ಪಕ್ಷ

ಇದಕ್ಕೂ ಮೊದಲು ಬೆಳಗಿನ ಕಲಾಪದಲ್ಲಿ ಟಿಎಂಸಿಯ ಸದಸ್ಯ ಡೆರೆಕ್ ಓ ಬ್ರಿಯಾನ್ ಅವರನ್ನು ಒಟ್ಟಾರೆ ಅಶಿಸ್ತಿನ ವರ್ತನೆಗಾಗಿ ನಿಯಮ 256 ರ ಅಡಿಯಲ್ಲಿ ರಾಜ್ಯಸಭೆಯಿಂದ ಅಮಾನತುಗೊಳಿಸಲಾಯಿತು.

ಸದನದ ನಾಯಕ ಪಿಯೂಷ್ ಗೋಯಲ್ ಅವರು ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಈ ಪ್ರಸ್ತಾಪವನ್ನು ಅಂಗೀಕರಿಸಿದರು.

ನಿನ್ನೆ (ಡಿ.13) ಲೋಕಸಭೆಯಲ್ಲಿ ಕಲಾಪ ನಡೆಯುತ್ತಿದ್ದಾಗ ಸಂದರ್ಶಕರ ಗ್ಯಾಲರಿಯಿಂದ ಇಬ್ಬರು ಅಪರಿಚಿತರು ಜಿಗಿದು ಭದ್ರತಾ ಲೋಪ ಉಂಟಾದ ಕಾರಣ 8 ಭದ್ರತಾ ಸಿಬ್ಬಂದಿಯನ್ನು ಭದ್ರತಾ ಉಲ್ಲಂಘನೆಯಡಿಯಲ್ಲಿ  ಅಮಾನತುಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X