ಅತ್ತೆ, ಗಂಡನ ಸ್ನೇಹಿತರೊಂದಿಗೆ ಲೈಂಗಿಕ ಸಂಬಂಧಕ್ಕೆ ಬಲವಂತ; ಪ್ರಕರಣ ದಾಖಲು

Date:

Advertisements

ತನ್ನ ಅತ್ತೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ನಿರಾಕರಿಸಿದ್ದಕ್ಕಾಗಿ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ತನ್ನ ತೋಳುಗಳನ್ನು ಅತ್ತೆ ಬ್ಲೇಡ್‌ನಿಂದ ಕೊಯ್ದಿದ್ದಾಳೆ ಎಂದು ಮಹಿಳೆ ಆರೋಪಿಸಿದ್ದಾರೆ. ಆಕೆಯ ದೂರಿನ ಆಧಾರದ ಮೇಲೆ ಆಕೆಯ ಪತಿ, ಅತ್ತೆ, ನಾದಿನಿ ಹಾಗೂ ಇತರ ಸಂಬಂಧಿಕರ ವಿರುದ್ಧ ಹಲ್ಲೆ, ವರದಕ್ಷಿಣೆ ಬೇಡಿಕೆ ಹಾಗೂ ವಿಶ್ವಾಸದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ಆಗ್ರಾದ ಅಂಜಲಿ ಚತುರ್ವೇದಿ 2022ರಲ್ಲಿ ವಿವಾಹವಾಗಿದ್ದರು. ತನ್ನ ಪತಿ ಮತ್ತು ಆತನ ಕುಟುಂಬಸ್ಥರೊಂದಿಗೆ ಗಾಜಿಪುರದಲ್ಲಿ ವಾಸಿಸುತ್ತಿದ್ದರು. ಆಕೆ ಗಾಜಿಪುರಕ್ಕೆ ತೆರಳಿದ ಕೆಲವೇ ದಿನಗಳಲ್ಲಿ ಆಕೆಗೆ ಪತಿಯ ಕುಟುಂಬದವರು ಕಿರುಕುಳ ನೀಡಲು ಆರಂಭಿಸಿದ್ದರು ಎಂದು ಆರೋಪಿಸಲಾಗಿದೆ.

ಎಫ್‌ಐಆರ್ ಪ್ರಕಾರ, ದೂರುದಾರ ಮಹಿಳೆಯ ಮೇಲೆ ಆಕೆಯ ಅತ್ತೆಗೆ ಲೈಂಗಿಕ ಆಕರ್ಷಣೆ ಇತ್ತು. ಆಕೆಯನ್ನು ತನ್ನ ಕಾಮತೃಷೆಗಾಗಿ ಒತ್ತಾಯಿಸುತ್ತಿದ್ದಳು. ಕೃತ್ಯಕ್ಕೆ ದೂರುದಾರ ಮಹಿಳೆ ನಿರಾಕರಿಸಿದಾಗ ಆಕೆಯ ಮೇಲೆ ಅತ್ತೆ ಬ್ಲೇಡ್‌ನಿಂದ ಹಲ್ಲೆ ನಡೆಸಿದ್ದಾಳೆ ಎನ್ನಲಾಗಿದೆ.

Advertisements

ತನ್ನ ಅತ್ತೆ ಎಸಗುತ್ತಿದ್ದ ಕೃತ್ಯದ ಬಗ್ಗೆ ತನ್ನ ಪತಿಯ ಬಳಿ ಹೇಳಿಕೊಂಡಿದ್ದಾರೆ. ಆದರೆ, ಆಕೆಯ ಮಾತನ್ನು ಪತಿ ನಿರಾಕರಿಸಿದ್ದಾನೆ. ಬಳಿಕ, ಆಕೆಯನ್ನು ಅತ್ತೆ ಹಿಂಸಿಸಲು ಆರಂಭಿಸಿದ್ದಳು ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ.

ಮಹಿಳೆಗೆ ನಾನಾ ರೀತಿಯಲ್ಲಿ ಕಿರುಕುಳ ನೀಡಲು ಆರಂಭಿಸಿದ ಅತ್ತೆ, ಪದೇ ಪದೇ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದಾರೆ. ಆಕೆಯನ್ನು ನಿರಂತರವಾಗಿ ನಿಂದಿಸುವುದು, ಹಲ್ಲೆ ನಡೆಸುವುದು ಮಾಡಿದ್ದಾರೆ. ವರದಕ್ಷಿಣೆ ತರಲಾಗದಿದ್ದಾಗ, ತನ್ನ ಅತ್ತೆ, ನಾದಿನಿ ಹಾಗೂ ಪತಿ – ಆತನ ಸ್ನೇಹಿತರೊಂದಿಗೆ ಲೈಂಗಿಕ ಸಂಬಂಧ ಬೆಳೆಸುವಂತೆ ಬಲವಂತ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X