ಬೆಂಬಲ ಬೆಲೆಗೆ ಸುಗ್ರೀವಾಜ್ಞೆ ಬೇಡಿಕೆ: ಇಂದು ಸಂಜೆ ಕೇಂದ್ರದ ಜತೆ ರೈತ ಮುಖಂಡರ ಸಭೆ

Date:

Advertisements

ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ(ಫೆ.18) ಕೇಂದ್ರದ ಪ್ರತಿನಿಧಿಗಳ ಜತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ. ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಸಂಘಟನೆಗಳು ಮುಂದಿಟ್ಟಿವೆ. ಕನಿಷ್ಠ ಬೆಂಬಲ ಬೆಲೆ ಖಾತರಿ ಕುರಿತಂತೆ ಸುಗ್ರೀವಾಜ್ಞೆ ಜಾರಿಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ರೈತ ಸಂಘಟನೆಗಳು ಸಭೆಗೆ ಹಾಜರಾಗಲಿವೆ.

ರೈತ ಮುಖಂಡರು ಕೇಂದ್ರ ಸಚಿವರಾದ ಅರ್ಜುನ ಮುಂಡಾ, ಪಿಯೂಶ್ ಗೋಯಲ್ ಮತ್ತು ನಿತ್ಯಾನಂದ ರಾಯ್ ಅವರನ್ನು ಸಂಜೆ 6 ಗಂಟೆಗೆ ಚಂಡೀಗಢದಲ್ಲಿ ಭೇಟಿ ಮಾಡುವರು. ಇದಕ್ಕೂ ಮೊದಲು ನಡೆದ ಮೂರು ಸುತ್ತುಗಳ ಮಾತುಕತೆಗಳಲ್ಲಿ ಹಲವು ವಿಷಯಗಳ ಬಗ್ಗೆ ಪರಸ್ಪರ ಒಮ್ಮತಕ್ಕೆ ಬರಲಾಗಿದ್ದರೂ, ಪ್ರಮುಖ ವಿಷಯಗಳು ಇತ್ಯರ್ಥವಾಗದೇ ಹಾಗೇ ಉಳಿದಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

Advertisements

ನಿನ್ನೆ ರೈತ ಮುಖಂಡರು ಸರ್ಕಾರದ ಮೇಲೆ ಒತ್ತಡ ತಂದು, ಎಂಎಸ್‍ಪಿಗೆ ಕಾನೂನಾತ್ಮಕ ಗ್ಯಾರೆಂಟಿ ನೀಡುವ ಸಲುವಾಗಿ ಸುಗ್ರೀವಾಜ್ಞೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದರು. ಆ ಬಳಿಕ ಅದನ್ನೇ ಕಾನೂನಾಗಿ ಪರಿವರ್ತಿಸುವಂತೆ ಸಲಹೆ ಮುಂದಿಟ್ಟಿವೆ.

ಭಾನುವಾರ ಸಭೆಯ ಬಳಿಕ ನಮಗೆ ಶುಭ ಸುದ್ದಿ ಬರುವ ನಿರೀಕ್ಷೆ ಇದೆ ಎಂದು ರೈತ ಮುಖಂಡರಾದ ಸರ್ವನ್ ಸಿಂಗ್ ಪಂಧೇರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಂಎಸ್‍ಪಿ ಕಾನೂನಿನ ಹೊರತಾಗಿ, ದೆಹಲಿ ಚಲೋ ಚಳವಳಿ ನಡೆಸುತ್ತಿರುವ ರೈತರು, ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು, ಸಂಪೂರ್ಣ ಸಾಲ ಮನ್ನಾ ಮಾಡಬೇಕು, ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಪಿಂಚಣಿ ನೀಡಬೇಕು ಹಾಗೂ ರೈತರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X