ಚಿರತೆ ಹಿಡಿಯಲು ‘ಸೊಳ್ಳೆ ಪರದೆ’ ಜೊತೆ ಕಾಡಿಗೆ ಹೊರಟ ಬಿಜೆಪಿ ಮಾಜಿ ಶಾಸಕ; ವಿಡಿಯೋ ವೈರಲ್

Date:

Advertisements

ಗ್ರಾಮಗಳ ಮೇಲೆ ದಾಳಿ ಮಾಡುತ್ತಿರುವ ಚಿರತೆಯನ್ನು ಅರಣ್ಯಾಧಿಕಾರಿಗಳು ಹಿಡಿಯಲು ಸಾಧ್ಯವಾಗದ ಹಿನ್ನಲೆಯಲ್ಲಿ ಬಿಜೆಪಿ ನಾಯರೊಬ್ಬರು ಸೊಳ್ಳೆ ಪರದೆ ಮೂಲಕ ಚಿರತೆ ಹಿಡಿಯಲು ಮುಂದಾಗಿದ್ದಾರೆ. ಮಧ್ಯಪ್ರದೇಶದ ರೇವಾದಲ್ಲಿ ಬಿಜೆಪಿ ಮಾಜಿ ಶಾಸಕ ಶ್ಯಾಮಲಾಲ್ ದ್ವಿವೇದಿ ಅವರು ಚಿರತೆ ಹಿಡಿಯಲು ಸೊಳ್ಳೆ ಪರದೆ ತೆಗೆದುಕೊಂಡು ಜಮೀನಿಗೆ ತೆರಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ.

ರೇವಾ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಲ್ಲಿ ಸುಮಾರು ಐದು ಮಂದಿಯ ಮೇಲೆ ಚಿರತೆ ದಾಳಿ ಮಾಡಿದೆ. ಆ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಕಸರತ್ತು ನಡೆಸುತ್ತಿದೆ. ಆದರೂ, ಚಿರತೆಯನ್ನು ಹಿಡಿಯಲಾಗಿಲ್ಲ. ಹೀಗಾಗಿ, ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಮಾಜಿ ಶಾಸಕ ದ್ವಿವೇದಿ ಅವರು ಕೆಲ ಜನರನ್ನು ಜೊತೆಗೂಡಿಸಿಕೊಂಡು ಸೊಳ್ಳೆ ಪರದೆಯೊಂದಿಗೆ ಚಿರತೆ ಹಿಡಿಯಲು ಜಮೀನಿಗೆ ಹೋಗಿದ್ದಾರೆ.

“ಚಿರತೆ ದಾಳಿಗೆ ತುತ್ತಾದವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಎಮ್ಮೆಯೊಂದು ಸಾವನ್ನಪ್ಪಿದೆ. ಚಿರತೆ ಹಿಡಿಯಲು ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಒತ್ತಡ ಹೇರಿದ್ದೇವೆ. ಚಿರತೆ ದಾಳಿಯಿಂದ ಜನರನ್ನು ರಕ್ಷಿಸುವಂತೆ ಒತ್ತಾಯಿಸಿದ್ದೇವೆ” ಎಂದು ದ್ವಿವೇದಿ ಹೇಳಿದ್ದಾರೆ.

Advertisements

“ಚಿರತೆ ದಾಳಿಗೆ ಒಳಗಾಗುವ ಭೀತಿಯಿಂದ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಜನರಿಗಾಗಿ ಚಿರತೆ ದಾಳಿಯ ಅತಂಕವಿರುವ ಪ್ರದೇಶದಲ್ಲಿ ಮೊಕ್ಕಾಂ ಹೂಡುತ್ತೇನೆ. ಚಿರತೆ ಹಿಡಿಯುವವರೆಗೂ ಅಲ್ಲಿಂದ ಕದಲುವುದಿಲ್ಲ” ಎಂದಿದ್ದಾರೆ.

“ಜನರಲ್ಲಿ ನೈತಿಕ ಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ. ಚಿರತೆ ದಾಳಿ ಕುರಿತು ಜಿಲ್ಲಾಧಿಕಾರಿ ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದೇನೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X