ದೇಶ ಸಂಭ್ರಮದಲ್ಲಿದೆ, ಮತಾಂಧರಿಂದ ಮಾತ್ರ ವಿರೋಧ: ಸುಬ್ರಮಣಿಯನ್ ಸ್ವಾಮಿ

Date:

Advertisements

ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದೆ ಆಹ್ವಾನ ತಿರಸ್ಕರಿಸಿರುವ ವಿಪಕ್ಷಗಳ ನಡೆಗೆ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಪಕ್ಷದವರಿಗೆ ಅಸೂಯೆ ಉಂಟಾಗಿದೆ. ರಾಮ ಮಂದಿರ ನಿರ್ಮಾಣವಾಗುತ್ತದೆಂದು ಅವರು ಎಂದಿಗೂ ಭಾವಿಸಿರಲಿಲ್ಲ. ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಇಡೀ ದೇಶ ಸಂಭ್ರಮದಲ್ಲಿದೆ. ವಿಪಕ್ಷದವರು ಕಷ್ಟದ ಸ್ಥಿತಿಯಲ್ಲಿದ್ದಾರೆ. ಮಂದಿರ ನಿರ್ಮಾಣಕ್ಕೆ ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್ನರು ಸೇರಿದಂತೆ ದೇಶದ ಶೇ.82 ಹಿಂದೂಗಳು ಪ್ರತಿಭಟಿಸಲಿಲ್ಲ. ಪಾರ್ಸಿಗಳು, ಯಹೂದಿಗಳೆಲ್ಲರೂ ಬೆಂಬಲಿಸಿದ್ದಾರೆ ಎಂದರು.

ಮುಸ್ಲಿಂ ಸಮುದಾಯದಲ್ಲಿಯೂ ಕೂಡ ಬಹತೇಕರು ನಾವು ಭಾರತದಲ್ಲಿ ವಾಸಿಸಲು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಹೇಳುತ್ತಾರೆ. ಆದ್ದರಿಂದ ನಾವು ಇದಕ್ಕೆ ಅವಕಾಶ ಕಲ್ಪಿಸಬೇಕು. ಹೊರಗಿನಿಂದ ಹಣ ಪಡೆಯುತ್ತಿರುವ ಮತಾಂಧರು ಮಾತ್ರ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

ಭಾರತದ ಪ್ರಮುಖ ಸ್ವಾಮೀಜಿಗಳಾದ ಶಂಕರಾಚಾರ್ಯರು, ಒರಿಸ್ಸಾದ ಗೋವರ್ಧನ ಮಠದ ಸ್ವಾಮಿ ನಿಶ್ಚಲಾನಂದ ಸರಸ್ವತಿ ಮತ್ತು ಉತ್ತರಾಖಂಡದ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸಿರುವುದನ್ನು ಸುಬ್ರಮಣಿಯನ್ ಸ್ವಾಮಿ ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಶಂಕರಾಚಾರ್ಯರು ತಮ್ಮ ರಾಮ ಮಂದಿರಕ್ಕೆ ಆಹ್ವಾನದಿಂದ ಹೊರಗುಳಿಯಲು ಧಾರ್ಮಿಕ ಗ್ರಂಥಗಳನ್ನು ಉಲ್ಲೇಖಿಸಿದ್ದಾರೆ. ಅಪೂರ್ಣ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾಪನಾ ಪೂಜೆಯನ್ನು ಮಾಡುವುದನ್ನು ಪ್ರಾಚೀನ ಗ್ರಂಥಗಳು ಅನುಮೋದಿಸುವುದಿಲ್ಲ ಎಂದು ತಿಳಿಸಿರುವುದನ್ನು ರಾಜ್ಯಸಭೆಯ ಮಾಜಿ ಸದಸ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X