ಅಕ್ಕಿ ಗಿರಣಿಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಸಾವು

Date:

Advertisements

ಅಕ್ಕಿ ಗಿರಣಿಯಲ್ಲಿ ಹೊರಸೂಸಿದ ಹೊಗೆಯನ್ನು ಉಸಿರಾಡಿದ ಪರಿಣಾಮ ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದೆ.

ವಿಷಾನಿಲವನ್ನು ಉಸಿರಾಡಿದ ನಂತರ ಹಲವು ಕಾರ್ಮಿಕರು ಮೂರ್ಛೆ ಹೋಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿಮ, ಐವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಬಹ್ರೈಚ್‌ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಮಾನಂದ ಪ್ರಸಾದ್ ಕುಶ್ವಾಹ ಪಿಟಿಐಗೆ ತಿಳಿಸಿದ್ದಾರೆ.

ಬಹ್ರೈಚ್‌ನಲ್ಲಿರುವ ರಾಜ್‌ಗರಿಯಾ ಅಕ್ಕಿ ಗಿರಣಿಯಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಹಲವಾರು ಕಾರ್ಮಿಕರು ಶುಕ್ರವಾರ ಬೆಳಿಗ್ಗೆ ಕೆಲಸಕ್ಕಾಗಿ ಗಿರಣಿಗೆ ಬಂದಿದ್ದಾರೆ. ಈ ವೇಳೆ, ಡ್ರೈಯರ್‌ನಿಂದ ಹೊರಹೊಮ್ಮುತ್ತಿದ್ದ ಹೊಗೆಯನ್ನು ಪರಿಶೀಲಿಸಲು ಹೋಗಿದ್ದಾರೆ. ಆದರೆ, ಇಡೀ ಗಿರಣಿಯನ್ನು ಹೊಗೆ ಆವರಿಸಿದ್ದರಿಂದ ಎಲ್ಲ ಕಾರ್ಮಿಕರು ಮೂರ್ಛೆ ಹೋಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

“ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ತಂಡವು ಧಾವಿಸಿದ್ದು, ಮೂರ್ಛೆ ಹೋಗಿದ್ದ ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸಿತು. ಆದರೂ, ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಕಾರ್ಮಿಕರ ಆರೋಗ್ಯ ಸುಧಾರಿಸುತ್ತದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ರಮಾನಂದ ಪ್ರಸಾದ್ ತಿಳಿಸಿದ್ದಾರೆ.

ಘಟನೆಗೆ ಕಾರಣವಾದ ವಿಷಯಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X